
ನಾಗ್ಪುರ, ಫೆಬ್ರವರಿ 5: ನಾಗ್ಲುರದಲ್ಲಿರುವ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತರುವ ರಣಜಿ ಟ್ರೋಫಿ ಫೈನಲ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ನಲ್ಲಿ ಸೌರಾಷ್ಟ್ರ ವಿರುದ್ಧ ವಿದರ್ಭ 60 ರನ್ ಮುನ್ನಡೆ ಸಾಧಿಸಿದೆ. ಮಂಗಳವಾರ (ಫೆಬ್ರವರಿ 5) ದಿನದಾಟದ ಅಂತ್ಯಕ್ಕೆ ವಿದರ್ಭ 31 ಓವರ್ಗಳಲ್ಲಿ 2 ವಿಕೆಟ್ ಕಳೆದು 55 ರನ್ ಗಳಿಸಿತ್ತು.
ಟಾಸ್ ಗೆದ್ದು ಬ್ಯಾಟಿಂಗ್ಗೆ ಇಳಿದ ಆತಿಥೇಯ ವಿದರ್ಭಕ್ಕೆ ಆರಂಭಿಕ ಇನ್ನಿಂಗ್ಸ್ನಲ್ಲಿ ಅಕ್ಷಯ್ ಕಾರ್ನೇವಾರ್ 73, ಅಕ್ಷಯ್ ವಾಡೇಕರ್ 45 ರಸ್ ಸೇರಿಸಿ ಬಲ ತುಂಬಿದರು. ತಂಡ 120.2 ಓವರ್ಗಳಲ್ಲಿ 312 ರನ್ ಗಳಿಸಿತ್ತು. ಸ್ನೆಲ್ ಪಟೇಲ್ 102, ನಾಯಕ ಜಯದೇವ್ ಉನಾದ್ಕತ್ 46 ರನ್ ನೆರವಿನಿಂದ ಸೌರಾಷ್ಟ್ರ 117 ಓವರ್ಗಳಲ್ಲಿ 307 ರನ್ ಕಲೆ ಹಾಕಿತು.
ದ್ವಿತೀಯ ಇನ್ನಿಂಗ್ಸ್ನಲ್ಲಿ ವಿದರ್ಭ ಆರಂಭಿಕ ವಿಕೆಟ್ಗಳನ್ನು ಬೇಗನೆ ಕಳೆದುಕೊಂಡಿದೆ. ನಾಯಕ ಫೈಜಲ್ ಫಜಲ್ 10, ಸಂಜಯ್ ರಾಮಸ್ವಾಮಿ 16 ರನ್ನೊಂದಿಗೆ ನಿರ್ಗಮಿಸಿದ್ದಾರೆ. ಗಣೇಶ್ ಸತೀಶ್ (24) ಮತ್ತು ವಾಸೀಸ್ ಜಾಫರ್ (5) ಕ್ರೀಸ್ನಲ್ಲಿದ್ದಾರೆ.