|
ಭಾರತ ತಂಡ ಮತ್ತು ದೇಶದ ಜನ ನಿಮ್ಮೊಂದಿಗಿದ್ದೇವೆ
ರಿಷಬ್ ಪಂತ್ಗೆ ಹಾರೈಸಿರುವ ಹಾರ್ದಿಕ್ ಪಾಂಡ್ಯ, "ಹಾಯ್ ರಿಷಬ್ ಪಂತ್, ನೀವು ಬೇಗನೆ ಚೇತರಿಸಿಕೊಳ್ಳಬೇಕು ಎಂದು ಬಯಸುತ್ತೇನೆ. ನೀವು ಎಂತಹ ಹೋರಾಟಗಾರ ಎನ್ನುವುದು ನನಗೆ ತಿಳಿದಿದೆ. ಈಗ ಸಂದರ್ಭ ನೀವು ಇಷ್ಟಪಡುವ ರೀತಿಯಲ್ಲಿ ಇಲ್ಲ, ಇದು ಜೀವನದ ಭಾಗ. ಎಲ್ಲಾ ಅಡೆತಡೆಗಳನ್ನು ಮೀರಿ ನೀವು ಮತ್ತೆ ಹಿಂದಿರುಗುತ್ತೀರಿ ಎಂದು ನನಗೆ ಗೊತ್ತು. ನನ್ನ ಪ್ರೀತಿ ಮತ್ತು ಹಾರೈಕೆ ಸದಾ ನಿಮ್ಮೊಂದಿಗೆ ಇರುತ್ತದೆ. ನಿಮ್ಮ ಜೊತೆ ಇಡೀ ತಂಡ ಮತ್ತು ದೇಶದ ಜನ ಇದ್ದಾರೆ ಎಂದು ಹೇಳಿದ್ದಾರೆ.
IND vs SL 1st T20: ಮೊದಲ ಟಿ20 ಪಂದ್ಯಕ್ಕೆ ಆಡುವ 11ರ ಬಳಗ ಆಯ್ಕೆ ಮಾಡಿದ ವಾಸಿಂ ಜಾಫರ್
ಸೂರ್ಯಕುಮಾರ್ ಯಾದವ್ ಹಾರೈಕೆ
ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ತನ್ನ ಸಹಪಾಠಿ ರಿಷಬ್ ಪಂತ್ ಬೇಗನೆ ಗುಣಮುಖರಾಗಬೇಕು ಎಂದು ಹಾರೈಸಿದ್ದಾರೆ. "ನೀವು ಬೇಗನೆ ಗುಣಮುಖರಾಗಬೇಕು ಎಂದು ನಾವೆಲ್ಲ ಬಯಸುತ್ತೇವೆ. ಇದೀಗ ನಿಮ್ಮ ಪರಿಸ್ಥಿತಿ ಏನೆಂದು ತಿಳಿದಿದೆ. ನಿಮ್ಮನ್ನು ಇಡೀ ತಂಡ ಮಿಸ್ ಮಾಡಿಕೊಳ್ಳುತ್ತಿದೆ. ನೀವು ಮರಳಿ ಬರುವವರೆ ಕಾಯಲು ಸಾಧ್ಯವಿಲ್ಲ. ಮೈದಾನದಲ್ಲಿ ನೀವು ಯಾವಾಗಲೂ ಉತ್ತಮ ಹೋರಾಟಗಾರರಾಗಿದ್ದೀರಿ, ನೀವು ಶೀಘ್ರದಲ್ಲೇ ಮತ್ತೆ ಮೈದಾನಕ್ಕೆ ಬರುತ್ತೀರಿ ಎಂದು ನನಗೆ ತಿಳಿದಿದೆ" ಎಂದು ಹೇಳಿದ್ದಾರೆ.
ಇತರ ಆಟಗಾರರಿಂದ ಕೂಡ ಹಾರೈಕೆ
ಸ್ಪಿನ್ನರ್ ಯುಜುವೇಂದ್ರ ಚಹಾಲ್ ಕೂಡ ರಿಷಬ್ ಪಂತ್ ಶೀಘ್ರವಾಗಿ ಗುಣಮುಖರಾಗಿ ಬರಲಿ ಎಂದು ಹಾರೈಸಿದ್ದಾರೆ. "ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖರಾಗಿ, ನಾವು ಒಟ್ಟಿಗೆ ಬೌಂಡರಿ ಮತ್ತು ಸಿಕ್ಸರ್ ಬಾರಿಸುತ್ತೇವೆ" ಎಂದು ಹೇಳಿದರು.
ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ಕೂಡ ಪಂತ್ ಗುಣಮುಖರಾಗುವಂತೆ ಹಾರೈಸಿದ್ದಾರೆ. " ನೀವು ಬೇಗನೆ ಗುಣಮುಖರಾಗಬೇಕೆಂದು ಟೀಂ ಇಂಡಿಯಾ ಪರವಾಗಿ ಕೇಳಿಕೊಳ್ಳುತ್ತಿದ್ದೇನೆ, ಶೀಘ್ರದಲ್ಲೇ ನಿಮ್ಮನ್ನು ನೋಡುವ ವಿಶ್ವಾಸವಿದೆ" ಎಂದು ಶುಭಮನ್ ಗಿಲ್ ಗೇಳಿದರು.
ಐಸಿಯುನಿಂದ ಖಾಸಗಿ ವಾರ್ಡ್ಗೆ ಸ್ಥಳಾಂತರ
ರಿಷಬ್ ಪಂತ್ ಆರೋಗ್ಯ ಉತ್ತಮವಾಗಿದೆ, ಸೋಂಕಿನ ಭಯದಿಂದಾಗಿ ಅವರನ್ನು ಐಸಿಯುನಿಂದ ಖಾಸಗಿ ವಾರ್ಡ್ಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ.
ರಿಷಬ್ ಪಂತ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಸೋಂಕಿನ ಭಯದಿಂದಾಗಿ ನಾವು ಅವರನ್ನು ವಿಶೇಷ ಖಾಸಗಿ ವಾರ್ಡ್ಗೆ ಸ್ಥಳಾಂತರಿಸಲು ಸೂಚನೆ ನೀಡಿದೆವು, ಈಗ ಅವರು ಖಾಸಗಿ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ನೋಡಲು ಯಾರಿಗೂ ಅವಕಾಶ ನೀಡಲ್ಲ ಎಂದು ಶರ್ಮಾ ಹೇಳಿದ್ದಾರೆ. ಅಲ್ಲದೆ, ಆಸ್ಪತ್ರೆ ಬಳಿ ಅಭಿಮಾನಿಗಳು ಬರಬಾರದು ಎಂದು ಮನವಿ ಮಾಡಿದ್ದಾರೆ.