ಮನಸ್ಥಿತಿ ಸಿದ್ಧಪಡಿಸಿಕೊಳ್ಳಬೇಕು
"ಶುಬ್ಮನ್ ಗಿಲ್ ಕ್ರಿಕೆಟ್ ಆಟದ ಹಲವಾರು ಶ್ರೇಷ್ಠರಿಗಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿದ್ದಾರೆ. ಹಳೆಯ ತಲೆಮಾರಿನ ಆಟಗಾರರು ಬಲವಾದ ಮನಸ್ಥಿತಿಯನ್ನು ಹೊಂದಿದ್ದರು. ಅದು ಅವರ ಯಶಸ್ಸಿಗೆ ಕಾರಣವಾಯಿತು. ಗಿಲ್ ಯಶಸ್ವಿ ದಾಂಡಿಗನಾಗಲು ಬಯಸಿದರೆ ಆತ ತನ್ನ ಮನಸ್ಥಿತಿಯನ್ನು ಅದಕ್ಕೆ ಪೂರಕವಾಗಿ ಸಿದ್ಧಗೊಳಿಸಬೇಕಿದೆ" ಎಂದು ಅವರು ಹೇಳಿದರು. ಮುಂದುವರಿದು ಮಾತನಾಡಿದ ಸೆಹ್ವಾಗ್ "ಟಿ20 ಮಾದರಿಯಲ್ಲಿ ಬ್ಯಾಟಿಂಗ್ ಮಾಡುತ್ತಿರುವಾಗ ಒತ್ತಡವನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ಅವರು ಎದುರಿಸಿದ ಮೊದಲ ಚೆಂಡಿನಿಂದಲೇ ಹೊಡೆಯಲು ಆರಂಭಿಸಬೇಕು" ಎಂದು ಸೆಹ್ವಾಗ್ ಪ್ರತಿಪಾದಿಸಿದರು
ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಶುಬ್ಮನ್ ಗಿಲ್ ಅದ್ಭುತ ಪ್ರದರ್ಶನ ನೀಡಿದ್ದರು. 93 ರನ್ಗಳ ಸುಲಭ ಗುರಿಯನ್ನು ಪಡೆದಿದ್ದ ಕೆಕೆಆರ್ ಈ ಗುರಿಯನ್ನು ಕೇವಲ 10 ಓವರ್ಗಳಲ್ಲಿ ತಲುಪಿತ್ತು. ಅರ್ಧ ಶತಕದ ಅಂಚಿನಲ್ಲಿ ಔಟಾಗುವ ಮುನ್ನ ಗಿಲ್ ಆರು ಬೌಂಡರಿ ಹಾಗೂ ಒಂದು ಭರ್ಜರಿ ಸಿಕ್ಸರ್ ಸಿಡಿಸಿದ್ದರು. ಈ ಪ್ರದರ್ಶನದಿಂದಾಗಿ ಕೆಕೆಆರ್ ಸುಲಭವಾಗಿ ಆರ್ಸಿಬಿ ವಿರುದ್ಧದ ಪಂದ್ಯವನ್ನು ಗೆದ್ದು ಬೀಗಿತ್ತು.
ರನ್ ಬಗ್ಗೆ ತಲೆಕೆಡಿಸಿಕೊಳ್ಳಬಾರದು
ಭಾರತದ ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್ ಗಿಲ್ ಬ್ಯಾಟಿಂಗ್ ಶೈಲಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ರಿಕ್ಬಜ್ ಜೊತೆಗೆ ಮಾತನಾಡಿದ ಸೆಹ್ವಾಗ್ ಕೆಕೆಆರ್ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಟೀಕಾಕಾರರ ಬಗ್ಗೆ ತಲೆಕೆಡಿಸಿಕೊಳ್ಳದೆ ಯಾವಾಗಲೂ ಮುಕ್ತ ಮನಸ್ಸಿನಿಂದ ಆಡಬೇಕು ರನ್ಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ಆಟವನ್ನು ಮುಂದುವರಿಸಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಯಾವುದೇ ಪರಿಸ್ಥಿತಿ ಇದ್ದರೂ ಶುಬ್ಮನ್ ಗಿಲ್ ಮುಕ್ತವಾಗಿ ಬ್ಯಾಟಿಂಗ್ ಮಾಡಬೇಕು. ಆತ ರನ್ಗಳ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಅವರ ನಂತರ 9 ಬ್ಯಾಟ್ಸ್ಮನ್ಗಳಿದ್ದಾರೆ, ಹೀಗಾಗಿ ಅವರು ಹೆಚ್ಚು ಯೋಚಿಸಬಾರದು. ಅವನು ಸುಲಭದ ಎಸೆತಗಳಿಗೆ ದಂಡಿಸುತ್ತಾ ಕಠಿಣ ಎಸೆತಗಳಿಂದ ಒಂಟಿ ರನ್ಗಳನ್ನು ಪಡೆಯುತ್ತಾ ಸಾಗಬೇಕು ಎಂದಿದ್ದಾರೆ ಸೆಹ್ವಾಗ್.
ಭರ್ಜರಿ ಗೆಲುವು ಸಾಧಿಸಿದ ಕೆಕೆಆರ್
ಐಪಿಎಲ್ 14ನೇ ಆವೃತ್ತಿಯ ಮೊದಲ ಚರಣದ ಟೂರ್ನಿಯಲ್ಲಿ ಆರ್ಸಿಬಿ ಅದ್ಭುತ ಆಟವನ್ನು ಪ್ರದರ್ಶಿಸಿದ್ದರೂ ಎರಡನೇ ಚರಣದ ಆರಂಭದ ಪಂದ್ಯದಲ್ಲಿ ಇದನ್ನು ಮುಂದುವರಿಸಿಕೊಂಡು ಹೋಗುವಲ್ಲಿ ಆರ್ಸಿಬಿ ವಿಫಲವಾಯಿತು. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ 9 ವಿಕೆಟ್ಗಳ ಭಾರೀ ಅಂತರದ ಸೋಲು ಅನುಭವಿಸಿತು. ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡ ಕೇವಲ 92 ರನ್ಗಳನ್ನಷ್ಟೇ ಗಳಿಸಲು ಶಕ್ತವಾಗಿತ್ತು. ಈ ಮೊತ್ತವನ್ನು ಸುಲಭವಾಗಿ ಬೆನ್ನಟ್ಟಿದ ಕೆಕೆಆರ್ ಕೇವಲ ಒಂದು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿದೆ. ಆರ್ಸಿಬಿ ತಂಡದ ಆರಂಭಿಕ ಆಟಗಾರರಾದ ಶುಬ್ಮನ್ ಗಿಲ್ ಹಾಗೂ ವೆಂಗಟೇಶ್ ಐಯ್ಯರ್ ಹತ್ತೇ ಓವರ್ಗಳಲ್ಲಿ ಈ ಗುರಿಯನ್ನು ತಲುಪುವಂತೆ ಮಾಡಿದರು. ಗೆಲುವಿನ ಸನಿಹದಲ್ಲಿರುವಾಗ ಶುಬ್ಮನ್ ಗಿಲ್ ವಿಕೆಟ್ ಕಳೆದುಕೊಂಡರು. ನಂತರ ವೆಂಕಟೇಶ್ ಐಯ್ಯರ್ ಗೆಲುವಿನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.