ಎಲ್ಲರು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಬಿಸಿಸಿಐ ಪ್ರಶಸ್ತಿಗಳು ಶನಿವಾರ ಮುಂಬೈನಲ್ಲಿ ಪ್ರಧಾನ ಮಾಡಲಾಯಿತು. ಈ ವೇಳೆ ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ, ಜೀವಮಾನದ ಸಾಧನೆಗೆ ಸಚಿನ್ ತೆಂಡೂಲ್ಕರ್ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಇದೇ ವೇಳೆ ಹಲವು ಯುವ ಆಟಗಾರರಿಗೂ ಬಿಸಿಸಿಐ ಗೌರವ ಸಂದಿದೆ. ಬ್ರಿಸ್ಬೇನ್ನಲ್ಲಿ ನಡೆದ ಟೆಸ್ಟ್ ಪಂದ್ಯದ ಬಳಿಕ ಹಠಾತ್ ನಿವೃತ್ತಿ ಪಡೆದ ಅನುಭವಿ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಅವರಿಗೆ ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ಈ ಬಾರಿ ಕ್ರಿಕೆಟಿ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ನೀಡಿ ಗೌರವಿಸಲಾಗಿತು. ಇವರು ಭಾರತದ ಪರ ದಾಖಲೆಯ 200 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೆ 463 ಏಕದಿನ ಹಾಗೂ 1 ಅಂತಾರಾಷ್ಟ್ರೀಯ ಪಂದ್ಯ ಆಡಿದ್ದಾರೆ. ಇವರು ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 100 ಶತಕಗಳನ್ನು ಬಾರಿಸಿದ ಹಿರಿಮೆಯನ್ನು ಹೊಂದಿದ್ದಾರೆ. ಟೆಸ್ಟ್ನಲ್ಲಿ 15921 ರನ್, ಏಕದಿನದಲ್ಲಿ 18426 ರನ್ ಸಿಡಿಸಿ ಅಮೋಘ ದಾಖಲೆ ಬರೆದಿದ್ದಾರೆ. ಟೆಸ್ಟ್ನಲ್ಲಿ 46 ಹಾಗೂ ಏಕದಿನ ಪಂದ್ಯಗಳಲ್ಲಿ 154 ವಿಕೆಟ್ ಪಡೆದು ಬೀಗಿದ ಮಹಾನ್ ಸಾಧಕನಿಗೆ ಪ್ರಶಸ್ತಿ ಸಂದಿದೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ವೇಳೆ ನಿವೃತ್ತಿ ಪಡೆದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರಿಗೂ ಬಿಸಿಸಿಐ ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಸದ್ಯ ಕರ್ನಾಟಕ ರಣಜಿ ತಂಡದ ಪರ ಆಡುತ್ತಿರುವ ಕೆವಿ ಅನೀಶ್ ಅವರಿಗೂ ಪ್ರಶಸ್ತಿ ಸಂದಿದೆ. ಇವರು ಸಿಕೆ ನಾಯ್ಡು ಕ್ರಿಕೆಟ್ ಟೂರ್ನಿಯಲ್ಲಿ ಗರಿಷ್ಠ ರನ್ ಸಾಧನೆ ಮಾಡಿದ್ದಾಕ್ಕಾಗಿ ಈ ಪ್ರಶಸ್ತಿ ಸಂದಿದೆ. ಇವರು 2023-24ರಲ್ಲಿ ಆಡಿದ 6 ಪಂದ್ಯಗಳ 11 ಇನಿಂಗ್ಸ್ಗಳಲ್ಲಿ 92ರ ಸರಾಸರಿಯಲ್ಲಿ 922 ರನ್ ಸಿಡಿಸಿದ್ದಾರೆ. ಇದರಲ್ಲಿ 6 ಶತಕಗಳು ಸಹ ಸೇರಿವೆ.