ಐಸಿಸಿ 2024ರ ಚಾಂಪಿಯನ್ಸ್ ಟ್ರೋಫಿ ಸಂಬಂಧ ಕಠಿಣ ನಿಲುವು ತೆಗೆದುಕೊಳ್ಳುವಂತೆ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು (ಪಿಸಿಬಿ) ಕೇಳಿಕೊಂಡಿದ್ದಾರೆ. ಭಾರತದಲ್ಲಿ ನಡೆಯುವ ಕ್ರಿಕೆಟ್ ಕಾರ್ಯಕ್ರಮಗಳನ್ನು ಪಿಸಿಬಿ ಬಹಿಷ್ಕರಿಸಬೇಕು ಎಂದು ಆಫ್ರಿದಿ ಹೇಳಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿದೆ. ಭದ್ರತೆಯ ದೃಷ್ಟಿಯಿಂದ ಬಿಸಿಸಿಐ ಇಂತಹ ನಿರ್ಧಾರ ಕೈಗೊಂಡಿದೆ. ಈ ವಿಚಾರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯತ್ತಿದೆ.
ಭಾರತವು ಪಾಕಿಸ್ತಾನದಲ್ಲಿ ಆಡಲು ಒಪ್ಪಿಕೊಳ್ಳುವವರೆಗೆ ಅವರು ಆಯೋಜಿಸುವ ಟೂರ್ನಿಗಳನ್ನು ಬಹಿಷ್ಕರಿಸಬೇಕು ಆಫ್ರಿದಿ ಹೇಳಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಿಕ್ಕಟ್ಟು ಪ್ರಸ್ತುತ ಕ್ರಿಕೆಟ್ ಜಗತ್ತಿನಲ್ಲಿ ಚರ್ಚೆಯ ವಿಷಯವಾಗಿದೆ. ಟೂರ್ನಿಗಾಗಿ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ನಿರಾಕರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕರಾಚಿ ಕಲಾ ಮಂಡಳಿಯಲ್ಲಿ ಆಯೋಜಿಸಿದ್ದ ಉರ್ದು ಸಮ್ಮೇಳನದಲ್ಲಿ ಮಾತನಾಡಿದ ಆಫ್ರಿದಿ, ಪಾಕಿಸ್ತಾನ ಕ್ರಿಕೆಟ್ ಬಗ್ಗೆ ಸಾಕಷ್ಟು ವಿಚಾರಗಳನ್ನು ಮಾತನಾಡಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಗ್ಗೆ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಅಫ್ರಿದಿ ಪಿಸಿಬಿಗೆ ಸೂಚಿಸಿದ್ದಾರೆ. ಭಾರತದಲ್ಲಿ ಆಡಲು ಪಾಕಿಸ್ತಾನ ತಂಡವನ್ನು ಕಳುಹಿಸಬಾರದು. ಪಾಕಿಸ್ತಾನ ಕ್ರಿಕೆಟ್ ಬಲಿಷ್ಠವಾಗಿರಬೇಕು. ಜೊತೆಗೆ ಸ್ವಾವಲಂಬಿಯಾಗಿರಬೇಕು. ಬಲವಾದ ತತ್ವಾಧಾರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಭಾರತಕ್ಕೆ ಬಂದು ಪಾಕಿಸ್ತಾನದಲ್ಲಿ ಆಡಲು ಸಾಧ್ಯವಾಗದಿದ್ದರೆ ನಾವು ಭಾರತಕ್ಕೆ ಹೋಗಿ ಯಾವುದೇ ಟೂರ್ನಿಗಳನ್ನು ಆಡಲು ಯಾವುದೇ ಕಾರಣವಿಲ್ಲ ಎಂದು ಸಲಹೆ ನೀಡಿದ್ದಾರೆ.
ಭಾರತ ಚಾಂಪಿಯನ್ ಟ್ರೋಫಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಬೇಕು ಎಂದು ಐಸಿಸಿ ಮುಂದೆ ಬೇಡಿಕೆಯನ್ನು ಮುಂದಿಟ್ಟಿದೆ. ಪಾಕಿಸ್ತಾನಕ್ಕೆ ಹೋಗುವ ಬದಲು ತಟಸ್ಥ ಸ್ಥಳಗಳಲ್ಲಿ ತನ್ನ ಪಂದ್ಯಗಳನ್ನು ಆಡಲು ಭಾರತ ತಿಳಿಸಿದೆ. ಟೂರ್ನಿಯ ಅಂತಿಮ ವೇಳಾಪಟ್ಟಿ ಮತ್ತು ಸ್ಥಳಗಳ ಪ್ರಕಟಣೆ ವಿಳಂಬವಾಗಿದೆ. ಇಂತಹ ಸಂದರ್ಭದಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಿಸಿಬಿಯ ಕಠಿಣ ನಿಲುವನ್ನು ಆಫ್ರಿದಿ ಬೆಂಬಲಿಸಿದ್ದಾರೆ. ಭಾರತದೊಂದಿಗೆ ಸಮಾನ ಕ್ರಿಕೆಟ್ ಸಂಬಂಧಗಳನ್ನು ಖಚಿತಪಡಿಸಿಕೊಳ್ಳಲು ಪಾಕಿಸ್ತಾನವು ತನ್ನ ನೆಲದಲ್ಲಿ ನಿಲ್ಲಬೇಕು ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಶಾಹಿದ್ ಅಫ್ರಿದಿ ಐಸಿಸಿಯನ್ನು ಟೀಕಿಸಿದ್ದಾರೆ. ಕಠಿಣ ನಿಲುವು ತೆಗೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ಈಗ ಐಸಿಸಿ ತನ್ನ ಜವಾಬ್ದಾರಿಯನ್ನು ಪ್ರತಿ ಸದಸ್ಯ ರಾಷ್ಟ್ರವು ಕ್ರಿಕೆಟ್ ಆಡುತ್ತದೆಯೇ ಅಥವಾ ಹಣ ಗಳಿಸಲು ಬಯಸುತ್ತದೆಯೇ ಎಂಬುದನ್ನು ನಿರ್ಧರಿಸಬೇಕು ಎಂದು ಅಫ್ರಿದಿ ಹೇಳಿದ್ದಾರೆ.