ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅಲ್ಲು ಅರ್ಜುನ್ 'ಪುಷ್ಪ' ಅವತಾರದಲ್ಲಿ ಸಂದೇಶ ನೀಡಿದ ರವೀಂದ್ರ ಜಡೇಜಾ

Ravindra Jadeja recreates Allu Arjuns Pushpa Raj look look and gives a good message

ಭಾರತ ಚಿತ್ರರಂಗದ, ಅದರಲ್ಲಿಯೂ ವಿಶೇಷವಾಗಿ ದಕ್ಷಿಣ ಭಾರತ ಚಿತ್ರರಂಗದ ಚಿತ್ರಗಳ ಹಾಡುಗಳಿಗೆ ಮತ್ತು ಸಂಭಾಷಣೆಗಳಿಗೆ ಖ್ಯಾತ ಕ್ರಿಕೆಟಿಗರು ವಿಡಿಯೋ ಮಾಡಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಳ್ಳುವುದು ಇತ್ತೀಚೆಗಿನ ಟ್ರೆಂಡ್ ಆಗಿಬಿಟ್ಟಿದೆ.

ಕೆಎಲ್ ರಾಹುಲ್‌ಗೆ ಮಾತ್ರ ಆ ದೊಡ್ಡ ಜವಾಬ್ದಾರಿ ಕೊಡಲೇಬೇಡಿ ಎಂದ ಗಂಭೀರ್!ಕೆಎಲ್ ರಾಹುಲ್‌ಗೆ ಮಾತ್ರ ಆ ದೊಡ್ಡ ಜವಾಬ್ದಾರಿ ಕೊಡಲೇಬೇಡಿ ಎಂದ ಗಂಭೀರ್!

ಈ ಟ್ರೆಂಡ್ ಮೊದಲಿಗೆ ಹುಟ್ಟುಹಾಕಿದ್ದು ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಡೇವಿಡ್ ವಾರ್ನರ್. ಮೊದಲಿಗೆ ತೆಲುಗು ಚಿತ್ರಗಳ ಸಂಭಾಷಣೆ ಹಾಗೂ ಹಾಡುಗಳಿಗೆ ವಿಡಿಯೋಗಳನ್ನು ಮಾಡುತ್ತಿದ್ದ ಡೇವಿಡ್ ವಾರ್ನರ್ ತೆಲುಗು ನಟ ಅಲ್ಲು ಅರ್ಜುನ್ ಅಭಿನಯದ ಅಲಾ ವೈಕುಂಠಪುರಮುಲೋ ಚಿತ್ರದ ಬುಟ್ಟ ಬೊಮ್ಮ ಹಾಡಿಗೆ ತನ್ನ ಪತ್ನಿ ಜತೆ ನೃತ್ಯವನ್ನು ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದರು. ಹೀಗೆ ಡೇವಿಡ್ ವಾರ್ನರ್ ಮಾಡಿದ್ದ ಈ ವಿಡಿಯೋಗೆ ಭಾರತ ಕ್ರಿಕೆಟ್ ಪ್ರೇಕ್ಷಕರು ಹಾಗೂ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗತೊಡಗಿದ ನಂತರ ಡೇವಿಡ್ ವಾರ್ನರ್ ಮತ್ತಷ್ಟು ತೆಲುಗು ಚಿತ್ರಗಳ ಹಾಡು ಮತ್ತು ದೃಶ್ಯಗಳಿಗೆ ವಿಡಿಯೋ ಮಾಡಲು ಆರಂಭಿಸಿದರು.

ಹೀಗೆ ಡೇವಿಡ್ ವಾರ್ನರ್ ಅವರ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಇತರ ಖ್ಯಾತ ಕ್ರಿಕೆಟಿಗರು ಕೂಡ ದಕ್ಷಿಣ ಭಾರತ ಚಿತ್ರರಂಗದ ಚಿತ್ರಗಳ ಹಾಡು ಮತ್ತು ದೃಶ್ಯಗಳಿಗೆ ವಿಡಿಯೋ ಮಾಡಲು ಆರಂಭಿಸಿದರು. ಈ ಟ್ರೆಂಡ್ ಇದೀಗ ಅಲ್ಲು ಅರ್ಜುನ್ ಅಭಿನಯದ ಇತ್ತೀಚೆಗಿನ ಹಿಟ್ ಚಿತ್ರ ಪುಷ್ಪ ಮೂಲಕವೂ ಕೂಡ ಮುಂದುವರಿದಿದೆ.

