ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ರ ಪ್ರಯಾಣವು ಕ್ವಾಲಿಫೈಯರ್ 2ರಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋಲಿನೊಂದಿಗೆ ಕೊನೆಗೊಂಡಿತು. ಆರ್ಸಿಬಿಯ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಶನಿವಾರ ಟ್ವಿಟ್ಟರ್ನಲ್ಲಿ ಅಭಿಮಾನಿಗಳು ಮತ್ತು ಫ್ರಾಂಚೈಸಿಗೆ ಸಂಬಂಧಿಸಿದ ಎಲ್ಲರಿಗೂ ಭಾವನಾತ್ಮಕವಾಗಿ ಸಂದೇಶ ಬರೆದಿದ್ದಾರೆ.
ಶುಕ್ರವಾರ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳು ವಿಕೆಟ್ಗಳ ಸೋಲಿನ ಸಮಯದಲ್ಲಿ ವಿರಾಟ್ ಕೊಹ್ಲಿ ಕೇವಲ 7 ರನ್ಗಳಿಗೆ ಔಟಾಗಿ ನಿರಾಸೆ ಮೂಡಿಸಿದರು. ಸೋಲಿನ ನಂತರ ಮಾಜಿ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ, '12ನೇ ಮ್ಯಾನ್ ಆರ್ಮಿ' (ಅಭಿಮಾನಿಗಳು) ಮತ್ತು ಆರ್ಸಿಬಿ ಮ್ಯಾನೇಜ್ಮೆಂಟ್ಗೆ ಈ ಋತುವಿನ ಉದ್ದಕ್ಕೂ ಅವರ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಅವರು 'ಕ್ರಿಕೆಟ್ ಅನ್ನು ವಿಶೇಷವಾಗಿಸುತ್ತಾರೆ' ಎಂದು ಹೇಳಿದರು.
"ಕೆಲವೊಮ್ಮೆ ನೀವು ಗೆಲ್ಲುತ್ತೀರಿ ಮತ್ತು ಕೆಲವೊಮ್ಮೆ ನೀವು ಗೆಲ್ಲುವುದಿಲ್ಲ. ಆದರೆ 12ನೇ ಮ್ಯಾನ್ ಆರ್ಮಿ (ಅಭಿಮಾನಿಗಳು) ನೀವು ಅದ್ಭುತವಾಗಿದ್ದೀರಿ, ನಮ್ಮ ಅಭಿಯಾನದ ಉದ್ದಕ್ಕೂ ಯಾವಾಗಲೂ ನಮಗೆ ಬೆಂಬಲ ನೀಡಿದ್ದೀರಿ. ನೀವು ಕ್ರಿಕೆಟ್ ಅನ್ನು ವಿಶೇಷವಾಗಿಸುತ್ತೀರಿ. ಕಲಿಕೆ ಎಂದಿಗೂ ನಿಲ್ಲುವುದಿಲ್ಲ. ಮ್ಯಾನೇಜ್ಮೆಂಟ್, ಸಹಾಯಕ ಸಿಬ್ಬಂದಿ ಮತ್ತು ಸಿಬ್ಬಂದಿಗೆ ಧನ್ಯವಾದಗಳು. ಈ ಅದ್ಭುತ ಫ್ರಾಂಚೈಸ್ನ ಭಾಗವಾಗಿರುವ ಎಲ್ಲಾ ಜನರಿಗೆ ಮುಂದಿನ ಋತುವಿನಲ್ಲಿ ನಿಮ್ಮನ್ನು ಭೇಟಿಯಾಗೋಣ," ಎಂದು ವಿರಾಟ್ ಕೊಹ್ಲಿ ಟ್ವಿಟ್ಟರ್ನಲ್ಲಿ ಸಂದೇಶ ಬರೆದುಕೊಂಡಿದ್ದಾರೆ.
ಮ್ಯಾನೇಜ್ಮೆಂಟ್ ಬೆಂಬಲ, ಸಿಬ್ಬಂದಿ ಮತ್ತು ಈ ಅದ್ಭುತ ಫ್ರಾಂಚೈಸಿಯ ಭಾಗವಾಗಿರುವ ಎಲ್ಲ ಜನರಿಗೆ ದೊಡ್ಡ ಧನ್ಯವಾದಗಳು. ಮುಂದಿನ ಋತುವಿನಲ್ಲಿ ನಿಮ್ಮನ್ನು ನೋಡೋಣವೆಂದು ತಿಳಿಸಿದ್ದಾರೆ.
ಐಪಿಎಲ್ 2022ರಲ್ಲಿ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಸಾಕಷ್ಟು ಕಳಪೆಯಾಗಿತ್ತು. ಏಕೆಂದರೆ 33 ವರ್ಷ ವಯಸ್ಸಿನ ವಿರಾಟ್, ಪ್ರಸಕ್ತ ಐಪಿಎಲ್ ಪಂದ್ಯಾವಳಿಯ 16 ಪಂದ್ಯಗಳಲ್ಲಿ ಎರಡು ಅರ್ಧ ಶತಕಗಳು ಸೇರಿದಂತೆ ಕೇವಲ 341 ರನ್ ಗಳಿಸುವಲ್ಲಿ ಯಶಸ್ವಿಯಾದರು.
ಕೊಹ್ಲಿ ಇತ್ತೀಚಿನ ಕಳಪೆ ಬ್ಯಾಟಿಂಗ್ ನಡುವೆ, ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವಾರು ಮಾಜಿ ಕ್ರಿಕೆಟಿಗರು ವಿರಾಟ್ ಕೊಹ್ಲಿ ಅವರು ಕ್ರೀಡೆಯಿಂದ ಸ್ವಲ್ಪ ದಿನ ವಿರಾಮ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಜೂನ್ 9ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ದ್ವಿಪಕ್ಷೀಯ ಸರಣಿಯಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಇದೇ ವೇಳೆ ನಡೆಯುತ್ತಿರುವ ಐಪಿಎಲ್ ಋತುವಿನಲ್ಲಿ ಕಳಪೆ ಪ್ರದರ್ಶನವನ್ನು ನೀಡಿರುವ ನಾಯಕ ರೋಹಿತ್ ಶರ್ಮ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ಭಾರತದ ಟಿ20 ತಂಡವನ್ನು ಮುನ್ನಡೆಸಲಿದ್ದಾರೆ.
ಜುಲೈ 1-5ರ ನಡುವೆ ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ನಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಇಬ್ಬರೂ ಪಂದ್ಯಕ್ಕೆ ಮರಳಲಿದ್ದಾರೆ.