ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಮುಂದಿನವಾರದಿಂದ ಆರಂಭವಾಗಲಿದೆ. 12ನೇ ತಾರೀಕು ಮೊದಲನೇ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ತಂಡವನ್ನು ಇನ್ನಷ್ಟೇ ಪ್ರಕಟಿಸಗೊಳಿಸಬೇಕಿದೆ. ಶನಿವಾರ ಸಂಜೆ ಅಥವಾ ಭಾನುವಾರ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆ.
ಹೊಸ ಆಯ್ಕೆ ಸಮಿತಿ ತನ್ನ ಮೊದಲ ಟಾಸ್ಕ್ಅನ್ನು ಎದುರಿಸಲಿದ್ದು ಯಾರೆಲ್ಲಾ ಆಯ್ಕೆಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಕನ್ನಡಿಗ ಸುನಿಲ್ ಜೋಶಿ ನೇತೃತ್ವದ ಹೊಸ ಆಯ್ಕೆ ಮಂಡಳಿಯ ಮೊದಲ ಜವಾಬ್ಧಾರಿಯಲ್ಲೇ ಕನ್ನಡಿಗನಿಗೆ ಟೀಮ್ ಇಂಡಿಯಾದ ಚಿಕ್ಕಾಣಿ ಸಿಗುವ ಸಾಧ್ಯತೆಯೊಂದು ಕಂಡುಬರುತ್ತಿದೆ.
ಟೀಮ್ ಇಂಡಿಯಾದ ಪ್ರಮುಖ ಆಟಗಾರ ಕೆ.ಎಲ್ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.