ಪುಷ್ಪ ಚಿತ್ರದ 'ತಗ್ಗೆದೆ ಲೇ' ಡೈಲಾಗಿಗೆ ಕೂಡ ಡೇವಿಡ್ ವಾರ್ನರ್ ವಿಡಿಯೋ ಮಾಡುವ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸಿನಿ ಪ್ರೇಕ್ಷಕರ ಮನಸ್ಸನ್ನು ಗೆದ್ದಿದ್ದರು. ಹಾಗೂ ಇದಕ್ಕೂ ಮುನ್ನ ಇದೇ ಸಂಭಾಷಣೆಗೆ ಭಾರತದ ಪ್ರಮುಖ ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಅಲ್ಲು ಅರ್ಜುನ್ ರೀತಿಯೇ ರವೀಂದ್ರ ಜಡೇಜಾ ಕೂಡ ಸದ್ಯ ಗಡ್ಡಧಾರಿಯಾಗಿದ್ದು ಆ ಸಂಭಾಷಣೆ ರವೀಂದ್ರ ಜಡೇಜಾಗೆ ಅಚ್ಚುಕಟ್ಟಾಗಿ ಹೊಂದಿಕೊಂಡಿತ್ತು. ಹಾಗೂ ರವೀಂದ್ರ ಜಡೇಜಾರ ಆ ವಿಡಿಯೋ ಸಾಮಾಜಿಕ ಜಾಲ ತಾಣದ ತುಂಬಾ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಐಪಿಎಲ್: ನೂತನ ಫ್ರಾಂಚೈಸಿಗಲ್ಲ, ಈ ತಂಡಕ್ಕೆ ನಾಯಕನಾಗಲಿದ್ದಾರೆ ಶ್ರೇಯಸ್ ಐಯ್ಯರ್ಐಪಿಎಲ್: ನೂತನ ಫ್ರಾಂಚೈಸಿಗಲ್ಲ, ಈ ತಂಡಕ್ಕೆ ನಾಯಕನಾಗಲಿದ್ದಾರೆ ಶ್ರೇಯಸ್ ಐಯ್ಯರ್

ಅದರ ಬೆನ್ನಲ್ಲೇ ಇದೀಗ ರವೀಂದ್ರ ಜಡೇಜಾ ಪುಷ್ಪ ಚಿತ್ರದ ಮತ್ತೊಂದು ಲುಕ್ ಪ್ರಯತ್ನವನ್ನು ಮಾಡಿದ್ದು, ಚಿತ್ರದಲ್ಲಿ ಅಲ್ಲು ಅರ್ಜುನ್ ಧೂಮಪಾನ ಮಾಡುವ ರೀತಿಯೇ ತಾವೂ ಕೂಡ ಕಾಣಿಸಿಕೊಂಡಿರುವ ಚಿತ್ರವೊಂದನ್ನು ತಮ್ಮ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ಹಾಗೂ ತನ್ನ ಚಿತ್ರವನ್ನು ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರವೀಂದ್ರ ಜಡೇಜಾ ತಮ್ಮ ಚಿತ್ರವನ್ನು ಕೇವಲ ಮನರಂಜನೆಗಾಗಿ ಮಾಡಲಾಗಿದ್ದು ನಿಜವಾದದ್ದಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಹಾಗೂ ಸಿಗರೇಟ್, ಬೀಡಿ ಮತ್ತು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು ಕ್ಯಾನ್ಸರ್ ಸಂಭವಿಸುತ್ತದೆ, ದಯವಿಟ್ಟು ಅದನ್ನು ಸೇವಿಸಬೇಡಿ ಎಂದು ಬರೆದು ಕೊಳ್ಳುವುದರ ಮೂಲಕ ಸಂದೇಶವನ್ನು ಕೂಡ ನೀಡಿದ್ದಾರೆ.

Story first published: Thursday, January 13, 2022, 9:52 [IST]
Other articles published on Jan 13, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X