ಗಂಗೂಲಿ ವಿರುದ್ಧ ನೇರವಾಗಿ ಕಿಡಿಕಾರಿದ ರವಿಶಾಸ್ತ್ರಿ
ಮುಂಬೈ, ಜೂನ್ 29: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಿರ್ದೇಶಕ ರವಿಶಾಸ್ತ್ರಿ ಅವರು ನೇರವಾಗಿ ಮಾಜಿ ಕ್ರಿಕೆಟರ್ ಸೌರವ್ ಗಂಗೂಲಿ ವಿರುದ್ಧ ಕಿಡಿಕಾರಿದ್ದಾರೆ. ರವಿಶಾಸ್ತ್ರಿ ಅವರಿಗೆ ಟೀಂ ಇಂಡಿಯಾ ಕೋಚ್ ಹುದ್ದೆ ತಪ್ಪಿಸಲು ಗಂಗೂಲಿಯೇ ಕಾರಣ ಎಂಬ ಸುದ್ದಿ ಹಬ್ಬಿದೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸ್ತ್ರಿ, ಗಂಗೂಲಿ ನಡೆ ಅಗೌರವದಿಂದ ಕೂಡಿದೆ, ಇನ್ಮುಂದೆ ಈ ರೀತಿ ನಡೆದುಕೊಳ್ಳುವುದಿಲ್ಲ ಎಂಬ ಭರವಸೆ ಇದೆ ಎಂದಿದ್ದಾರೆ.
ಬ್ಯಾಂಕಾಕ್ ಪ್ರವಾಸದಿಂದ ಹಿಂದಿರುಗಿ ಬಂದಿರುವ ರವಿಶಾಸ್ತ್ರಿ ಅವರು ಸುದ್ದಿಗಾರರ ಜತೆ ಮಾತನಾಡುತ್ತಾ, ತಂಡದ ನಾಯಕನ ಆಯ್ಕೆ ಪ್ರಕ್ರಿಯೆ ಮತ್ತು ಕೋಚ್ ಆಗುವ ಅವಕಾಶ ಕೈತಪ್ಪಿದ್ದರ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.[ಟೀಂ ಇಂಡಿಯಾ ಕೋಚ್ ಆಗಿ ಅನಿಲ್ ಕುಂಬ್ಳೆ ಆಯ್ಕೆ]

ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿತ್ತೇ? ಎಂಬ ಪ್ರಶ್ನೆಗೆ, ಸಮಿತಿ ಎದುರು ಸಂದರ್ಶನ ಕೊಡುವುದಷ್ಟೇ ನನ್ನ ಕೆಲಸ. ಒಳಗೇನಾಯಿತೋ ಯಾರಿಗೆ ಗೊತ್ತು ಎಂದರು. 18 ತಿಂಗಳು ತಂಡವನ್ನು ಮುನ್ನಡೆಸಿದ್ದೇನೆ. ಟೆಸ್ಟ್ ಪಂದ್ಯದಲ್ಲಿ ನಮ್ಮದೇ ಶ್ರೇಷ್ಠ ತಂಡವೆಂದು ಪರಿಗಣಿತವಾಗಿದೆ. ನಮ್ಮ ತಂಡದ ಈ ಸಾಧನೆಗಳು ನನಗೆ ಖುಷಿ ನೀಡಿವೆ.[ಕೊಹ್ಲಿ ನಾಯಕತ್ವದಲ್ಲಿ ಧೋನಿ ಆಡಿದರೆ ತಪ್ಪೇನಿಲ್ಲ: ಶಾಸ್ತ್ರಿ]
ಆದರೆ, ನನ್ನ ಸಂದರ್ಶನದ ದಿನ ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ಅವರು ಗೈರು ಹಾಜರಾಗಿದ್ದು ಒಂಚೂರು ಹಿಡಿಸಲಿಲ್ಲ. ಈ ರೀತಿ ಅಗೌರವದಿಂದ ನಡೆದುಕೊಳ್ಳುತ್ತಾರೆ ಎಂದುಕೊಂಡಿರಲಿಲ್ಲ ಎಂದು ಶಾಸ್ತ್ರಿ ಬೇಸರ ವ್ಯಕ್ತಪಡಿಸಿದ್ದಾರೆ.
ಅನಿಲ್ ಕುಂಬ್ಳೆ ಸರ್ವಕಾಲಿಕ ಶ್ರೇಷ್ಠ ಕ್ರಿಕೆಟರ್ ನಿಜ, ಆದರೆ, ಈಗ ಶ್ರೇಷ್ಠ ತಂಡವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿದ್ದಾರೆ ಎಂದಿದ್ದಾರೆ. (ಐಎಎನ್ಎಸ್)
Story first published: Wednesday, January 3, 2018, 10:04 [IST]
Other articles published on Jan 3, 2018
Read in English: Ravi Shastri lashes out at Ganguly
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications