ಮುಂಬೈ, ಆಗಸ್ಟ್ 14: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗೆಲುವು ಸಾಧಿಸಿದ ವಿರಾಟ್ ಕೊಹ್ಲಿ ನೇತೃತ್ವದ ಭಾರತೀಯ ಕ್ರಿಕೆಟ್ ತಂಡಕ್ಕೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿದ್ದ ಭಾರತ, ಸೋಮವಾರ ಮುಕ್ತಾಯಗೊಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 171 ರನ್ ಗಳ ಅಮೋಘ ಗೆಲುವು ದಾಖಲಿಸಿತು. ಈ ಮೂಲಕ, ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಚಿಟ್ ಗೆಲುವು ದಾಖಲಿಸಿತು.

ಈ ಸರಣಿ ಗೆಲುವಿನ ಬಗ್ಗೆ ಸಂತಸ ಹಂಚಿಕೊಂಡಿರುವ ಸಚಿನ್ ತೆಂಡೂಲ್ಕರ್, ಒಂದು ಟೆಸ್ಟ್ ಸರಣಿಯನ್ನು ಹೇಗೆ ಮುಕ್ತಾಯಗೊಳಿಸಬೇಕೋ, ಹಾಗೆಯೇ ಭಾರತ ತಂಡ ಗೆದ್ದಿದೆ. ಸರಣಿ ಗೆದ್ದ ಭಾರತ ತಂಡಕ್ಕೆ ಅಮೋಘ ಆಲಿಂಗನ. ಇನ್ನು, ಶೀಘ್ರವೇ ಆರಂಭವಾಗಲಿರುವ ಏಕದಿನ ಸರಣಿಗೆ ಶುಭಾಷಯ'' ಎಂದು ತಿಳಿಸಿದ್ದಾರೆ.