ಚೇತರಿಕೆಗೆ 6-9 ತಿಂಗಳು ಬೇಕು
"ಅವರ ಗಾಯದ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲು ಇನ್ನೂ 3-4 ದಿನಗಳು ಬೇಕಾಗಬಹುದು. ಅಸ್ಥಿರಜ್ಜು ಟಿಯರ್ ತೀವ್ರ ಸ್ವರೂಪದ್ದಾಗಿದೆ ಎಂದು ಹೇಳಲಾಗುತ್ತಿದೆ. ಪಂತ್ ವಿಕೆಟ್ ಕೀಪರ್ ಕೂಡ ಆಗಿರುವುದರಿಂದ ಅವರಿಗೆ ಕೆಲಸದ ಹೊರೆ ಹೆಚ್ಚಾಗಿರುತ್ತದೆ. ಚೇತರಿಸಿಕೊಂಡು ಮತ್ತೆ ಕ್ರಿಕೆಟ್ಗೆ ಮರಳಲು ಕನಿಷ್ಠ 9 ತಿಂಗಳು ಬೇಕಾಗಬಹುದು" ಎಂದು ಬಿಸಿಸಿಐ ವೈದ್ಯಕೀಯ ತಂಡದ ನಿಕಟವರ್ತಿ ಮೂಲಗಳು ತಿಳಿಸಿರುವುದಾಗಿ ಇನ್ಸೈಡ್ ಸ್ಪೋರ್ಟ್ಸ್ ಹೇಳಿದೆ. ಈ ಬಗ್ಗೆ ಬಿಸಿಸಿಐ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
"ರಿಷಬ್ ಪಂತ್ರನ್ನು ಸಾಧ್ಯವಾದಷ್ಟು ಚೆನ್ನಾಗಿ ನೋಡಿಕೊಳ್ಳುತ್ತೇವೆ. ಅವರ ಗಾಯದ ಬಗ್ಗೆ ಅಧಿಕೃತವಾಗಿ ವರದಿ ಬರುವವರೆಗೂ ಏನು ಹೇಳಲಾಗದು. ವೈದ್ಯರು ಎಲ್ಲಾ ರೀತಿಯಲ್ಲಿ ಅವಲೋಕನ ಮಾಡುತ್ತಿದ್ದಾರೆ. ಅವರ ಗಾಯದ ಬಗ್ಗೆ ಬಿಸಿಸಿಐ ಶೀಘ್ರದಲ್ಲೇ ಅಧಿಕೃತ ಮಾಹಿತಿ ನೀಡಲಿದೆ" ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ತಿಳಿಸಿದ್ದಾರೆ.
Ind vs SL 2nd T20I: ಭಾರತ ತಂಡದ ಸೋಲಿಗೆ ಇದೇ ಪ್ರಮುಖ ಕಾರಣ ಎಂದ ಮಾಜಿ ಕ್ರಿಕೆಟಿಗ
ಎರಡು ಬಾರಿ ಶಸ್ತ್ರಚಿಕಿತ್ಸೆ ಸಾಧ್ಯತೆ
ಪಂತ್ ಮೊಣಕಾಲು ಮತ್ತು ಪಾದದ ಅಸ್ಥಿರಜ್ಜು ಟಿಯರ್ ಮೇಲೆ ಎರಡು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಇದ್ದು, ಕನಿಷ್ಠ 9 ತಿಂಗಳು ಅವರು ಕ್ರಿಕೆಟ್ನಿಂದ ದೂರವಿರಬೇಕಾಗುತ್ತದೆ.
ಬಿಸಿಸಿಐ ಬುಧವಾರ ಪಂತ್ರನ್ನು ವಿಮಾನದಲ್ಲಿ ಡೆಹ್ರಾಡೂನ್ನಿಂದ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ವಿಮಾನದ ಮೂಲಕ ಕರೆದೊಯ್ಯಲಾಯಿತು. ಆಸ್ಪತ್ರೆಯ ವೈದ್ಯರು ಅವರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಿದ್ದು, ವೈದ್ಯರು ವರದಿ ನೀಡಿದ ನಂತರ, ಭಾರತದಲ್ಲಿ ಶಸ್ತ್ರಚಿಕಿತ್ಸೆ ಮಾಡಬೇಕೇ ಅಥವಾ ಶಸ್ತ್ರಚಿಕಿತ್ಸೆಗಾಗಿ ಲಂಡನ್ಗೆ ಕರೆದೊಯ್ಯಬೇಕೆ ಎನ್ನುವುದನ್ನು ಬಿಸಿಸಿಐ ನಿರ್ಧರಿಸುತ್ತದೆ.
ಏಷ್ಯಾಕಪ್, ವಿಶ್ವಕಪ್ಗೆ ಅಲಭ್ಯ
2023ರಲ್ಲಿ ಬಿಡುವಿಲ್ಲ ಕ್ರಿಕೆಟ್ ವೇಳಾಪಟ್ಟಿಯನ್ನು ಭಾರತ ತಂಡ ಹೊಂದಿದೆ. ಏಕದಿನ ವಿಶ್ವಕಪ್, ಏಷ್ಯಾಕಪ್ ಈ ವರ್ಷದ ಪ್ರಮುಖ ಟೂರ್ನಿಗಳಾಗಿದ್ದು, ಭಾರತ ಗೆಲ್ಲಲು ತಂತ್ರ ರೂಪಿಸುತ್ತಿದೆ. ಅದಕ್ಕೂ ಮುನ್ನ ಫೆಬ್ರವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಗೆಲುವು ಸಾಧಿಸಿದರೆ, ಜೂನ್ನಲ್ಲಿ ನಡೆಯಲಿರುವ ವಿಶ್ವಟೆಸ್ಟ್ ಚಾಂಪಿಯನ್ಶಿಪ್ಗೆ ಅರ್ಹತೆ ಪಡೆಯಲಿದೆ.
ಟೆಸ್ಟ್ ಸರಣಿಗಾಗಿ ಸಿದ್ಧವಾಗುವಂತೆ ಪಂತ್ರನ್ನು ಕೇಳಲಾಗಿತ್ತು. 15 ದಿನಗಳ ಕಾಲ ಅವರು ಬೆಂಗಳೂರು ಎನ್ಸಿಎಯಲ್ಲಿ ಪುನರ್ವಸತಿಗಾಗಿ ಹಾಜರಾಗಬೇಕಿತ್ತು, ಆದರೆ ಅದಕ್ಕೂ ಮುನ್ನವೇ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು, ಭಾರತ ತಂಡಕ್ಕೆ ಸಮಸ್ಯೆಯಾಗಿ ಪರಿಣಮಿಸಿತು.