ಸರಿಯಾದ ಅವಕಾಶ ನೀಡದೆ ಕಡೆಗಣಿಸಿದ್ರು ಎಂಬ ಆರೋಪವೂ ಇತ್ತು
ಕನ್ನಡಿಗ ರಾಬಿನ್ ಉತ್ತಪ್ಪಗೆ ಭಾರತ ತಂಡದಲ್ಲಿ ಸರಿಯಾದ ಅವಕಾಶವನ್ನು ನೀಡದೆ ಕಡೆಗಣಿಸಿದ್ರು ಎಂಬ ಆರೋಪವೂ ಸಹ ಆಗಾಗ ಕೇಳಿ ಬಂದದ್ದು ನಿಮಗೆಲ್ಲರಿಗೂ ತಿಳಿದೇ ಇದೆ. ಬೇಕಂತಲೇ ಉತ್ತಪ್ಪಗೆ ತಂಡದಲ್ಲಿ ಸ್ಥಾನ ನೀಡಲಿಲ್ಲ ಎಂಬ ವಾದಗಳು ಕೂಡ ಎದ್ದಿದ್ದವು.
ಉತ್ತಪ್ಪ ಪದಾರ್ಪಣೆ ಮಾಡಿದಾಗ ತಂಡದಲ್ಲಿದ್ರು ಘಟಾನುಘಟಿ ಆರಂಭಿಕ ಆಟಗಾರರು
ರಾಬಿನ್ ಉತ್ತಪ್ಪ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಸಂದರ್ಭದಲ್ಲಿ ಭಾರತ ತಂಡದ ಪರ ಆರಂಭಿಕ ಮತ್ತು ಮೇಲಿನ ಕ್ರಮಾಂಕದ ಆಟಗಾರರಾಗಿ ವಿರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ಸಚಿನ್ ತೆಂಡೂಲ್ಕರ್ ಹಾಗೂ ಸೌರವ್ ಗಂಗೂಲಿ ಕಣಕ್ಕಿಳಿಯುತ್ತಿದ್ದ ಕಾರಣ ಉತ್ತಪ್ಪಗೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಅವಕಾಶಗಳು ಹೆಚ್ಚಾಗಿ ಸಿಗಲಿಲ್ಲ.
ಮೊದಲ ಪಂದ್ಯದಲ್ಲಿಯೇ ದಾಖಲೆ
ಉತ್ತಪ್ಪ ಪದಾರ್ಪಣೆ ಮಾಡಿದ ಮೊದಲನೇ ಪಂದ್ಯದಲ್ಲಿಯೇ 96 ಎಸೆತಗಳಿಗೆ 86 ರನ್ ಬಾರಿಸಿ, ಆಡಿದ ಮೊದಲ ಪಂದ್ಯದಲ್ಲಿಯೇ ಅತಿಹೆಚ್ಚು ರನ್ ಬಾರಿಸಿದ ಭಾರತೀಯ ಎಂಬ ದಾಖಲೆಯನ್ನು ನಿರ್ಮಿಸಿದ್ದರು.
ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿಯೂ ಅವಕಾಶವಿಲ್ಲ
ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿದ್ದ ರಾಬಿನ್ ಉತ್ತಪ್ಪ ಟೂರ್ನಿ ಆರಂಭಕ್ಕೂ ಮುನ್ನ ಚೆನ್ನೈ ತಂಡದ ಪರ ಈ ಟೂರ್ನಿಯಲ್ಲಿಯೇ 1000 ರನ್ ದಾಖಲಿಸುವುದು ನನ್ನ ಗುರಿ ಎಂದು ಉತ್ತಪ್ಪ ಹೇಳಿಕೊಂಡಿದ್ದರು. ಆದರೆ ಇದುವರೆಗೂ ಕೂಡ ಒಂದೇ ಒಂದು ಪಂದ್ಯದಲ್ಲಿಯೂ ರಾಬಿನ್ ಉತ್ತಪ್ಪಗೆ ಆಡುವ ಅವಕಾಶವನ್ನೇ ನೀಡಿಲ್ಲ. ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಸ್ತುತ ಐಪಿಎಲ್ ಮುಂದುವರಿಯಲಿದ್ದು ಆಗಾದರೂ ರಾಬಿನ್ ಉತ್ತಪ್ಪಗೆ ಅವಕಾಶ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.