For Quick Alerts
ALLOW NOTIFICATIONS  
For Daily Alerts
 

Ranji Trophy: ಭಾರತ ತಂಡದಿಂದ ಕೈಬಿಟ್ಟ ಬಳಿಕ ಮುಂಬೈ ತಂಡಕ್ಕೆ ಮರಳಿದ ಶ್ರೇಯಸ್; ಕೆಕೆಆರ್‌ಗೆ ಢವಢವ

2024ರ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಮುಂಬೈ ತಂಡದ ಪರ ಕಾಣಿಸಿಕೊಳ್ಳಲು ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಸಜ್ಜಾಗಿದ್ದಾರೆ.

ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಸರಣಿಗಾಗಿ ಭಾರತ ಟಿ20 ತಂಡದಿಂದ ಹೊರಬಿದ್ದ 29 ವರ್ಷದ ಶ್ರೇಯಸ್ ಅಯ್ಯರ್, ಜನವರಿ 12ರಿಂದ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ ಮೈದಾನದಲ್ಲಿ ಆಂಧ್ರಪ್ರದೇಶ ವಿರುದ್ಧ ಮುಂಬೈ ತಂಡಕ್ಕೆ ಆಡಲಿದ್ದಾರೆ.

Ranji Trophy 2024: Shreyas Iyer Returned To Mumbai Team After Dropped From Indian Team

ಇತ್ತೀಚಿಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿನ ಕಳಪೆ ಪ್ರದರ್ಶನದ ನಂತರ, ಶ್ರೇಯಸ್ ಅಯ್ಯರ್ ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಆಡಲು ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ಬಂದಿದ್ದವು.

ಶ್ರೇಯಸ್ ಅಯ್ಯರ್ ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚುರಿಯನ್‌ನ ಮೊದಲ ಟೆಸ್ಟ್ ಪಂದ್ಯದಲ್ಲಿ 31, 6 ರನ್ ಮತ್ತು ಕೇಪ್ ಟೌನ್‌ನ ಎರಡನೇ ಪಂದ್ಯದಲ್ಲಿ 0 ಮತ್ತು 4 ರನ್ ಗಳಿಸಿ ನಿರಾಸೆ ಮೂಡಿಸಿದರು.

ಇದೀಗ ಮುಂಬೈ ತಂಡಕ್ಕೆ ಆಡುವ ಮೂಲಕ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಸಾಬೀತುಪಡಿಸಬಹುದು.

ಭಾರತ ತಂಡವು ಜನವರಿ 25ರಿಂದ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ನಿರ್ಣಾಯಕ ಸರಣಿಯನ್ನು ಡ್ರಾ ಮಾಡಿದ ನಂತರ, ಪ್ರವಾಸಿ ಇಂಗ್ಲೆಂಡ್ ವಿರುದ್ಧ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತಾರೆ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಉತ್ತಮಗೊಳಿಸಲು ಎದುರು ನೋಡಲಿದ್ದಾರೆ.

ಇಂಗ್ಲೆಂಡ್ ಲಯನ್ಸ್ (ಎ ತಂಡ) ವಿರುದ್ಧ ಆಡಲು ತುಷಾರ್ ದೇಶಪಾಂಡೆ ಜೊತೆಗೆ ಭಾರತ ಎ ತಂಡವನ್ನು ಪ್ರತಿನಿಧಿಸಲು ಅಹಮದಾಬಾದ್‌ಗೆ ತೆರಳಿರುವ ಮಧ್ಯಮ ಕ್ರಮಾಂಕದ ಬ್ಯಾಟರ್ ಸರ್ಫರಾಜ್ ಖಾನ್ ಬದಲಿಗೆ ಶ್ರೇಯಸ್ ಅಯ್ಯರ್ ಮುಂಬೈ ತಂಡಕ್ಕೆ ಬರಲಿದ್ದಾರೆ.

ಮುಂಬೈ ತನ್ನ ಗೆಲುವಿನ ಓಟವನ್ನು ಜೀವಂತವಾಗಿರಿಸುವ ಗುರಿ

ಪ್ರಸಕ್ತ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡ ತನ್ನ ಹಿಂದಿನ ಪಂದ್ಯದಲ್ಲಿ ಅದ್ಭುತ ಗೆಲುವಿನ ನಂತರ, ಆಂಧ್ರಪ್ರದೇಶ ವಿರುದ್ಧ ತನ್ನ ಮುಂದಿನ ಹಣಾಹಣಿಗೆ ಬರಲಿದೆ.

ಮುಂಬೈ ತಮ್ಮ ಹಿಂದಿನ ಪಂದ್ಯದಲ್ಲಿ ಬಿಹಾರ ತಂಡವನ್ನು ಸೋಲಿಸಿದರು ಮತ್ತು ಆಟದಲ್ಲಿ ಪ್ರಾಬಲ್ಯ ಸಾಧಿಸಿದರು. ಆ ಪಂದ್ಯವನ್ನು ಇನ್ನಿಂಗ್ಸ್ ಮತ್ತು 51 ರನ್‌ಗಳಿಂದ ಗೆಲುವು ಸಾಧಿಸಿತು.

ಮುಂಬೈ ತಂಡವು ಆಂಧ್ರಪ್ರದೇಶ ವಿರುದ್ಧದ ಪಂದ್ಯಕ್ಕೆ ಆತ್ಮವಿಶ್ವಾಸದಿಂದ ಬರಲಿದೆ ಮತ್ತು ಶ್ರೇಯಸ್ ಅಯ್ಯರ್ ಅವರ ಸೇರ್ಪಡೆಯು ಪಂದ್ಯಾವಳಿಯಲ್ಲಿ ಮುಂಬೈ ತಂಡಕ್ಕೆ ದೊಡ್ಡ ಉತ್ಸಾಹ ನೀಡಲಿದೆ.

ರಣಜಿ ಟ್ರೋಫಿಗೆ ಮುಂಬೈ ಪರಿಷ್ಕೃತ ತಂಡ

ಅಜಿಂಕ್ಯ ರಹಾನೆ (ನಾಯಕ), ಶ್ರೇಯಸ್ ಅಯ್ಯರ್, ಜೇ ಬಿಸ್ತಾ, ಭೂಪೇನ್ ಲಾಲ್ವಾನಿ, ಅಮೋಘ್ ಭಟ್ಕಳ್, ಸುವೇದ್ ಪಾರ್ಕರ್, ಪ್ರಸಾದ್ ಪವಾರ್ (ವಿಕೆಟ್ ಕೀಪರ್), ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಅಥರ್ವ ಅಂಕೋಲೆಕರ್, ಮೋಹಿತ್ ಅವಸ್ತಿ, ಧವಲ್ ಕುಲಕರ್ಣಿ, ರಾಯ್‌ಸ್ಟಾನ್ ಡಯಾಸ್, ಸಿಲ್ವೆಸ್ಟರ್ ಡಿಸೋಜಾ.

Story first published: Tuesday, January 9, 2024, 22:20 [IST]
Other articles published on Jan 9, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+