For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾ ಉದ್ವಿಗ್ನ: ಜನಶಕ್ತಿಯ ಗೆಲುವು ಎಂದ ಜಯಸೂರ್ಯ: ಟೆಸ್ಟ್ ಪಂದ್ಯಕ್ಕೂ ತಟ್ಟಿದ ಪ್ರತಿಭಟನೆ ಬಿಸಿ!

SL vs Aus 2nd Test: Protestors march near cricket stadium at Galle: Sanath Jayasuriya rise voice against Lanka President

ದ್ವೀಪರಾಷ್ಟ್ರ ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ. ಹೀಗಾಗಿ ಶ್ರೀಲಂಕಾ ಜನರ ಆಕ್ರೋಶದ ಕಟ್ಟೆಯೊಡೆದಿದ್ದು ಪ್ರತಿಭಟನೆಗಳು ಜೋರಾಗಿದೆ. ಶ್ರೀಲಂಕಾದ ಸರ್ಕಾರದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾಗಿದ್ದು ಶನಿವಾರ ಶ್ರೀಲಂಕಾದ ಅಧ್ಯಕ್ಷರ ನಿವಾಸಕ್ಕೆ ನುಗ್ಗಿದ್ದಾರೆ ಎಂದು ವರದಿಯಾಗಿದೆ. ಈ ಪ್ರತಿಭಟನೆಗೆ ಬೆದರಿರುವ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಶ್ರೀಲಂಕಾದಿಂದ ಕಾಲ್ಕಿತ್ತಿದ್ದಾರೆ. ಲಂಕಾ ನಾಡಿನಲ್ಲಿ ನಡೆಯುತ್ತಿರುವ ಈ ಪ್ರತಿಭಟನೆ ಗಾಲೆಯಲ್ಲಿ ನಡೆಯುತ್ತಿರುವ ಶ್ರೀಲಂಕಾ ಹಾಗ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯಕ್ಕೂ ಈ ಪ್ರತಿಭಟನೆಯ ಬಿಸಿ ತಟ್ಟಿದೆ.

ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ಕಳೆದ ಮೇ ತಿಂಗಳಿನಿಂದ ಸಂಪೂರ್ಣ ಹದೆಗೆಟ್ಟಿದೆ. ಆದರೆ ಅಲ್ಲಿನ ಸರ್ಕಾರ ಇದನ್ನು ಸರಿಪಡಿಸುವಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ಆಕ್ರೋಶಗಳು ಹೆಚ್ಚಾಗುತ್ತಿದ್ದು ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿದೆ. ಶನಿವಾರ ಗಾಲೆಯಲ್ಲಿರುವ ಗಾಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದ ಹೊರಭಾಗದಲ್ಲಿಯೂ ಭಾರೀ ಪ್ರಮಾಣದಲ್ಲಿ ಪ್ರತಿಭಟನಾಕಾರರು ನೆರೆದು ಸರ್ಕಾರದ ಗಮನಸೆಳೆಯುವ ಪ್ರಯತ್ನ ನಡೆಸಿದ್ದಾರೆ.

ಸರ್ಕಾರ ಬದಲಾವಣೆಗೆ ಒತ್ತಾಯ

ಗಾಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದ ಹೊರಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ನೆರೆದಿದ್ದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಸರ್ಕಾರವನ್ನು ಬದಲಾವಣೆ ಮಾಡಬೇಕು ಎಂದು ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಆದರೆ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯಕ್ಕೆ ಯಾವುದೇ ಅಡ್ಡಿಯುಂಟು ಮಾಡುವ ಪ್ರಯತ್ನವನ್ನು ಪ್ರತಿಭಟನಾಕಾರರು ನಡೆಸಿಲ್ಲ.

