ದುಬೈ: ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಐಯ್ಯರ್ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದ್ವಿತೀಯ ಹಂತದ ಟೂರ್ನಿಯಲ್ಲಿ ಅಯ್ಯರ್ ಕಣಕ್ಕಿಳಿಯಲಿದ್ದಾರೆ. ಐಪಿಎಲ್ನಲ್ಲಿ ಪಾಲ್ಗೊಳ್ಳುವುದಕ್ಕಾಗಿ ಅಯ್ಯರ್ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ತಲುಪಿದ್ದಾರೆ.
ವಿಡಿಯೋ: ಧೋನಿ, ಸುರೇಶ್ ರೈನಾ ಮತ್ತು ವಿರಾಟ್ ಕೊಹ್ಲಿ ಜೊತೆ ನಟಿಸಿದ್ದ ಉನ್ಮುಕ್ತ್ ಚಂದ್
ಸೆಪ್ಟೆಂಬರ್ 19ರಿಂದ ಅಕ್ಟೋಬರ್ 13ರ ವರೆಗೆ ಐಪಿಎಲ್ 14ನೇ ಆವೃತ್ತಿಯ ಪಂದ್ಯಗಳು ನಡೆಯಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದ ಶ್ರೇಯಸ್ ಐಯ್ಯರ್ ಗಾಯಕ್ಕೀಡಾಗಿ ತಂಡದಿಂದ ಹೊರ ಬಿದ್ದಿದ್ದರು. ಸುಮಾರು ಐದು ತಿಂಗಳ ಬಳಿಕ ಸಂಪೂರ್ಣ ಚೇತರಿಸಿಕೊಂಡಿರುವ ಐಯ್ಯರ್ ಮತ್ತೆ ಡಿಸಿ ಸೇರಿಕೊಳ್ಳುವುದರಲ್ಲಿದ್ದಾರೆ.
ಏಪ್ರಿಲ್ 8ರಂದು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆ ಶ್ರೇಯಸ್ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಫೀಲ್ಡಿಂಗ್ ವೇಳೆ ಅಯ್ಯರ್ ಭುಜಕ್ಕೆ ತೀವ್ರ ಗಾಯವಾಗಿತ್ತು. ಆ ಬಳಿಕ ತಂಡದಿಂದ ಹೊರ ಬಿದ್ದದ್ದ ಐಯ್ಯರ್, ಐಪಿಎಲ್ ಮೊದಲ ಹಂತದ ಪಂದ್ಯಗಳಲ್ಲಿ ಆಡಿರಲಿಲ್ಲ. ಆಗ ತಂಡದ ನಾಯಕತ್ವವನ್ನು ಯುವ ಬ್ಯಾಟ್ಸ್ಮನ್ ರಿಷಭ್ ಪಂತ್ ವಹಿಸಿಕೊಂಡಿದ್ದರು.
ಐಪಿಎಲ್ 2021 ದ್ವಿತೀಯ ಹಂತದ ಪಂದ್ಯಗಳಿಗೆ ಅಭಿಮಾನಿಗಳಿಗೆ ಸ್ಟೇಡಿಯಂಗೆ ಪ್ರವೇಶ?!
"ಹೌದು ಶ್ರೇಯಸ್ ಐಯ್ಯರ್ ದುಬೈಗೆ ತಲುಪಿದ್ದಾರೆ. ಅವರಿನ್ನು ಶ್ರೀಘ್ರ ಅಭ್ಯಾಸ ಆರಂಭಿಸಲಿದ್ದಾರೆ. ಕ್ವಾರಂಟೈನ್ಗೆ ಸಂಬಂಧಿಸಿ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಬಳಿಕ ಐಯ್ಯರ್ ಅಭ್ಯಾಸ ಆರಂಭವಾಗಲಿದೆ," ಎಂದು ಡಿಸಿಗೆ ಆಪ್ತ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.