ಮಹತ್ವಾಕಾಂಕ್ಷಿಯ ಟೂರ್ನಿ
ರೋಡ್ ಸೇಫ್ಟಿ ಅತ್ಯಂತ ಮಹತ್ವಾಕಾಂಕ್ಷೆಯನ್ನಿಟ್ಟುಕೊಂಡು ಆಯೋಜನೆ ಮಾಡಲಾಗಿತ್ತು. ಈಗಾಗಲೆ ವಿಶ್ವ ಕ್ರಿಕೆಟ್ನಿಂದ ದೂರವಾಗಿರುವ ದಿಗ್ಗಜ ಆಟಗಾರರನ್ನು ಮತ್ತೆ ಕ್ರಿಕೆಟ್ ಅಂಗಳದಲ್ಲಿ ಕಾಣುವ ವಿಶೇಷ ಅವಕಾಶ ಈ ಟೂರ್ನಿಯ ಮೂಲಕ ಪ್ರೇಕ್ಷಕರಿಗೆ ಲಭಿಸಿತ್ತು.
ದಿಗ್ಗಜರು ಕಣದಲ್ಲಿ
ವಿಶ್ವ ಕ್ರಿಕೆಟ್ನ ಲೆಜೆಂಡರಿ ಆಟಗಾರರು ಈ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು. ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಬ್ರ್ಯಾನ್ ಲಾರಾ, ತಿಲಕರತ್ನೆ ದಿಲ್ಶನ್, ಚಮಿಂಡಾ ವಾಸ್, ಮುತ್ತಯ್ಯ ಮುರಳೀಧರನ್, ಶಾನ್ ಪೊಲಾಕ್, ಜಾಂಟಿ ರೋಡ್ಸ್, ಹರ್ಷಲ್ ಗಿಬ್ಸ, ಬ್ರೆಟ್ ಲೀ ಸೇರಿದಂತೆ ದಿಗ್ಗಜ ಕ್ರಿಕೆಟಿಗರು ಈ ಟೂರ್ನಿಯಲ್ಲಿ ಪಾಲ್ಗೊಂಡಿದ್ದಾರೆ.
ಸದ್ಯಕ್ಕೆ ಮೊಟಕು
ಸಾರ್ವಜನಿಕರ ಹಿತದೃಷ್ಟಿಯಿಂದ ಆಯೋಜಕರು ಟೂರ್ನಿಯನ್ನು ಮುಂದೂಡುವ ನಿರ್ಧಾರಕ್ಕೆ ಸಮ್ಮತಿಸಿದ್ದಾರೆ. ಕೊರೊನಾ ಭೀತಿಯಿಂದ ಮುಕ್ತವಾಗುವವರೆಗೂ ಪಂದ್ಯಗಳನ್ನು ನಡೆಸದೆ ಇರಲು ತೀರ್ಮಾನಿಸಲಾಗಿದೆ. ಉಳಿದ ಪಂದ್ಯಗಳ ದಿನಾಂಕಗಳನ್ನು ಮುಂದಿನ ದಿನಗಳಲ್ಲಿ ಬಹಿರಂಗಗೊಳಿಸುವುದಾಗಿ ಆಯೋಜಕರು ಹೇಳಿಕೊಂಡಿದ್ದಾರೆ.
ಮೊದಲು ಸ್ಥಳಾಂತರಿಸಲಾಗಿತ್ತು
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಮೊದಲು ಪುಣೆಯಲ್ಲಿ ಈ ಮೊದಲು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದ್ದ ಪಂದ್ಯಗಳನ್ನು ಸ್ಥಳಾಂತರಿಸಲಾಗಿತ್ತು. ಪುಣೆಯ ಪಂದ್ಯಗಳನ್ನು ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಈಗ ಎಲ್ಲಾ ಪಂದ್ಯಗಳು ರದ್ಧಾಗಿದೆ.
ಒಂದೇ ದಿನ 10 ಪ್ರಕರಣ ಬೆಳಕಿಗೆ
ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 10 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿತ್ತು. ಇದು ಪಂದ್ಯದ ಆಯೋಜನೆ ಮುಂದೂಡಲು ಪ್ರಮುಖ ಕಾರಣ ಎನ್ನಲಾಗ್ತಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದು ಭೀತಿ ಹೆಚ್ಚಾಗಲು ಕಾರಣವಾಗಿದೆ.