
ಕೊರೊನ ಭೀತಿಯ ಮಧ್ಯೆ ಈ ಬಾರಿಯ ಐಪಿಎಲ್ಅನ್ನು ವಿದೇಶದಲ್ಲಿ ಆಯೋಜನೆ ಮಾಡುವಲ್ಲಿ ಬಿಸಿಸಿಐ ಸಫಲವಾಗಿದೆ. ಟೂರ್ನಿಯೂ ದೊಡ್ಡಮಟ್ಟದಲ್ಲಿ ಯಶಸ್ಸನ್ನು ಪಡೆದುಕೊಳ್ಳುತ್ತಿದೆ. ಈ ಯಶಸ್ಸಿನ ಬೆನ್ನಲ್ಲೇ ಬಿಸಿಸಿಐ ಮತ್ತಂದು ಪ್ರಮುಖ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಯ ಆಯೋಜನೆಗೆ ಸಿದ್ಧವಾಗಿದೆ.
ಭಾರತದಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯನ್ನು ಮುಂದಿನ ವರ್ಷ ಜನವರಿಯಿಂದ ಮಾರ್ಚ್ ಮಧ್ಯೆ ಆಯೋಜನೆಗೆ ಮಾಡಲು ಈ ಹಿಂದೆಯೇ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಆದರೆ ಕೊರೊನಾ ವೈರಸ್ನ ಕಾರಣದಿಂದಾಗಿ ಈ ಸರಣಿ ಆಯೋಜನೆ ಬಗ್ಗೆ ಗೊಂದಲಗಳು ಇವೆ. ಈ ಬಗ್ಗೆ ಸೌರವ್ ಗಂಗೂಲಿ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
ಇತ್ತೀಚೆಗೆ ಯುಎಇ ಜೊತೆಗೆ ಕ್ರಿಕೆಟ್ ಆಯೋಜನೆ ವಿಚಾರವಾಗಿ ಒಪ್ಪಂದವೊಂದನ್ನು ಮಾಡಕೊಳ್ಳಲಾಗಿತ್ತು. ಹಾಗಾಗಿ ಇಂಗ್ಲೆಂಡ್ ವಿರುದ್ಧ ಭಾರತ ಆಯೋಜಿಸುವ ಈ ಸರಣಿ ಯುಎಇನಲ್ಲಿ ನಡೆಯಲಿದೆ ಎಂಬ ಬಗ್ಗೆ ಸಾಕಷ್ಟು ಮಾತುಗಳು ಕೇಳಿ ಬಂದಿತ್ತು. ಈ ವಿಚಾರವಾಗಿಯೂ ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಹಾಗೂ ಏಕದಿನ ಮತ್ತು ಮೂರು ಟಿ20 ಸರಣಿಯನ್ನು ಭಾರತದಲ್ಲೇ ಆಯೋಜನೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಗಂಗೂಲಿ ಸ್ಪಷ್ಟಪಡಿಸಿದ್ದಾರೆ. 'ಭಾರತದ ಕ್ರೀಡಾಂಗಣದಲ್ಲೇ ಈ ಸರಣಿಯನ್ನು ಆಯೋಜಿಸಲು ನಾವು ಪ್ರಯತ್ನಿಸಲಿದ್ದೇವೆ. ಆದರೆ ಯುಎಇನಲ್ಲಿ ಆಯೋಜನೆ ಮಾಡುವ ಲಾಭವೇನೆಂದರೆ ಇಲ್ಲಿ ಮೂರು ಕ್ರೀಡಾಂಗಣಗಳಿವೆ' ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.
ಮುಂಬೈನಲ್ಲೂ ನಾವು ಇದೇ ರೀತಿಯ ವ್ಯವಸ್ಥೆಯನ್ನು ಹೊಂದಿದ್ದೇವೆ. ಸಿಸಿಐ, ವಾಂಖೆಡೆ ಹಾಗೂ ಡಿವೈ ಪಾಟೀಲ್ ಕ್ರೀಡಾಂಗಣಗಳಿವೆ. ಈಡನ್ ಗಾರ್ಡನ್ಅನ್ನು ಕುಡ ನಾವು ಹೊಂದಿದ್ದೇವೆ. ಅಲ್ಲಿ ನಾವು ಜೈವಿಕ ವಲಯವನ್ನು ಸೃಷ್ಟಿಸಿಕೊಳ್ಳಬೃಕಾಗುತ್ತದೆ. ಭಾರತದಲ್ಲಿ ಕ್ರಿಕೆಟ್ ಆರಂಭವಾಗುವುದನ್ನು ನಾವು ಬಯಸುತ್ತೇವೆ ಎಂದು ಗಂಗೂಲಿ ಹೇಳಿದ್ದಾರೆ.