ಜಗತ್ತಿನಾದ್ಯಂತದ ಕ್ರಿಕೆಟ್ ಅಭಿಮಾನಿಗಳ ಖುಷಿ ವಿಚಾರವೆನೆಂದರೆ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಂತರ, ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿ ಜೂನ್ನಲ್ಲಿ ಪ್ರಾರಂಭವಾಗಲಿದೆ.
ಇತ್ತೀಚಿನ ವರದಿಗಳ ಪ್ರಕಾರ, ಟಿ20 ವಿಶ್ವಕಪ್ನಲ್ಲಿ ಭಾಗವಹಿಸುವ ತಂಡಗಳು ಮೇ 1ರೊಳಗೆ ತಮ್ಮ ತಂಡಗಳನ್ನು ಅಂತಿಮಗೊಳಿಸಬೇಕಿದೆ. ಅದೇ ರೀತಿ ಮೇ 1ರಂದು ಭಾರತ ತಂಡವನ್ನು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಟಿ20 ವಿಶ್ವಕಪ್ಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ, ಒಂಬತ್ತನೇ ಆವೃತ್ತಿಯ ಐಸಿಸಿ ಟೂರ್ನಮೆಂಟ್ಗೆ ಸಂಭಾವ್ಯ ಭಾರತ ತಂಡ ಹೇಗಿರಲಿದೆ ಎಂಬುದನ್ನು ತಿಳಿಯೋಣ.
ಭಾರತ ತಂಡಕ್ಕೆ ಸಂಬಂಧಿಸಿದಂತೆ, ಅಫ್ಘಾನಿಸ್ತಾನ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಇತ್ತೀಚೆಗೆ ಬಿರುಸಿನ ಶತಕ ಸಿಡಿಸಿದ ರೋಹಿತ್ ಶರ್ಮಾ ಅವರೇ ಟೀಮ್ ಇಂಡಿಯಾ ಮುನ್ನಡೆಸಲಿದ್ದಾರೆ. ಇದನ್ನು ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ.
ರೋಹಿತ್ ಶರ್ಮಾ ಅವರ ಸ್ಥಾನಮಾನ ಮತ್ತು ಬಿಸಿಸಿಐ ನಿಲುವನ್ನು ಪರಿಗಣಿಸಿ, ಅನುಭವಿ ಬ್ಯಾಟರ್ ಬಹುತೇಕ ತಮ್ಮ ಕೊನೆಯ ಐಸಿಸಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಾಯಕರಾಗಲಿದ್ದಾರೆ.

ರೋಹಿತ್ ಶರ್ಮಾ ಅವರೊಂದಿಗೆ ಅಗ್ರಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ತೆರೆಯಲಿದ್ದಾರೆ. ಯುವ ಎಡಗೈ ಬ್ಯಾಟರ್ ಚುಟುಕು ಸ್ವರೂಪದಲ್ಲಿ ಬ್ಯಾಟ್ನೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.
ಇದೇ ವೇಳೆ, ಶುಭ್ಮನ್ ಗಿಲ್ ಅವರು ಟಿ20 ಪಂದ್ಯಗಳಲ್ಲಿ ಕಳಪೆ ಪ್ರದರ್ಶನಗಳ ಕಾರಣದಿಂದಾಗಿ ತಮ್ಮ ಸ್ಥಾನವನ್ನು ಕಳೆದುಕೊಳ್ಳಬಹುದು. ವೆಸ್ಟ್ ಇಂಡೀಸ್ ವಿದೇಶ ಸರಣಿಯ ನಂತರ, ಶುಭ್ಮನ್ ಗಿಲ್ ಆಡಿದ ಎಂಟು ಇನ್ನಿಂಗ್ಸ್ಗಳಲ್ಲಿ 16.625ರ ಸಾಧಾರಣ ಸರಾಸರಿಯಲ್ಲಿ ಕೇವಲ 133 ರನ್ಗಳನ್ನು ಗಳಿಸಿದ್ದಾರೆ.
ಮುಂಬರುವ 2024ರ ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದರೆ, ಪಂಜಾಬ್ ಮೂಲದ ಬ್ಯಾಟರ್ ಭಾರತ ತಂಡಕ್ಕೆ ವೈಲ್ಡ್ ಕಾರ್ಡ್ ಪ್ರವೇಶವನ್ನು ಪಡೆಯುವ ಸಾಧ್ಯತೆ ಇದೆ.
