ರಿಷಬ್ ಪಂತ್ ಏಕದಿನ ಹಾಗೂ ಟಿ-ಟ್ವೆಂಟಿ ಪಂದ್ಯಗಳಲ್ಲಿ ಅವಕಾಶಗಳ ಮೇಲೆ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಆದರೆ ಎಲ್ಲೂ ಯಶಸ್ಸು ಕಾಣುತ್ತಿಲ್ಲ. ಇದೀಗ ಮುಂದಿನ ತಿಂಗಳು ನಡೆಯಲಿರುವ ವೆಸ್ಟ್ಇಂಡೀಸ್ ವಿರುದ್ಧದ ಸರಣಿಗೂ ರಿಷಬ್ ಆಯ್ಕೆಯಾಗಿದ್ದಾರೆ. ಈ ಆಯ್ಕೆಗೆ ಕ್ರಿಕೆಟ್ ಅಭಿಮಾನಿಗಳಿಂದ ಸಾಕಷ್ಟು ವಿರೋಧಗಳೂ ವ್ಯಕ್ತವಾದವು. ಆದರೆ ಕ್ರಿಕೆಟ್ ಆಟಗಾರರು ರಿಷಬ್ ಬೆನ್ನಿಗೆ ನಿಂತಿದ್ದಾರೆ. ಇದರ ಜೊತೆಗೇ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಪಂತ್ ಆಟ ಸುಧಾರಿಸಿಕೊಳ್ಳುವ ಬಗ್ಗೆ ಎಚ್ಚಕೆಯೊಂದನ್ನು ನೀಡಿದ್ದಾರೆ.
ರಿಷಬ್ ಪಂತ್ ಆದಷ್ಟು ಬೇಗ ತನ್ನ ಆಯ್ಕೆಯನ್ನು ಸಮರ್ಥನೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರದರ್ಶನವನ್ನು ನೀಡಬೇಕು. ಸಾಧ್ಯವಾಗದಿದ್ದರೆ ಅವಕಾಶಕ್ಕಾಗಿ ಕಾಯುತ್ತಿರುವ ಸಂಜು ಸಾಮ್ಸನ್ಗೆ ದಾರಿ ಮಾಡಿಕೊಡಬೇಕೆಂದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಎಂಎಸ್ ಧೋನಿ ಜಾಗಕ್ಕೆ ಸೂಕ್ತ ಆಟಗಾರನ ಸೂಚಿಸಿದ ವೀರೇಂದ್ರ ಸೆಹ್ವಾಗ್
ವೆಸ್ಟ್ಇಂಡೀಸ್ ವಿರುದ್ಧ ಸಂಜು ಸ್ಯಾಮ್ಸನ್ ಆಯ್ಕೆ ರಿಷಬ್ ಪಂತ್ಗೆ ಎಚ್ಚರಿಕೆಯ ಗಂಟೆ. ಇದು ರಿಷಬ್ ಪಾಲಿಗೆ ಮಾಡು ಇಲ್ಲವೆ ಮಡಿ ಎಂಬ ಪರಿಸ್ಥಿತಿ ಎಂಬ ಮಾತನ್ನು ಸ್ಟೈಲಿಶ್ ಬ್ಯಾಟ್ಸ್ಮನ್ ಲಕ್ಷ್ಮಣ್ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಹಲವು ಪಂದ್ಯಗಳಲ್ಲಿ ರಿಷಬ್ ಪಂತ್ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ ವಿಭಾಗದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಮತ್ತೊಂದೆಡೆ ರಿಷಬ್ ಪಂತ್ಗೆ ಅವಕಾಶಗಳನ್ನು ಕೊಟ್ಟು ಪ್ರತಿಭಾನ್ವಿತ ಆಟಗಾರ ಸಂಜು ಸ್ಯಾಮ್ಸನ್ರನ್ನು ಕಡೆಗಣನೆ ಮಾಡಲಾಗುತ್ತಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ.
ತನ್ನನ್ನು ಎಂಎಸ್ ಧೋನಿಗೆ ಹೋಲಿಸಿದ್ದಕ್ಕೆ ಪ್ರತಿಕ್ರಿಯಿಸಿದ ರಿಷಬ್ ಪಂತ್!
ರಿಷಬ್ ಪಂತ್ ವಿಶಿಷ್ಟವಾದ ಆಟಗಾರ ಎಂಬ ಮಾತನ್ನು ಹೇಳಿದ ಲಕ್ಷ್ಮಣ್ ಪಂದ್ಯದ ಗತಿಯನ್ನು ಬದಲಿಸಬಲ್ಲ ಶಕ್ತಿ ಪಂತ್ಗೆ ಇದೆ, ಅದರೆ ಒತ್ತಡವನ್ನು ನಿಭಾಯಿಸಲು ಕಲಿತುಕೊಳ್ಳಬೇಕು ಎಂದಿದ್ದಾರೆ.