ಕ್ರೀಡಾಂಗಣಕ್ಕೆ ಪೊಲೀಸ್ ಸರ್ಪಗಾವಲು

ಗಾಲೆಯಲ್ಲಿ ನಡೆಯುತ್ತಿರುವ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯಕ್ಕೆ ಪ್ರತಿಭಟನಾಕಾರರು ಈವರೆಗೆ ಯಾವುದೇ ಅಡ್ಡಿಯುಂಟು ಮಾಡುವ ಪ್ರಯತ್ನಗಳನ್ನು ನಡೆಸಿಲ್ಲ. ಟೆಸ್ಟ್ ಪಂದ್ಯ ಮುಂದುವರಿದಿದೆ. ಆದರೆ ಕ್ರೀಡಾಂಗಣದ ಹೊರಗೆ ಭಾರೀ ಪ್ರಮಾಣದಲ್ಲಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಈ ಮೂಲಕ ಪೊಲೀಸ್ ಸರ್ಪಗಾವಲಿನಲ್ಲಿಯೇ ಈ ಪಂದ್ಯ ನಡೆಯುತ್ತಿದೆ.

ಕಟ್ಟೆಯೊಡೆದ ಲಂಕಾ ಆಕ್ರೋಶ

ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾ ಸಂಪೂರ್ಣವಾಗಿ ತತ್ತರಿಸಿದ್ದು ವಿದೇಶೀ ಕರೆನ್ಸಿಯ ಕೊರತೆ ತೀವ್ರವಾಗಿ ಕಾಡುತ್ತಿದೆ. ತೈಲ ಸೇರಿದಂತೆ ಕೆಲ ಮೂಲಭೂತ ಅಗತ್ಯ ವಸ್ತುಗಳನ್ನು ಆಮದು ಮಾಡಿಕೊಳ್ಳಲು ಕೂಡ ಸರ್ಕಾರಕ್ಕೆ ಅಸಾಧ್ಯವಾಗಿದ್ದು ಶ್ರೀಲಂಕಾ ಸರ್ಕಾರ ಸಂಪೂರ್ಣವಾಗಿ ಕೈಚೆಲ್ಲಿ ಕುಳಿತಿರುವುದು ಜನರನ್ನು ಮತ್ತಷ್ಟು ಆಕ್ರೋಶಕ್ಕೆ ದೂಡಿದೆ. ಇದರ ಭಾಗವಾಗಿ ಪ್ರತಿಭಟನಾಕಾರರು ಶ್ರೀಲಂಕಾ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

ಜನಶಕ್ತಿ ಗೆದ್ದಿದೆ ಎಂದ ಸನತ್ ಜಯಸೂರ್ಯ

ಇನ್ನು ಶ್ರೀಲಂಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ತಮ್ಮ ಬೆಂಬಲ ಸೂಚಿಸಿದ್ದು ಪ್ರತಿಭಟನಾನಿರತರ ಪರವಾಗಿ ತಮ್ಮ ಧ್ವನಿಗೂಡಿಸಿದ್ದಾರೆ. ಸರಣಿ ಟ್ವೀಟ್‌ಗಳ ಮೂಲಕ ಜಯಸೂರ್ಯ "ನಾನು ಶ್ರೀಲಂಕಾದ ಜನತೆಯೊಂದಿಗೆ ಯಾವಾಗಲೂ ನಿಲ್ಲುತ್ತೇನೆ. ಶೀಘ್ರದಲ್ಲಿಯೇ ವಿಜಯದ ಸಂಭ್ರಮವನ್ನು ಆಚರಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದರೆ ಮತ್ತೊಂದು ಟ್ವೀಟ್‌ನಲ್ಲಿ "ಮುತ್ತಿಗೆ ಮುಗಿದಿದ್ದು ನಿಮ್ಮ ಭದ್ರಕೋಟೆ ಕುಸಿದಿದೆ. ಅರಗಳಯ್ಯ ಮತ್ತು ಜನಶಕ್ತಿ ಗೆದ್ದಿದೆ. ಘನತೆಯಿಂದ ರಾಜೀನಾಮೆ ನೀಡಿ" ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಜಯಸೂರ್ಯ ಪ್ರತಿಭಟನೆಯಲ್ಲೂ ನೇರವಾಗಿ ಭಾಗಿಯಾಗಿದ್ದಾರೆ ಎಂದು ಕೂಡ ವರದಿಯಾಗಿದೆ.

Story first published: Saturday, July 9, 2022, 18:12 [IST]
Other articles published on Jul 9, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+