ಶುಬ್ಮನ್ ಗಿಲ್
ಈ ಬಾರಿಯ ರಣಜಿ ಟೂರ್ನಿಯ ನಾಕೌಟ್ ಹಂತದಲ್ಲಿ ಆಡುತ್ತಿರುವವ ಪ್ರಖ್ಯಾತ ಆಟಗಾರರ ಪೈಕಿ ಶುಬ್ಮನ್ ಗಿಲ್ ಕೂಡ ಒಬ್ಬರು. ಈ ನಾಕೌಟ್ನಲ್ಲಿ ಆಡುತ್ತಿರುವ ಆಟಗಾರರ ಪೈಲಿ ಮುಂದಿನ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ಏಕೈಕ ಆಟಗಾರನಾಗಿದ್ದಾರೆ ಶುಬ್ಮನ್ ಗಿಲ್. ಭಾರತ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿರುವ ಗಿಲ್ ಇತ್ತೀಚೆಗಷ್ಟೇ ಅಂತ್ಯವಾಗಿರುವ ಐಪಿಎಲ್ನಲ್ಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡದ ಭಾಗವಾಗಿದ್ದರು.
ಮಯಾಂಕ್ ಅಗರ್ವಾಲ್
ಕರ್ನಾಟಕ ತಂಡದ ಪ್ರಮುಖ ಆಟಗಾರ ಮಯಾಂಕ್ ಅಗರ್ವಾಲ್ ಭಾರತ ಟೆಸ್ಟ್ ತಂಡದ ಪ್ರಮುಖ ಸದಸ್ಯನಾಗಿ ಗುರುತಿಸಿಕೊಂಡಿರುವ ಆಟಗಾರ. ಆದರೆ ಇತ್ತಚೆಗಷ್ಟೇ ಅವರು ಭಾರತ ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ. ವಿದೇಶಿ ಮೈದಾನಗಳಲ್ಲಿ ಮಯಾಂಕ್ ಅಗರ್ವಾಲ್ ರನ್ ಗಳಿಸಲು ಒದ್ದಾಟ ನಡೆಸಿದ್ದರು. ಜುಲೈ ತಿಂಗಳಿನಲ್ಲಿ ಭಾರತ ಇಂಗ್ಲೆಂಡ್ಗೆ ಪ್ರವಾಸ ಕೈಗೊಂಡು ಒಂದು ಟೆಸ್ಟ ಪಂದ್ಯವನ್ನು ಆಡಲಿದೆ. ಒಂದೇ ಪಂದ್ಯವಾಗಿರುವ ಕಾರಣ ಮಯಾಂಕ್ಗೆ ಈ ಪ್ರವಾಸದಲ್ಲಿ ಅವಕಾಶ ದೊರೆತಿಲ್ಲ. ಉತ್ತರ ಪ್ರದೇಶದ ವಿರುದ್ಧ ಕರ್ನಾಟಕ ಕ್ವಾರ್ಟರ್ಫೈನಲ್ ಪಂದ್ಯವನ್ನು ಆಡುತ್ತಿದ್ದು ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಮಯಾಂಕ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ.
ಪೃಥ್ವಿ ಶಾ
ಈ ಬಾರಿಯ ರಣಜಿ ನಾಕೌಟ್ನಲ್ಲಿ ಭಾಗಿಯಾಗಿರುವ ಮತ್ತೋರ್ವ ಜನಪ್ರಿಯ ಆಟಗಾರ ಪೃಥ್ವಿ ಶಾ. ದೇಶೀಯ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನಿಡುತ್ತಿದ್ದರೂ ಪೃರ್ಥವಿ ಶಾಗೆ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶಗಳು ದೊರೆಯುತ್ತಿಲ್ಲ. ರಣಜಿಯಲ್ಲಿ ಮುಂಬೈ ತಂಡವನ್ನು ಶಾ ಮುನ್ನಡೆಸುತ್ತಿದ್ದಾರೆ. ಕ್ವಾರ್ಟರ್ಫೈನಲ್ನ ಮೊದಲ ಇನ್ನಿಂಗ್ಸ್ನಲ್ಲಿ ಪೃಥ್ಬಿ ಶಾ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದರೂ ತಂಡದಿಂದ ಉತ್ತಮ ಪ್ರದರ್ಶನ ವ್ಯಕ್ತವಾಗುತ್ತಿದೆ.
ಮನೀಶ್ ಪಾಂಡೆ
ಕರ್ನಾಟಕ ಕಂಡ ಪ್ರತಿಭಾನ್ವಿತ ಆಟಗಾರರ ಪೈಕಿ ಮನೀಶ್ ಪಾಂಡೆ ಕೂಡ ಒಬ್ಬರು. ಆದರೆ ಪ್ರಸ್ತುತ ಭಾರತದ ಎಲ್ಲಾ ಮಾದರಿಯ ತಂಡದಿಂದಲೂ ಮನೀಶ್ ಪಾಂಡೆ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಐಪಿಎಲ್ನಲ್ಲಿಯೂ ಮಂಕಾಗಿದ್ದು ಆಡುವ ಬಳಗದಲ್ಲಿ ಸ್ಥಾನ ಪಡೆಯಲು ಪರದಾಡುತ್ತಿದ್ದಾರೆ. ಹೀಗಾಗಿ ಈ ಬಾರಿಯ ರಣಜಿ ಆವೃತ್ತಿ ಮನೀಶ್ ಒಪಾಂಡೆಗೆ ಬಹಳ ಪ್ರಮುಖವಾಗಿದೆ. ಕರ್ನಾಟಕ ತಂಡದ ನಾಯಕನಾಗಿರುವ ಮನೀಶ್ ಮೊದಲ ಇನ್ನಿಂಗ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದಾರೆ. ಕರ್ನಾಟಕ ತಂಡದ ಕ್ವಾರ್ಟರ್ಫೈನಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ವೈಯಕ್ತಿಕವಾಗಿಯೂ ಮನೀಶ್ ಪಾಂಡೆ ಮುಂದಿನ ಇನ್ನಿಂಗ್ಸ್ ಹಾಗೂ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡುವ ನಿರೀಕ್ಷೆಯಿದೆ.