ನವದೆಹಲಿ, ಜೂನ್ 01: ಸುಪ್ರೀಂಕೋರ್ಟಿನಿಂದ ನೇಮಿಸಲಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಆಡಳಿತಗಾರರ ಸಮಿತಿಯ (ಸಿಒಎ) ಸದಸ್ಯ ಸ್ಥಾನಕ್ಕೆ ಖ್ಯಾತ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರು ರಾಜಿನಾಮೆ ಸಲ್ಲಿಸಿದ್ದಾರೆ.
ಸಿಒಎ ಸಮಿತಿಯು ನಾಲ್ವರು ಸದಸ್ಯರನ್ನು ಒಳಗೊಂಡಿದೆ. ಸುಪ್ರೀಂ ಕೋರ್ಟ್ 2017ರ ಜನವರಿ 30 ಸಿಒಎ ಸಮಿತಿಯನ್ನು ರಚನೆ ಮಾಡಿತ್ತು. ವಿನೋದ್ ರಾಯ್ ಅವರು ಸಿಒಎ ಮುಖ್ಯಸ್ಯರಾಗಿದ್ದಾರೆ.

ಈ ಸಮಿತಿಯ ಸದಸ್ಯರಾಗಿದ್ದ ಬೆಂಗಳೂರು ಮೂಲದ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರು, ವಿನೋದ್ ರಾಯ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.