ಬೆಂಗಳೂರು: ಟೀಮ್ ಇಂಡಿಯಾದ ಯುವ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೋವಿಡ್-19ನಿಂದ ಚೇತರಿಸಿಕೊಂಡಿದ್ದಾರೆ. ಇಂಗ್ಲೆಂಡ್ಗೆ ಪ್ರವಾಸ ಹೋಗಲಿರುವ ಭಾರತೀಯ ತಂಡದಲ್ಲಿ ಮೀಸಲು ಆಟಗಾರರಾಗಿರುವ ಕೃಷ್ಣ ಮೇ 23ಕ್ಕೆ ತಂಡ ಸೇರಿಕೊಳ್ಳಲಿದ್ದಾರೆ. ಬೆಂಗಳೂರಿನಿಂದ ಮುಂಬೈಗೆ ಮೇ 23ರಂದೇ ಪ್ರಯಾಣಿಸಲಿದ್ದಾರೆ.
ಶ್ರೀಲಂಕಾ ಪ್ರವಾಸಕ್ಕೆ ದ್ರಾವಿಡ್ ಕೋಚ್: ಹಕ್ ಹೇಳಿದ್ದೇನು ಗೊತ್ತಾ?!
'ಪ್ರಸಿದ್ಧ್ ಕೃಷ್ಣ ಸದ್ಯ ಕೋವಿಡ್-19ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಅವರೀಗ ಸದ್ಯ ಬೆಂಗಳೂರಿನ ಅವರ ಮನೆಯಲ್ಲಿದ್ದಾರೆ. ಬೆಂಗಳೂರಿನಿಂದ ಮುಂಬೈಗೆ ಮೇ 23ಕ್ಕೆ ಪ್ರಯಾಣಿಸಲಿದ್ದಾರೆ,' ಎಂದು ಮೂಲವೊಂದು ಐಎಎನ್ಎಸ್ಗೆ ಮಾಹಿತಿ ನೀಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವ ಕೃಷ್ಣ ಈ ಬಾರಿಯ ಸೀಸನ್ ಮುಂದೂಡಲ್ಪಡುತ್ತಲೇ ಕೋವಿಡ್-19ಗೆ ತುತ್ತಾಗಿದ್ದರು. ಬೇರೆ ಬೇರೆ ನಾಲ್ಕು ಫ್ರಾಂಚೈಸಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ 2021ರ ಐಪಿಎಲ್ ಅರ್ಧಕ್ಕೆ ನಿಲ್ಲಿಸಲಾಗಿತ್ತು.
ಆವತ್ತು ಹರ್ಷಲ್ ಪಟೇಲ್ ಸ್ಫೋಟಕ ಬ್ಯಾಟಿಂಗ್ನಿಂದ ಡೆಲ್ಲಿ ಗೆದ್ದಿತ್ತು!
ಇಂಗ್ಲೆಂಡ್ಗೆ ಪ್ರವಾಸ ಹೋಲಿರುವ ವಿರಾಟ್ ಕೊಹ್ಲಿ ಪಡೆ ಅಲ್ಲಿ ನ್ಯೂಜಿಲೆಂಡ್ ವಿರುದ್ಧ ಜೂನ್ 18-22ರ ವರೆಗೆ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಆಡಲಿದೆ. ಬಳಿಕ ಆತಿಥೇಯ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಟೆಸ್ಟ್ ಸರಣಿ ಆಗಸ್ಟ್ 4ರಿಂದ ಆರಂಭಗೊಳ್ಳಲಿದೆ.