ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕೇಂದ್ರ ಗುತ್ತಿಗೆ ಒಪ್ಪಂದಿಂದ ಹೊರಬಿದ್ದರೂ, ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ತಮ್ಮ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಚಾಂಪಿಯನ್ ಪಟ್ಟಕ್ಕೆ ಮುನ್ನಡೆಸಿದರು.
ಇದೀಗ ತಮ್ಮ ಭವ್ಯ ಐಪಿಎಲ್ ಅಭಿಯಾನದ ಹಿನ್ನೆಲೆಯಲ್ಲಿ, ಶ್ರೇಯಸ್ ಅಯ್ಯರ್ ಮುಂಬರುವ ಶ್ರೀಲಂಕಾ ವಿರುದ್ಧದ ಪ್ರವಾಸದ ವೇಳೆ ಮತ್ತೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳಬಹುದು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ತಮ್ಮ ಮೂರನೇ ಐಪಿಎಲ್ ಪ್ರಶಸ್ತಿಗೆ ಮುನ್ನಡೆಸಿದ ನಂತರ, ಚುಟುಕು ಸ್ವರೂಪದಲ್ಲಿ ತಮ್ಮ ಅದ್ಭುತ ಪ್ರದರ್ಶನದ ಕಾರಣದಿಂದ ಶ್ರೇಯಸ್ ಅಯ್ಯರ್ ಅವರು ಜುಲೈ 2024ರಲ್ಲಿ ಜಿಂಬಾಬ್ವೆ ವಿರುದ್ಧ ಭಾರತ ತಂಡದ ಮುಂಬರುವ ಟಿ20 ಸರಣಿಗೆ ಆಯ್ಕೆಯಾಗಬಹುದು.
ಇದಲ್ಲದೆ, ಶ್ರೀಲಂಕಾ ಮತ್ತು ಜಿಂಬಾಬ್ವೆ ವಿರುದ್ಧದ ಸರಣಿಯು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಭಾರತೀಯ ತಂಡದ ಮುಖ್ಯ ಕೋಚ್ ಆಗಿ ಮೊದಲ ಕಾರ್ಯಯೋಜನೆಯಾಗಿರಬಹುದು.
ಇದು ಐಪಿಎಲ್ ಗೆಲುವಿನ ನಂತರ, ಶ್ರೇಯಸ್ ಅಯ್ಯರ್ ಮತ್ತೊಮ್ಮೆ ಕೆಕೆಆರ್ ತಂಡದ ಮಾರ್ಗದರ್ಶಕರೊಂದಿಗೆ ಸೇರಲು ಕಾರಣವಾಗಬಹುದು.

"ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಮಯಾಂಕ್ ಯಾದವ್, ಹರ್ಷಿತ್ ರಾಣಾ, ನಿತೀಶ್ ರೆಡ್ಡಿ, ವಿಜಯ್ ಕುಮಾರ್ ವೈಶಾಕ್, ಯಶ್ ದಯಾಳ್ ಸೇರಿದಂತೆ ಹಲವು ಯುವ ಆಟಗಾರರು ಶಿಬಿರದಲ್ಲಿದ್ದಾರೆ. ಕೆಲವರು ಜಿಂಬಾಬ್ವೆ ಟಿ20 ಸರಣಿಗೆ ಹೋಗುತ್ತಾರೆ," ಎಂದು ಬಿಸಿಸಿಐ ಮೂಲ ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಕಳೆದ ವರ್ಷ ಶ್ರೇಯಸ್ ಅಯ್ಯರ್ ಬೆನ್ನುನೋವಿಗೆ ಒಳಗಾಗಿದ್ದರು. ನಂತರ 2023ರ ಏಷ್ಯಾ ಕಪ್ ಪಂದ್ತಾವಳಿಯಲ್ಲಿ ಬಲವಾಗಿ ಮರಳಿದರು ಎಂಬುದು ಗಮನಾರ್ಹ ಸಂಗತಿ.
2023ರ ಏಕದಿನ ವಿಶ್ವಕಪ್ನಲ್ಲಿ ಶ್ರೇಯಸ್ ಅಯ್ಯರ್ ಭಾರತ ತಂಡಕ್ಕೆ ಪ್ರಭಾವಶಾಲಿ ಪ್ರದರ್ಶನ ನೀಡಿದರು. ಟೀಮ್ ಇಂಡಿಯಾ ಪರ ಪಂದ್ಯಾವಳಿಯಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದರು. ಆದರೆ ಫೈನಲ್ನಲ್ಲಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್-ಅಪ್ಗೆ ತೃಪ್ತಿಪಟ್ಟಿತು.
"ಆದಾಗ್ಯೂ, ಶ್ರೀಲಂಕಾದಲ್ಲಿ ನಡೆಯುವ ಮೂರು ಪಂದ್ಯಗಳ ಏಕದಿನ ಸರಣಿಗೆ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಭಾರತ ತಂಡದೊಂದಿಗೆ ಪ್ರಯಾಣಿಸುವ ಎಲ್ಲಾ ಸಾಧ್ಯತೆಗಳಿವೆ. ಭಾರತ ಆಡಿದ ಕೊನೆಯ ಏಕದಿನ ಪಂದ್ಯ ಆಡಿದ್ದು ದಕ್ಷಿಣ ಆಫ್ರಿಕಾದಲ್ಲಿ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕ (52) ಗಳಿಸಿದರು. ವಿಶ್ವಕಪ್ನಲ್ಲಿ 500 ಪ್ಲಸ್ ರನ್ಗಳನ್ನು (530) ಹೊಂದಿದ್ದರು ಮತ್ತು ಸರಾಸರಿ 50ರ ಆಸುಪಾಸಿನಲ್ಲಿದ್ದಾರೆ. ನೀವು ಅವರನ್ನು ಕೈಬಿಡಬಹುದೇ?," ಮೂಲವು ಸೇರಿಸಿದೆ.
ಕುತೂಹಲಕಾರಿಯಾಗಿ, ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಭಾರತ ತಂಡಕ್ಕಾಗಿ ಶ್ರೇಯಸ್ ಅಯ್ಯರ್ ಕೊನೆಯ ಬಾರಿಗೆ ಕಾಣಿಸಿಕೊಂಡರು. ಅವರು ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದರು, ಭಾರತವು ಆರಾಮವಾಗಿ ಗೆದ್ದಿತು.