For Quick Alerts
ALLOW NOTIFICATIONS  
For Daily Alerts
 

India Cricket T20 Captain: ಈತನನ್ನು ಮುಂದಿನ ಟಿ20 ನಾಯಕ ಎಂದು ಆಯ್ಕೆ ಮಾಡಿದರೆ ತಪ್ಪೇನಿಲ್ಲ: ರವಿ ಶಾಸ್ತ್ರಿ

Ravi Shastri said No harm in identifying a new T20 Captain for Team India

ಟೀಮ್ ಇಂಡಿಯಾ ಆದಷ್ಟು ಬೇಗನೆ ಟಿ20 ಮಾದರಿಗೆ ಯುವ ನಾಯಕನನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯಗಳು ವಿಶ್ವಕಪ್‌ ಸೋಲಿನ ಬಳಿಕ ಜೋರಾಗಿ ಕೇಳಿಬರುತ್ತಿದೆ. ಇದೀಗ ಟೀಮ್ ಇಂಡಿಯಾದ ಮಾಜಿ ಕೋಚ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲೂ ಓರ್ವ ಆಟಗಾರನ ಬಗ್ಗೆ ಭಾರೀ ವಿಶ್ವಾಸ ವ್ಯಕ್ತಪಡಿಸಿರುವ ರವಿ ಶಾಸ್ತ್ರಿ ಆತನನ್ನು ರೋಹಿತ್ ಶರ್ಮಾ ಬಳಿಕ ಟಿ20 ನಾಯಕನನ್ನಾಗಿ ನೇಮಿಸಬೇಕು ಎಂದಿದ್ದಾರೆ.

ಭಾರತದ ಮಾಜಿ ಕ್ರಿಕೆಟಿಗ ಹಾಗೂ ಮಾಜಿ ಕೊಚ್ ರವಿ ಶಾಸ್ತ್ರಿ ಯುವ ಆಟಗಾರ ಹಾರ್ದಿಕ್ ಪಾಂಡ್ಯ ಬಗ್ಗೆ ಮಾತನಾಡಿದ್ದು ಟೀಮ್ ಇಂಡಿಯಾದ ಟಿ20 ಮಾದರಿಯ ನಾಯಕನನ್ನಾಗಿ ಅವರನ್ನು ಆಯ್ಕೆ ಮಾಡುವಂತೆ ಸಲಹೆ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯಾ ಅವರನ್ನು ಭಾರತದ ಮುಂದಿನ ನಾಯಕ ಎಂದು ಆಯ್ಕೆ ಮಾಡಿಟ್ಟುಕೊಂಡರೆ ತಪ್ಪೇನಿಲ್ಲ ಎಂದಿದ್ದಾರೆ ರವಿ ಶಾಸ್ತ್ರಿ.

ನ್ಯೂಜಿಲೆಂಡ್ ವಿರುದ್ಧ ಸರಣಿಗೆ ಹಾರ್ದಿಕ್ ನಾಯಕ

ನ್ಯೂಜಿಲೆಂಡ್ ವಿರುದ್ಧ ಸರಣಿಗೆ ಹಾರ್ದಿಕ್ ನಾಯಕ

ಹಾರ್ದಿಕ್ ಪಾಂಡ್ಯ ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಟೀಮ್ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ ಈ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿರುವ ಕಾರಣ ಹಾರ್ದಿಕ್ ಪಾಂಡ್ಯಗೆ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ದೊರೆತಿದೆ. ಈಗಾಗಲೇ ಒಂದು ಬಾರಿ ಟೀಮ್ ಇಂಡಿಯಾವನ್ನು ನಾಯಕನಾಗಿ ಯಶಸ್ವಿಯಾಗಿ ಮುನ್ನಡೆಸಿದ ಅನುಭವ ಹೊಂದಿದ್ದಾರೆ.

ಟಿ20ಗೆ ಹೊಸ ನಾಯಕನನ್ನು ಆಯ್ಕೆ ಮಾಡಿದರೆ ತಪ್ಪಿಲ್ಲ

ಟಿ20ಗೆ ಹೊಸ ನಾಯಕನನ್ನು ಆಯ್ಕೆ ಮಾಡಿದರೆ ತಪ್ಪಿಲ್ಲ

ಮಾಜಿ ಕೋಚ್ ರವಿ ಶಾಸ್ತ್ರಿ ಟಿ20 ಕ್ರಿಕೆಟ್‌ಗೆ ಹೊಸ ನಾಯಕನನ್ನು ಆಯ್ಕೆ ಮಾಡಿದರೆ ತಪ್ಪಿಲ್ಲ ಎಂಬ ಮಾತು ಹೇಳಿದ್ದಾರೆ. ಇದು ತಂಡಕ್ಕೆ ಯಾವುದೇ ರೀತಿಯಲ್ಲೂ ಅಪಾಯವನ್ನುಂಟು ಮಾಡುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಒಬ್ಬ ಆಟಗಾರ ಮೂರು ಮಾದರಿಯಲ್ಲಿಯೂ ನಾಯಕನಾಗಿ ಮುನ್ನಡೆಸುವುದು ಕಠಿಣ ಎಂದಿದ್ದು ದೀರ್ಘ ಕಾಲದ ಗುರಿಯಿಟ್ಟುಕೊಂಡು ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಬೇಕು ಎಂದಿದ್ದಾರೆ.

ಮೂರು ಮಾದರಿಯಲ್ಲಿಯೂ ನಾಯಕನಾಗುವುದು ಸುಲಭವಲ್ಲ

ಮೂರು ಮಾದರಿಯಲ್ಲಿಯೂ ನಾಯಕನಾಗುವುದು ಸುಲಭವಲ್ಲ

ನನ್ನ ಪ್ರಕಾರ ಟಿ20 ಮಾದರಿಗೆ ಹೊಸ ನಾಯಕನನ್ನು ಆಯ್ಕೆ ಮಾಡುವುದರಿಂದ ಯಾವುದೇ ಆಪಾಯವಾಗುವುದಿಲ್ಲ. ಯಾಕೆಂದರೆ ಅಷ್ಟು ಪ್ರಮಾಣದಲ್ಲಿ ಪಂದ್ಯಗಳು ನಡೆಯುತ್ತಿದ್ದು ಮೂರು ಮಾದರಿಯಲ್ಲಿಯೂ ನಾಯಕನಾಗಿ ಮುನ್ನಡೆಸುವುದು ಸುಲಭವಿರುವುದಿಲ್ಲ" ಎಂದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿ ಹಿನ್ನೆಲೆಯಲ್ಲಿ ಪ್ರೈಮ್‌ ವಿಡಿಯೋ ನಡೆಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.
"ರೋಹಿತ್ ಶರ್ಮಾ ಈಗಾಗಲೇ ಏಕದಿನ ಹಾಗೂ ಟೆಸ್ಟ್ ಸರಣಿಗಳಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ ಟಿ20 ಮಾದರಿಗೆ ಹೊಸ ನಾಯಕನನ್ನು ಆಯ್ಕೆ ಮಾಡುವುದರಲ್ಲಿ ತಪ್ಪಿಲ್ಲ. ಆ ನಾಯಕನ ಹೆಸರು ಹಾರ್ದಿಕ್ ಪಾಂಡ್ಯ" ಎಂದಿದ್ದಾರೆ ರವಿ ಶಾಸ್ತ್ರಿ.

Story first published: Friday, November 18, 2022, 21:15 [IST]
Other articles published on Nov 18, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+