
ಘಟನೆಗೆ ಕಾರಣವೇನು?
ಈ ಘಟನೆ ನಡೆದಿದ್ದು ಗುಜರಾತ್ ಟೈಟನ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ರೋಚಕ ಪಂದ್ಯದ ಅಂತಿಮ ಓವರ್ನ ಸಂದರ್ಭದಲ್ಲಿ. ಈ ಓವರ್ನಲ್ಲಿ ಗುಜರಾತ್ ಟೈಟನ್ಸ್ ಗೆಲುವಿಗೆ 22 ರನ್ಗಳ ಅಗತ್ಯವಿತ್ತು. ರಾಹುಲ್ ತೆವಾಟಿಯಾ ಸ್ಟ್ರೈಕ್ನಲ್ಲಿದ್ದರೆ ಮತ್ತೊಂದು ತುದಿಯಲ್ಲಿ ರಶೀದ್ ಖಾನ್ ಇದ್ದರು. ಮಾರ್ಕೋ ಜಾನ್ಸನ್ ಎಸೆದ ಈ ಓವರ್ನ ಮೊದಲ ಎಸೆತವನ್ನು ರಾಹುಲ್ ತೆವಾಟಿಯಾ ಸಿಕ್ಸರ್ಗೆ ಅಟ್ಟಿದ್ದರು. ಅದಾದ ಮುಂದಿನ ಎಸೆತದಲ್ಲಿ ಒಂದು ರನ್ ಬಂದಿತ್ತು. ಹೀಗಾಗಿ ರಶೀದ್ ಖಾನ್ ಸ್ಟ್ರೈಕ್ಗೆ ಬಂದಿದ್ದರು. ಮೂರನೇ ಎಸೆತವನ್ನು ರಶೀದ್ ಖಾನ್ ಭರ್ಜರಿ ಸಿಕ್ಸರ್ಗೆ ಅಟ್ಟಿದ್ದರು. ಮುಂದಿನ ಎಸೆತದಲ್ಲಿ ಯಾವುದೇ ರನ್ ಬಂದಿರಲಿಲ್ಲ. ಅಂತಿಮ ಎರಡು ಎಸೆತಗಳಲ್ಲಿ 9 ರನ್ ಗಳಿಸುವ ಸವಾಲು ಜಿಟಿ ಮುಂದಿತ್ತು. ಐದನೇ ಎಸೆತವನ್ನು ಕೂಡ ರಶೀದ್ ಖಾನ್ ಭರ್ಜರಿಯಾಗಿ ಸಿಕ್ಸರ್ಗೆ ಅಟ್ಟಿದ್ದರು.
ಸಿಟ್ಟಿಗೆದ್ದ ಮುರಳೀಧರನ್
ರಶೀದ್ ಖಾನ್ ಐದನೇ ಎಸೆತವನ್ನು ಸಿಕ್ಸರ್ಗೆ ಅಟ್ಟುತ್ತಿದ್ದಂತೆಯೇ ಡಗೌಟ್ನಲ್ಲಿ ಕುಳಿತಿದ್ದ ಸನ್ರೈಸರ್ಸ್ ಹೈದರಾಬಾದ್ ತಮಡದ ಕೋಚ್ ಮುತ್ತಯ್ಯ ಮುರಳೀಧರನ್ ಸಿಟ್ಟಿನಿಂದ ಎದ್ದು ಬೌಲಿಂಗ್ ನಡೆಸುತ್ತಿದ್ದ ಮಾರ್ಕೋ ಜಾನ್ಸನ್ ಮೇಲೆ ಕಿಡಿ ಕಾರಿದ್ದಾರೆ. ದಿಗ್ಗಜ ಕ್ರಿಕೆಟಿಗ ಈ ರೀತಿ ತಾಳ್ಮೆ ಕಳೆದುಕೊಂಡಿದ್ದು ನೋಡಿ ಅಭಿಮಾನಿಗಳು ಅಚ್ಚರಿ ಪಟ್ಟಿದ್ದಾರೆ.

ರೋಚಕ ಗೆಲುವು ಸಾಧಿಸಿದ ಗುಜರಾತ್
ಈ ಪಂದ್ಯದ ಕೊನೆಯ ಎಸೆತದಲ್ಲಿ ಗುಜರಾತ್ ಟೈಟನ್ಸ್ ಗೆಲುವಿಗೆ 3 ರನ್ಗಳ ಅಗತ್ಯವಿತ್ತು. ಓವರ್ನ ಅಂತಿಮ ಎಸೆತವನ್ನು ಕೂಡ ರಶೀದ್ ಖಾನ್ ಸಿಕ್ಸರ್ಗೆ ಅಟ್ಟುವ ಮೂಲಕ ಗಯಜರಾತ್ ಟೈಟನ್ಸ್ ತಂಡಕ್ಕೆ ರೋಚಕ ಗೆಲುವನ್ನು ತಂದಿತ್ತಿದ್ದಾರೆ. ಈ ಮೂಲಕ ಟೂರ್ನಿಯ ಮೊತ್ತಲ ಸುತ್ತೊನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಅನುಭವಿಸಿದ್ದ ಸೋಲಿಗೆ ಜಿಟಿ ಸೇಡು ತೀರಿಸಿಕೊಂಡಂತಾಗಿದೆ. ಈ ಮೂಲಕ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು ಪ್ಲೇಆಫ್ಗೆ ಮತ್ತಷ್ಟು ಹತ್ತಿರವಾಗಿದೆ.

ಪ್ಲೇಯಿಂಗ್ XI
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ
ಬೆಂಚ್: ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ವರುಣ್ ಆರೋನ್, ಜಯಂತ್ ಯಾದವ್, ವಿಜಯ್ ಶಂಕರ್, ಗುರುಕೀರತ್ ಸಿಂಗ್ ಮಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಸಾಯಿ ಸುದರ್ಶನ್, ನೂರ್ ಅಹ್ಮದ್
ಸನ್ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್
ಬೆಂಚ್: ಜಗದೀಶ ಸುಚಿತ್, ಸೀನ್ ಅಬಾಟ್, ರವಿಕುಮಾರ್ ಸಮರ್ಥ್, ಶ್ರೇಯಸ್ ಗೋಪಾಲ್, ಗ್ಲೆನ್ ಫಿಲಿಪ್ಸ್, ವಿಷ್ಣು ವಿನೋದ್, ಪ್ರಿಯಮ್ ಗಾರ್ಗ್, ಕಾರ್ತಿಕ್ ತ್ಯಾಗಿ, ರೊಮಾರಿಯೋ ಶೆಫರ್ಡ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ಸೌರಭ್ ದುಬೆ


Click it and Unblock the Notifications












