ಇದು ಆರಂಭವಷ್ಟೇ ಅವಕಾಶ ಸಿಕ್ಕರೆ ಸರಿಯಾಗುತ್ತೆ
ನಾಯಕನಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿರುವ ಕೆಎಲ್ ರಾಹುಲ್ ಕುರಿತು ಮಾತನಾಡಿರುವ ರಾಹುಲ್ ದ್ರಾವಿಡ್ ಇದು ಆತನ ನಾಯಕತ್ವದ ಆರಂಭದ ದಿನಗಳಷ್ಟೇ ಹಾಗೂ ಆತ ಅದನ್ನು ಉತ್ತಮವಾಗಿ ನಿರ್ವಹಿಸಿದ್ದಾನೆ ಎಂದು ರಾಹುಲ್ ದ್ರಾವಿಡ್ ಕೆಎಲ್ ರಾಹುಲ್ ಪರ ಬ್ಯಾಟ್ ಬೀಸಿದ್ದಾರೆ. ಹಾಗೂ ಮತ್ತಷ್ಟು ಪಂದ್ಯಗಳಲ್ಲಿ ನಾಯಕತ್ವದ ಜವಾಬ್ದಾರಿಯನ್ನು ಕೆಎಲ್ ರಾಹುಲ್ ಅವರಿಗೆ ನೀಡಿದರೆ ಆತ ಓರ್ವ ಉತ್ತಮ ನಾಯಕನಾಗಲಿದ್ದಾನೆ ಎಂದು ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.
ಉತ್ತಮವಾಗಿ ಜವಾಬ್ದಾರಿ ನಿರ್ವಹಿಸಿದರು ಎಂದ ರಾಹುಲ್
ಇನ್ನೂ ಮುಂದುವರಿದು ಮಾತನಾಡಿರುವ ರಾಹುಲ್ ದ್ರಾವಿಡ್ ನಾಯಕ ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಜವಾಬ್ದಾರಿಯನ್ನು ನಿರ್ವಹಿಸಿದರು ಎಂದಿದ್ದಾರೆ. ಹಾಗೂ ಕೆಟ್ಟ ಫಲಿತಾಂಶದಲ್ಲಿ ನಾಯಕನಾಗಿ ಪ್ರಶ್ನೆಗಳನ್ನು ಎದುರಿಸುವುದು ಸುಲಭದ ಮಾತಲ್ಲ ಎಂದು ದ್ರಾವಿಡ್ ಹೇಳಿದ್ದಾರೆ.
ಈ ಸರಣಿಯಿಂದ ಬುದ್ಧಿ ಕಲಿಯಬೇಕಿದೆ
ಹಾಗೂ ಅಂತಿಮವಾಗಿ ದಕ್ಷಿಣ ಆಫ್ರಿಕಾ ಪ್ರವಾಸದ ಕುರಿತು ಮಾತನಾಡಿರುವ ರಾಹುಲ್ ದ್ರಾವಿಡ್ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಟೀಮ್ ಇಂಡಿಯಾ ಸೋತಿರುವುದು ಕಣ್ಣನ್ನು ತೆರೆಸಿದೆ ಎಂದಿದ್ದಾರೆ. ಈ ಸರಣಿಯ ಎಲ್ಲಾ ತಪ್ಪುಗಳನ್ನು ಮುಂದಿನ ಸರಣಿಗಳಲ್ಲಿ ತಿದ್ದುಕೊಂಡು ಟೀಮ್ ಇಂಡಿಯಾ ಕಮ್ ಬ್ಯಾಕ್ ಮಾಡಲಿದೆ ಎಂದು ದ್ರಾವಿಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.