ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಜಿ ಸಿದ್ಧಾರ್ಥ ಸಾವಿನ ಬಳಿಕ ಭಾವನಾತ್ಮಕ ಸಂದೇಶ ಬರೆದ ಆರ್ ಅಶ್ವಿನ್

R Ashwin posts heartfelt message after death of CCD owner VG Siddhartha

ಬೆಂಗಳೂರು, ಆಗಸ್ಟ್ 1: ಕೆಫೆ ಕಾಫೀ ಡೇ(ಸಿಸಿಡಿ)ಯಲ್ಲಿ ತಾನು ಕಳೆದ ದಿನಗಳನ್ನು ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸ್ಮಿರಿಸಿಕೊಂಡಿದ್ದಾರೆ. ಸಿಸಿಡಿ ಸ್ಥಾಪಕ-ಮಾಲಕ ವಿಜಿ ಸಿದ್ಧಾರ್ಥ ಸಾವಿನ ಬಳಿಕ ಅಶ್ವಿನ್ ಟ್ವಿಟರ್‌ನಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿಕೊಂಡಿದ್ದಾರೆ.

ಎಂಎಸ್ ಧೋನಿ ವಿಕೆಟ್ ಕೀಪಿಂಗ್‌ ಬಗ್ಗೆ ಕಾಮೆಂಟ್ ಮಾಡಿದ ಎಂಎಸ್‌ಕೆ ಪ್ರಸಾದ್ಎಂಎಸ್ ಧೋನಿ ವಿಕೆಟ್ ಕೀಪಿಂಗ್‌ ಬಗ್ಗೆ ಕಾಮೆಂಟ್ ಮಾಡಿದ ಎಂಎಸ್‌ಕೆ ಪ್ರಸಾದ್

ಸಿಸಿಡಿ ಮೂಲಕ ಪ್ರಚಲಿತರಾಗಿದ್ದ ಭಾರತದ ಉದ್ಯಮಿ, ಮೂಲತಃ ಕರ್ನಾಟಕದ ಚಿಕ್ಕಮಗಳೂರಿನವರಾದ ವಿಜಿ ಸಿದ್ಧಾರ್ಥ ಇತ್ತೀಚೆಗೆ ಸಾವನ್ನಪ್ಪಿದ್ದರು. ಅವರ ಮೃತದೇಶ ಮಂಗಳೂರಿನ ಹೊಯ್ಗೆ ಬಝಾರ್ ಸಮೀಪ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿತ್ತು.

ಬುಧವಾರ (ಜುಲೈ 31) ಸಿಸಿಡಿ ನೆನಪಿಸಿಕೊಂಡು ಟ್ವೀಟ್ ಮಾಡಿರುವ ಅಶ್ವಿನ್, 'ಸ್ನೇಹಿತರೊಂದಿಗೆ ಹೊರಗೆ ಹೋಗಿ ಒಂದು ಕಪ್ ಕಾಫಿ ಕುಡಿದ ನನ್ನ ಮೊದಲ ನೆನಪುಗಳು ಕೆಫೆ ಕಾಫಿ ಡೇ ಮೂಲಕ ಮಾತ್ರ ಶುರುವಾಗುತ್ತಿದ್ದವು. ಬೇಸರದ ಸುದ್ದಿಯಿದು' ಎಂದು ಬರೆದುಕೊಂಡಿದ್ದಾರೆ.

ಟೀಮ್‌ ಇಂಡಿಯಾ ಕೋಚ್‌ ಆಯ್ಕೆ ಬಗ್ಗೆ ಕೊಹ್ಲಿಗೆ ಬೆಂಬಲಿಸಿದ ಗಂಗೂಲಿಟೀಮ್‌ ಇಂಡಿಯಾ ಕೋಚ್‌ ಆಯ್ಕೆ ಬಗ್ಗೆ ಕೊಹ್ಲಿಗೆ ಬೆಂಬಲಿಸಿದ ಗಂಗೂಲಿ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಂಎಮ್ ಕೃಷ್ಣ ಅವರ ಅಳಿಯ ಆಗಿದ್ದ 58ರ ಹರೆಯದ ಸಿದ್ಧಾರ್ಥ, ಸೋಮವಾರ (ಜುಲೈ 29) ಸಂಜೆ ಮಂಗಳೂರಿನಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಬುಧವಾರ (ಜುಲೈ 31) ಬೆಳಗ್ಗೆ ಪತ್ತೆಯಾಗಿತ್ತು.

Story first published: Friday, August 2, 2019, 13:37 [IST]
Other articles published on Aug 2, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X