
ಪಂತ್ ಆರೋಗ್ಯದ ಬಗ್ಗೆ ಬಿಸಿಸಿಐ ಮೇಲ್ವಿಚಾರಣೆ
ರಿಷಬ್ ಪಂತ್ ಆರೋಗ್ಯ ಸದ್ಯಕ್ಕೆ ಸ್ಥಿರವಾಗಿದೆ. ಅವರ ಗಾಯದ ಪ್ರಮಾಣ ಖಚಿತಪಡಿಸಿಕೊಳ್ಳಲು ಡಿಸೆಂಬರ್ 31 ರಂದು ಪರೀಕ್ಷೆಗಳನ್ನು ಮಾಡಲಾಗುತ್ತದೆ. ನಂತರ ಅವರಿಗೆ ಆಗಬೇಕಾಗಿರುವ ಶಸ್ತ್ರಚಿಕಿತ್ಸೆಯ ಬಗ್ಗೆ ನಿರ್ಧರಿಲಾಗುತ್ತದೆ.
"ರಿಷಬ್ ಪಂತ್ ಅಸ್ಥಿರಜ್ಜು ಚಿಕಿತ್ಸೆಯನ್ನು ಸ್ವತಃ ಬಿಸಿಸಿಐ ಮೇಲ್ವಿಚಾರಣೆ ಮಾಡುತ್ತಿದೆ. ಈ ಬಗ್ಗೆ ಡೆಹ್ರಾಡೂನ್ನಲ್ಲಿರುವ ಪಂತ್ ಅವರ ಕುಟುಂಬ ಸದಸ್ಯರು ಮತ್ತು ವೈದ್ಯರಿಗೆ ಮಾಹಿತಿ ನೀಡಲಾಗಿದೆ. ಗಾಯಗಳ ಪರೀಕ್ಷೆಯ ನಂತರ ಪಂತ್ರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ. ನಂತರ ಮುಂಬೈನಲ್ಲಿರುವ ಬಿಸಿಸಿಐನ ವೈದ್ಯರಯ ಪಂತ್ರನ್ನು ಪರೀಕ್ಷೆಗೆ ಒಳಪಡಿಸಲಿದ್ದಾರೆ. ನಂತರ ಅವರಿಗೆ ಚಿಕಿತ್ಸೆ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಅವಶ್ಯಕತೆ ಇದ್ದರೆ ಅವರಿಗೆ ವಿದೇಶದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ" ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
Rishabh Pant: ಮಾತೃ ವಿಯೋಗದ ನಡುವೆಯೂ ರಿಷಭ್ ಪಂತ್ ಶೀಘ್ರ ಚೇತರಿಕೆಗೆ ಹಾರೈಸಿದ ಪ್ರಧಾನಿ ಮೋದಿ

ಟೆಸ್ಟ್ ಸರಣಿಯಿಂದ ಹೊರಕ್ಕೆ, ಐಪಿಎಲ್ ಆಡೋದು ಅನುಮಾನ?
ರಿಷಬ್ ಪಂತ್ ಸುಧಾರಿಸಿಕೊಳ್ಳಲು ಇನ್ನು ಎಷ್ಟು ದಿನ ಬೇಕಾಗುತ್ತದೆ ಎಂದು ಈಗಲೇ ಹೇಳುವುದು ಸಾಧ್ಯವಿಲ್ಲ. ಅವರು ಭಾರತ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. 2023 ಐಪಿಎಲ್ನಲ್ಲಿ ಆಡುವುದು ಕೂಡ ಅನುಮಾನ ಎಂದು ಹೇಳಲಾಗಿದೆ.
ತಾಯಿಯೊಂದಿಗೆ ಹೊಸ ವರ್ಷ ಆಚರಿಸಲು ರಿಷಬ್ ಪಂತ್ ರೂರ್ಕಿಗೆ ತೆರಳುತ್ತಿದ್ದಾಗ, ಕಾರು ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಸ್ಥಳೀಯರು ಪಂತ್ರನ್ನು ರಕ್ಷಿಸಿ ರೂರ್ಕಿಯ ಸಕ್ಷಮ್ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಅಪಘಾತಕ್ಕೆ ಕಾರಣ ತಿಳಿಸಿದ ಪೊಲೀಸ್ ಮಹಾನಿರ್ದೇಶಕ
ಹರಿದ್ವಾರ ಜಿಲ್ಲೆಯ ಮಂಗಳೌರ್ ಮತ್ತು ನರ್ಸನ್ ನಡುವೆ ಪಂತ್ ಕಾರು ಅಪಘಾತಕ್ಕೆ ಒಳಗಾಯಿತು. ವಾಹನ ಚಲಾಯಿಸುವ ವೇಳೆ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎಂದು ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಹೇಳಿದ್ದಾರೆ.
ಕಾರಿನಲ್ಲಿ ರಿಷಬ್ ಪಂತ್ ಮಾತ್ರ ಇದ್ದರು, ಅಪಘಾತವಾಗುತ್ತಿದ್ದಂತೆ ಕಾರಿಗೆ ಬೆಂಕಿ ಹತ್ತಿಕೊಂಡಿದ. ಕಾರಿನ ಕಿಟಕಿ ಗಾಜು ಹೊಡೆದು ಹೊರ ಬಂದಿದ್ದರಿಂದ ಪಂತ್ ಹೆಚ್ಚಿನ ಅಪಾಯದಿಂದ ಪಾರಾದರು.


Click it and Unblock the Notifications












