ಗ್ರೇಟ್ ವಾಲ್ ರಾಹುಲ್ ಸಾರಥ್ಯ
ಟೀಮ್ ಇಂಡಿಯಾ ಇವತ್ತು ವಿಶ್ವದ ಬಲಿಷ್ಠ ತಂಡಗಳಲ್ಲಿ ಮುಂಚೂಣಿಯಾಗಿ ಗುರುತಿಸಿಕೊಳ್ಳಲು ಭಾರತದ ಮಾಜಿ ನಾಯಕ, ಕನ್ನಡಿಗ ರಾಹುಲ್ ದ್ರಾವಿಡ್ ಕೊಡುಗೆ ತುಂಬಾ ಇದೆ ಎಂದು ಅನೇಕ ಕ್ರಿಕೆಟ್ ಪಂಡಿತರು ಹೇಳುತ್ತಿದ್ದಾರೆ. ಕಾರಣ, ಯುವ ಆಟಗಾರರಿಗೆ ಸರಿಯಾದ ಮಾರ್ಗದರ್ಶನ ನೀಡಿ ಅವರು ಬಲಿಷ್ಠ ಆಟಗಾರರಾಗಿ ಬೆಳೆಯುವಲ್ಲಿ ದ್ರಾವಿಡ್ ಶ್ರಮವಿದೆ. ಉದಯೋನ್ಮುಖ ಆಟಗಾರರು ಸಾಕಷ್ಟು ಮಂದಿಯಿರುವ ಈ ಶ್ರೀಲಂಕಾ ಪ್ರವಾಸದ ಭಾರತೀಯ ತಂಡಕ್ಕೆ ದ್ರಾವಿಡ್ ಕೋಚ್ ಆಗಿ ತಂಡದ ಜೊತೆಗಿರಲಿದ್ದಾರೆ.
6 ಅನ್ಕ್ಯಾಪ್ಡ್ ಆಟಗಾರರಿಗೆ ಸ್ಥಾನ
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಆರ್ ಅಶ್ವಿನ್ ಇಂಥ ಅನುಭವಿಗಳಿರುವ ಒಂದು ತಂಡ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದೆ. ಹೀಗಾಗಿ ಶ್ರೀಲಂಕಾ ಪ್ರವಾಸಕ್ಕೆ ತಂಡದಲ್ಲಿ 6 ಅನ್ಕ್ಯಾಪ್ಡ್ ಆಟಗಾರರಿಗೆ ಅವಕಾಶ ನೀಡಲಾಗಿದೆ. ಆ ಆರು ಅನ್ಲ್ಯಾಪ್ಡ್ ಆಟಗಾರರೆಂದರೆ ದೇವದತ್ ಪಡಿಕ್ಕಲ್, ಚೇತನ್ ಸಕರಿಯಾ, ನಿತೀಶ್ ರಾಣಾ, ಕೃಷ್ಣಪ್ಪ ಗೌತಮ್, ಋತುರಾಜ್ ಗಾಯಕ್ವಾಡ್ ಮತ್ತು ವರುಣ್ ಚಕ್ರವರ್ತಿ. ಇನ್ನು ಸಂಜು ಸ್ಯಾಮ್ಸನ್, ಪೃಥ್ವಿ ಶಾ, ಹಾರ್ದಿಕ್ ಪಾಂಡ್ಯ, ಯುಜುವೇಂದ್ರ ಚಾಹಲ್, ಮನೀಶ್ ಪಾಂಡೆ ಮೊದಲಾದ ಪ್ರತಿಭಾನ್ವಿತರೂ ತಂಡದಲ್ಲಿದ್ದಾರೆ.
ಭಾರತ-ಶ್ರೀಲಂಕಾ ಸರಣಿಗೆ ಭಾರತ ತಂಡ
ಶಿಖರ್ ಧವನ್ (ಕ್ಯಾಪ್ಟನ್), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ಋತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್) ಯುಜುವೇಂದ್ರ ಚಾಹಲ್, ರಾಹುಲ್ ಚಾಹರ್, ಕೆ ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಾಹರ್, ನವದೀಪ್ ಸೈನಿ, ಚೇತನ್ ಸಕರಿಯಾ.
ನೆಟ್ ಬೌಲರ್ಗಳು: ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಅರ್ಷ್ದೀಪ್ ಸಿಂಗ್, ಸಾಯಿ ಕಿಶೋರ್, ಸಿಮಾರ್ಜೀತ್ ಸಿಂಗ್.