
ರೋಹಿತ್ ಶರ್ಮಾ ನಾಯಕನಾಗಿ ಆಯ್ಕೆಯಾಗಲು ಇದೇ ಕಾರಣ
ರೋಹಿತ್ ಶರ್ಮಾ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳಲ್ಲಿ ಒಟ್ಟು 5 ಟ್ರೋಫಿಗಳನ್ನು ಗೆಲ್ಲುವುದರ ಮೂಲಕ ಓರ್ವ ನಾಯಕನಾಗಿ ಯಶಸ್ವಿಯಾಗಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಟೀಮ್ ಇಂಡಿಯಾದ ನಾಯಕನಾಗಲು ಹೆಚ್ಚು ಅರ್ಹತೆಯನ್ನು ಹೊಂದಿದ್ದಾರೆ ಎಂದು ಸೌರವ್ ಗಂಗೂಲಿ ತಿಳಿಸಿದ್ದಾರೆ. ಈ ರೀತಿ ಹೇಳಿಕೆ ನೀಡುವುದರ ಮೂಲಕ ರೋಹಿತ್ ಶರ್ಮಾ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳಲ್ಲಿ ಯಶಸ್ವಿ ನಾಯಕನಾಗಿರುವುದರಿಂದಲೇ ಟೀಮ್ ಇಂಡಿಯಾದ ನಾಯಕನಾಗಿ ಆಯ್ಕೆಯಾದರು ಎಂಬುದನ್ನು ಸೌರವ್ ಗಂಗೂಲಿ ಬಿಚ್ಚಿಟ್ಟಿದ್ದಾರೆ.

ಗಂಗೂಲಿ ಹೇಳಿಕೆ ನಿರಾಕರಿಸಿದ್ದ ಕೊಹ್ಲಿ
ಈ ಹಿಂದೆ ಮಾತನಾಡಿದ್ದ ಸೌರವ್ ಗಂಗೂಲಿ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸುತ್ತೇನೆ ಎಂದು ಮಾಹಿತಿಯನ್ನು ನೀಡಿದಾಗ ಬಿಸಿಸಿಐ ಮೊದಲು ಪ್ರತಿರೋಧವನ್ನು ವ್ಯಕ್ತಪಡಿಸಿತ್ತು ಆದರೆ ವಿರಾಟ್ ಕೊಹ್ಲಿ ಇದಕ್ಕೆ ಕಿವಿಗೊಡದೆ ತನ್ನ ನಿರ್ಧಾರದಲ್ಲಿಯೇ ಮುಂದುವರೆದರು ಎಂದು ಹೇಳಿಕೆಯನ್ನು ನೀಡಿದ್ದರು. ಆದರೆ ವಿರಾಟ್ ಕೊಹ್ಲಿ ಇತ್ತೀಚೆಗಷ್ಟೇ ನಡೆದ ಮಾಧ್ಯಮಗೋಷ್ಠಿಯಲ್ಲಿ ತಾನು ಟಿ ಟ್ವೆಂಟಿ ನಾಯಕತ್ವಕ್ಕೆ ರಾಜಿನಾಮೆ ಘೋಷಿಸಲು ಮುಂದಾದಾಗ ಬಿಸಿಸಿಐ ಯಾವುದೇ ಪ್ರತಿರೋಧವನ್ನು ವ್ಯಕ್ತಪಡಿಸಿರಲಿಲ್ಲ ಎಂದು ಹೇಳಿಕೆಯನ್ನು ನೀಡಿದರು.

ವಿರಾಟ್ ಕೊಹ್ಲಿ ಮಾಧ್ಯಮಗೋಷ್ಠಿ ಕುರಿತು ಮಾತನಾಡಲು ನಿರಾಕರಿಸಿದ ಸೌರವ್ ಗಂಗೂಲಿ
ಇನ್ನು ರೋಹಿತ್ ಶರ್ಮಾ ನಾಯಕತ್ವದ ಕುರಿತು ಪ್ರಶಂಸೆ ವ್ಯಕ್ತಪಡಿಸಿರುವ ಸೌರವ್ ಗಂಗೂಲಿಗೆ ಇತ್ತೀಚೆಗಷ್ಟೇ ಮಾಧ್ಯಮಗಳು ವಿರಾಟ್ ಕೊಹ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ನೀಡಿದ ಹೇಳಿಕೆಗಳ ಕುರಿತು ಪ್ರಶ್ನೆಗಳನ್ನು ಹಾಕಿದ್ದವು. ಈ ಪ್ರಶ್ನೆಗಳಿಗೆ ಉತ್ತರ ನೀಡಲು ನಿರಾಕರಿಸಿದ ಗಂಗೂಲಿ ನಾನೇನೂ ಹೇಳಲಾರೆ, ಆ ವಿಷಯವನ್ನು ಬಿಸಿಸಿಐಗೆ ಬಿಡಿ ನಿಭಾಯಿಸುತ್ತೇವೆ ಎಂದಿದ್ದರು.


Click it and Unblock the Notifications