ಇನ್ನು ಪ್ರಮುಖ ಬ್ಯಾಟರ್ಗಳಾದ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಗ್ ಅವರು ಭಾರತ ತಂಡದ ಆಡುವ 11ರ ಬಳಗದಲ್ಲಿ ನಿಶ್ಚಿತ ಆಟಗಾರರಾಗಿರುತ್ತಾರೆ.
ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿರುವ ಹಾರ್ದಿಕ್ ಪಾಂಡ್ಯ, ಭಾರತ ತಂಡದ ಪ್ರಮುಖ ವೇಗದ ಬೌಲಿಂಗ್ ಆಲ್ರೌಂಡರ್ ಆಗಿ ಕೆರಿಬಿಯನ್ ನಾಡಿಗೆ ಪ್ರಯಾಣಿಸಲಿದ್ದಾರೆ. ಇನ್ನು ಪ್ರಮುಖ ಬ್ಯಾಟರ್ ಕೆಎಲ್ ರಾಹುಲ್ ಆಯ್ಕೆಯು ಐಪಿಎಲ್ನಲ್ಲಿ ಅವರ ಪ್ರದರ್ಶನ ಮತ್ತು ಫಿಟ್ನೆಸ್ ಅನ್ನು ಅವಲಂಬಿಸಿರುತ್ತದೆ.
ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಪ್ರಮುಖ ವೇಗಿಗಳಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. ಕುಲದೀಪ್ ಯಾದವ್ ಮತ್ತು ರವಿ ಬಿಷ್ಣೋಯ್ ಮಾರಕ ಜೋಡಿ ಅಕ್ಷರ್ ಪಟೇಲ್ ಜೊತೆಗೆ ಸ್ಪಿನ್ ವಿಭಾಗವನ್ನು ಮುನ್ನಡೆಸಲಿದ್ದಾರೆ.
ಇನ್ನು ರುತುರಾಜ್ ಗಾಯಕ್ವಾಡ್ ಅವರನ್ನು ಬ್ಯಾಕಪ್ ಆರಂಭಿಕ ಬ್ಯಾಟರ್ ಆಗಿ ಆಯ್ಕೆ ಮಾಡಬಹುದು. ಅಲ್ಲದೆ, ಶಿವಂ ದುಬೆ ಮತ್ತು ಅರ್ಶ್ದೀಪ್ ಸಿಂಗ್ ಅವರು ಟಿ20 ಪಂದ್ಯಗಳಲ್ಲಿ ಇತ್ತೀಚಿನ ಅತ್ಯುತ್ತಮ ಪ್ರದರ್ಶನದಿಂದಾಗಿ ಯುಎಸ್ಎ ವಿಮಾನ ಟಿಕೆಟ್ ಪಡೆಯುವ ಸಾಧ್ಯತೆಯಿದೆ.
ವಿಕೆಟ್ ಕೀಪರ್ ಸ್ಥಾನಕ್ಕೆ ಜಿತೇಶ್ ಶರ್ಮಾ ಆಯ್ಕೆಯಾಗುವ ಸಾಧ್ಯತೆ ಇದ್ದು, ಹೆಚ್ಚುವರಿ ಬ್ಯಾಟರ್ ಸ್ಲಾಟ್ಗಾಗಿ ತಿಲಕ್ ವರ್ಮಾ ಮತ್ತು ಸಂಜು ಸ್ಯಾಮ್ಸನ್ ನಡುವೆ ಕಠಿಣ ಸ್ಪರ್ಧೆ ಏರ್ಪಡಲಿದೆ. ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ವಿಕೆಟ್ ಕೀಪಿಂಗ್ ಕೌಶಲ್ಯಕ್ಕಾಗಿ ಸಂಜು ಸ್ಯಾಮ್ಸನ್ಗೆ ಆದ್ಯತೆ ನೀಡುವ ಸಾಧ್ಯತೆಯಿದೆ.
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಕೆಎಲ್ ರಾಹುಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್/ತಿಲಕ್ ವರ್ಮಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್, ರುತುರಾಜ್ ಗಾಯಕ್ವಾಡ್, ಶಿವಂ ದುಬೆ, ರವಿ ಬಿಷ್ಣೋಯ್.