
ಐಪಿಎಲ್ ಟೂರ್ನಿ ಸನಿಹದಲ್ಲಿ ಈ ಆಟಗಾರರು ಶ್ರಮವಹಿಸಿ ಆಡುವುದಿಲ್ಲ
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತು ಮಾತನಾಡಿರುವ ಸುನಿಲ್ ಗವಾಸ್ಕರ್ ಐಪಿಎಲ್ ಮೆಗಾ ಹರಾಜು ಮುಕ್ತಾಯಗೊಂಡ ನಂತರ ಹರಾಜಿನಲ್ಲಿ ಯಶಸ್ವಿಯಾಗಿ ಆಯ್ಕೆಯಾದ ಆಟಗಾರರು ಟೂರ್ನಿ ಆರಂಭಕ್ಕೂ ಮುನ್ನ ನಡೆಯುವ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಹೆಚ್ಚು ಶ್ರಮವಹಿಸಿ ಪ್ರದರ್ಶನವನ್ನು ನೀಡುವುದಿಲ್ಲ ಎಂದಿದ್ದಾರೆ.

ಹೆಚ್ಚು ಶ್ರಮ ವಹಿಸಿ ಅಡಿ ಗಾಯಕ್ಕೊಳಗಾದರೆ ಟೂರ್ನಿಯಿಂದ ಹೊರ ಬೀಳಬಹುದಾದ ಭಯ!
ಇನ್ನೂ ಮುಂದುವರಿದು ಮಾತನಾಡಿರುವ ಸುನಿಲ್ ಗವಾಸ್ಕರ್ ಮೆಗಾ ಹರಾಜಿನಲ್ಲಿ ಬಿಕರಿಯಾಗಿರುವ ಆಟಗಾರರು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಗಾಯದ ಸಮಸ್ಯೆಗೊಳಗಾದರೆ ಐಪಿಎಲ್ ಟೂರ್ನಿಯಿಂದ ಹೊರ ಬೀಳಬಹುದಾದ ಸಾಧ್ಯತೆಗಳು ಹೆಚ್ಚಿರುತ್ತವೆ, ಈ ಭಯದಿಂದಲೇ ಆಟಗಾರರು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಶ್ರಮವಹಿಸಿ ಪಾಲ್ಗೊಳ್ಳಲು ಹಿಂದೇಟು ಹಾಕುತ್ತಾರೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಇತ್ತೀಚೆಗಷ್ಟೇ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ತೃತೀಯ ಏಕದಿನ ಪಂದ್ಯಕ್ಕಿಂತ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಕಡೆ ಕ್ರಿಕೆಟ್ ಅಭಿಮಾನಿಗಳು ಹೆಚ್ಚಿನ ಆಸಕ್ತಿಯನ್ನು ತೋರಿಸಿದರು ಎಂದೂ ಸಹ ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅವಕಾಶ ಸಿಗದವರಿಗೆ ಐಪಿಎಲ್ ಉತ್ತಮ ವೇದಿಕೆ
ಇದೇ ವೇಳೆ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸುವ ಅವಕಾಶ ಸಿಗದೇ ಇರುವಂತಹ ಕ್ರಿಕೆಟಿಗರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಉತ್ತಮ ವೇದಿಕೆಯನ್ನು ಕಲ್ಪಿಸಲಿದ್ದು, ತಮ್ಮನ್ನು ತಾವು ಸಾಬೀತು ಪಡಿಸಿಕೊಳ್ಳಲು ಒಳ್ಳೆಯ ಅವಕಾಶ ಎಂದು ಸುನೀಲ್ ಗವಾಸ್ಕರ್ ಹೇಳಿದ್ದಾರೆ. ಟೂರ್ನಿಯಲ್ಲಿ ಹೆಚ್ಚು ತಂಡಗಳಿದ್ದು, ಹಲವಾರು ಪಂದ್ಯಗಳು ನಡೆಯುವುದರಿಂದ ಬಿಕರಿಯಾದ ಬಹುತೇಕ ಎಲ್ಲಾ ಆಟಗಾರರಿಗೂ ಅವಕಾಶ ಸಿಗಲಿದ್ದು ಆಟಗಾರರು ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮನ್ನು ಅಂತರರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡದ ಆಟಗಾರರಿಗೆ ಪ್ರತ್ಯುತ್ತರವನ್ನು ನೀಡಬಹುದು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


Click it and Unblock the Notifications
