
ನವದೆಹಲಿ, ಆಗಸ್ಟ್ 24: ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಶನಿವಾರ (ಆಗಸ್ಟ್ 24) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜೇಟ್ಲಿ ವಿಧಿವಶರಾಗಿದ್ದಕ್ಕೆ ಭಾರತದ ಕ್ರೀಡಾಲೋಕ ಸಂತಾಪ ಸೂಚಿಸಿದೆ.
66ರ ಹರೆಯದವರಾಗಿದ್ದ ಅರುಣ್ ಜೇಟ್ಲಿ ಧೀರ್ಘ ಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ನವದೆಹಲಿಯ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶನಿವಾರ ಮಧ್ಯಾಹ್ನದ ಹೊತ್ತಿಗೆ ಜೇಟ್ಲಿ ಕೊನೆಯುಸಿರೆಳೆದಿದ್ದಾರೆ.
ಡೆಲ್ಲಿ ಆ್ಯಂಡ್ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದ ಅರುಣ್ ಜೇಟ್ಲಿ ಸಾವಿಗೆ ಭಾರತದ ಮಾಜಿ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್, ಗೌತಮ್ ಗಂಭೀರ್ ಸೇರಿದಂತೆ ಅನೇಕರು ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಕನ್ನಡಿಗ, ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆ ಬೇಸರ.
ಕ್ರಿಕೆಟರ್ ಶಿಖರ್ ಧವನ್ ಟ್ವೀಟ್.
ಮಹಿಳಾ ರಸ್ಲರ್ ಗೀತಾ ಫೋಗಟ್ ಸಂತಾಪ.
ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಟ್ವೀಟ್.
ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಬೇಸರ.
ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ಟ್ವೀಟ್.