ಮುಂಬೈ: ಟೀಮ್ ಇಂಡಿಯಾದ ಪ್ರಮುಖ ಬೌಲರ್ ಶಾರ್ದೂಲ್ ಠಾಕೂರ್ ಶನಿವಾರ (ಎಪ್ರಿಲ್ 3) ಚೆನ್ನೈ ಸೂಪರ್ ಕಿಂಗ್ಸ್ ಸೇರಿಕೊಂಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಭಾರತ-ಇಂಗ್ಲೆಂಡ್ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಠಾಕೂರ್ ಅದ್ಭುತ ಪ್ರದರ್ಶನ ನೀಡಿದ್ದರು. ಇದರಲ್ಲಿ ಭಾರತ 2-1ರಿಂದ ಗೆದ್ದಿತ್ತು.
ಆರ್ಸಿಬಿಗೆ ಕಪ್ ಗೆಲ್ಲಿಸಿಕೊಡಬಲ್ಲ 3 ಅನ್ಕ್ಯಾಪ್ಡ್ ಭಾರತೀಯರ ಹೆಸರಿಸಿದ ಹೆಸನ್!
14ನೇ ಆವೃತ್ತಿಯ ಐಪಿಎಲ್ಗೆ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ತಯಾರಿ ನಡೆಸುತ್ತಿದೆ. ಧೋನಿ, ಋತುರಾಜ್, ಸುರೇಶ್ ರೈನಾ, ಫಾ ಡು ಪ್ಲೆಸಿಸ್ ಈಗಾಗಲೇ ತಂಡದ ಜೊತೆಗಿದ್ದಾರೆ. ಮಾರ್ಚ್ 29ರಂದು ಸಿಎಸ್ಕೆ ಕ್ಯಾಂಪ್ ಆರಂಭಿಸಿತ್ತು.
ಸಿಎಸ್ಕೆ ತಂಡ ಸೇರಿಸಿಕೊಂಡಿರುವ ಶಾರ್ದೂಲ್ 7 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸಲಿದ್ದಾರೆ. ಏಪ್ರಿಲ್ 10ರಂದು ನಡೆಯುವ ಚೆನ್ನೈ vs ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಮೊದಲ ಪಂದ್ಯದಲ್ಲಿ ಠಾಕೂರ್ ಮೈದಾನಕ್ಕಿಳಿಯುವ ನಿರೀಕ್ಷೆಯಿದೆ.
ಚೊಚ್ಚಲ ಐಪಿಎಲ್ ಪಂದ್ಯಕ್ಕೆ ಆರ್ಸಿಬಿ ಬಲಿಷ್ಠ ಪ್ಲೇಯಿಂಗ್ XI ಪ್ರಕಟಿಸಿದ ಹಾಗ್
ಕಳೆದ ಐಪಿಎಲ್ ಸೀಸನ್ನಲ್ಲಿ ಸಿಎಸ್ಕೆ ಕೆಟ್ಟ ಪ್ರದರ್ಶನ ನೀಡಿತ್ತು. ಈ ಬಾರಿ ಆರಂಭದಿಂದಲೇ ಗೆಲುವಿನ ಲಯ ಕಂಡುಕೊಳ್ಳುವತ್ತ ಧೋನಿ ಪಡೆ ಯೋಚಿಸುತ್ತಿದೆ. ಏಪ್ರಿಲ್ 9ರಂದು ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣಸಾಡಲಿವೆ.