ಗುರುವಾರ, ಏಪ್ರಿಲ್ 11ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಹೀನಾಯ ಸೋಲಿನ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಮ್ಮ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 17ನೇ ಆವೃತ್ತಿಯ ಅಭಿಯಾನದಲ್ಲಿ ಗಮನಾರ್ಹ ಹಿನ್ನಡೆ ಅನುಭವಿಸಿದೆ.
ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ನ ಬ್ಯಾಟ್ಸ್ಮನ್ಗಳ ಅಬ್ಬರದ ಬ್ಯಾಟಿಂಗ್ಗೆ ಸಾಕ್ಷಿಯಾಯಿತು ಮತ್ತು 7 ವಿಕೆಟ್ಗಳಿಂದ ಆರ್ಸಿಬಿ ತಂಡವನ್ನು ಸೋಲಿಸಿದರು.

ಮುಂಬೈ ಇಂಡಿಯನ್ಸ್ ತಂಡದ ಚೇಸಿಂಗ್ಗೆ ಇಶಾನ್ ಕಿಶನ್ 34 ಎಸೆತಗಳಲ್ಲಿ 69 ರನ್ ಮತ್ತು ಸೂರ್ಯಕುಮಾರ್ ಯಾದವ್ ಕೇವಲ 19 ಎಸೆತಗಳಲ್ಲಿ 52 ರನ್ ಸೇರಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ 197 ರನ್ಗಳ ಗುರಿಯನ್ನು ಇನ್ನೂ ನಾಲ್ಕು ಓವರ್ಗಳು ಬಾಕಿ ಇರುವಂತೆಯೇ ಬೆನ್ನಟ್ಟಿತು.
ಈ ಸೋಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲೇ ತೃಪ್ತಿಪಡಬೇಕಾಯಿತು. ಆಡಿದ ಆರು ಪಂದ್ಯಗಳಿಂದ ಐದು ಮತ್ತು ಕೇವಲ ಒಂದು ಗೆಲುವಿನೊಂದಿಗೆ, ಆರ್ಸಿಬಿ ತಂಡದ ಪ್ಲೇಆಫ್ ಹಾದಿಯು ಇನ್ನೂ ಕಠಿಣವಾಗಿದೆ.
ಐಪಿಎಲ್ 2024ರಲ್ಲಿ ಪ್ಲೇಆಫ್ಗೆ ಅರ್ಹತೆ ಬಯಸಿದರೆ, ಆರ್ಸಿಬಿ ತಂಡ ತನ್ನ ಮುಂದಿನ ಎಲ್ಲಾ ಪಂದ್ಯಗಳಲ್ಲಿ ಗೆಲುವಿನ ಅನಿವಾರ್ಯತೆ ಸಿಲುಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮುಂಬರುವ ಪಂದ್ಯಗಳಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ನಂತಹ ಬಲಿಷ್ಠ ತಂಡಗಳ ವಿರುದ್ಧ ಸವಾಲಿನ ಪಂದ್ಯಗಳು ಸೇರಿವೆ.
ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಆರ್ಸಿಬಿ ತಂಡದ ಮುಂದಿನ ಪಂದ್ಯವು ಪ್ರಸಕ್ತ ಲೀಗ್ನಲ್ಲಿ ಪ್ಲೇಆಫ್ ರೇಸ್ನಲ್ಲಿ ಉಳಿಯಲು ನಿರ್ಣಾಯಕವಾಗಿದೆ. ಇನ್ನು ಎಂಟು ಪಂದ್ಯಗಳು ಬಾಕಿ ಉಳಿದಿದ್ದು, ಬಹುತೇಕ ಎಲ್ಲವನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿಂದಾಗಿ ಆರ್ಸಿಬಿ ಸಿಲುಕಿದೆ.
ನಂತರ ಆರ್ಸಿಬಿ ತಂಡದ ಮುಂದಿನ ಪ್ರಯಾಣವು ಕಠಿಣ ಹಣಾಹಣಿಗಳನ್ನು ಒಳಗೊಂಡಿದೆ. ಮುಖ್ಯವಾಗಿ ಗುಜರಾತ್ ಟೈಟನ್ಸ್ ವಿರುದ್ಧದ ಎರಡು ಪಂದ್ಯಗಳು ಮತ್ತು ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಡಬೇಕಿದೆ.
ಹಾಲಿ ಚಾಂಪಿಯನ್ ಸಿಎಸ್ಕೆ ವಿರುದ್ಧದ ಆರ್ಸಿಬಿ ತಂಡದ ಅಂತಿಮ ಲೀಗ್ ಪಂದ್ಯವು ಸವಾಲಿನದ್ದಾಗಿದೆ ಎಂದು ನಿರೀಕ್ಷಿಸಲಾಗಿದೆ.