ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲುವ ಆಸೆಯಿಂದ ಮತ್ತೊಮ್ಮೆ ಟಿ20 ವಿಶ್ವಕಪ್ ಭಾರತಕ್ಕೆ ತರುವ ಪ್ಲ್ಯಾನ್ ಮಾಡುತ್ತಿದೆ. ಈ ನಿಟ್ಟಿನಲ್ಲಿ ತಂಡ ಬಲಿಷ್ಠ ಗೊಳಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಚಿಂತೆ ನಡೆಸಿದೆ. ಈ ಬೆನ್ನಲ್ಲೆ ಎರಡು ಬಾರಿ ಐಸಿಸಿ ವಿಶ್ವಕಪ್ ವಿಜೇತ ತಂಡದ ಸದಸ್ಯ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ಗೆ ಮರಳುವ ಸೂಚನೆಯನ್ನು ನೀಡಿದ್ದಾರೆ.
ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ಗೆ ಈ ಪ್ಲೇಯರ್ ಆಗಮನದಿಂದ ನಿಶ್ಚಿತವಾಗಿಯೂ ತಂಡಕ್ಕೆ ಬೂಸ್ಟ್ ಸಿಕ್ಕಂತೆ ಆಗುತ್ತದೆ. ಪ್ಲೇಯರ್ ಜವಾಬ್ದಾರಿಯನ್ನು ಗುರುತಿಸುವುದರಿಂದ ಹಿಡಿದು, ಆಟಗಾರರ ಶಾಟ್ ಸೆಲೆಕ್ಷನ್ ಬಗ್ಗೆಯೂ ಈ ಪ್ಲೇಯರ್ ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ. 2007 ಐಸಿಸಿ ಟಿ20 ವಿಶ್ವಕಪ್ನಲ್ಲಿ ಒಂದೇ ಓವರ್ನಲ್ಲಿ ಆರು ಸಿಕ್ಸರ್ ಬಾರಿಸಿ ಯುವರಾಜ್ ಸಿಂಗ್ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ ಸೇರಲು ಕಾತುರಾಗಿದ್ದಾರೆ.

ಭಾರತ ತಂಡದ ಮಾಜಿ ಬ್ಯಾಟ್ಸ್ಮನ್ ಯುವರಾಜ್ ಸಿಂಗ್ ಸ್ಫೋಟಕ ಬ್ಯಾಟಿಂಗ್ಗೆ ಹೆಸರುವಾಸಿ. 2011 ರ ODI ವಿಶ್ವಕಪ್ನಲ್ಲಿ, ಅವರು ಭಾರತ ತಂಡಕ್ಕೆ ಅನೇಕ ಪಂದ್ಯಗಳನ್ನು ಗೆಲ್ಲಲು ಸಹಾಯ ಮಾಡಿದ ಪ್ಲೇಯರ್. ಆ ವಿಶ್ವಕಪ್ನ ಸರಣಿ ಶ್ರೇಷ್ಠ ಆಟಗಾರರಾಗಿದ್ದರು. ಯುವರಾಜ್ ಸಿಂಗ್ 2017 ರಲ್ಲಿ ಭಾರತಕ್ಕಾಗಿ ಕೊನೆಯ ODI ಆಡಿದ್ದರು. ಮತ್ತು 10 ಜೂನ್ 2019 ರಂದು ಕ್ರಿಕೆಟ್ನಿಂದ ನಿವೃತ್ತರಾದರು. ಆದರೆ ಇದೀಗ ಮತ್ತೊಮ್ಮೆ ಟೀಂ ಇಂಡಿಯಾ ಸೇರುವ ಇಚ್ಛೆ ವ್ಯಕ್ತಪಡಿಸಿದ್ದಾರೆ.
ಯುವರಾಜ್ ಸೆಂಟರ್ ಆಫ್ ಎಕ್ಸಲೆನ್ಸ್' ಅನ್ನು ಉದ್ಘಾಟಿಸಿದ ಯುವರಾಜ್ ಸಿಂಗ್, ನಾವು ಸಾಕಷ್ಟು ಫೈನಲ್ಗಳನ್ನು ಆಡಿದ್ದೇವೆ ಆದರೆ ಒಂದನ್ನು ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು. 2017 ರಲ್ಲಿ, ನಾವು ಪಾಕಿಸ್ತಾನದ ವಿರುದ್ಧ ಸೋತ ಫೈನಲ್ನಲ್ಲಿ ನಾನು ಭಾಗವಾಗಿದ್ದೆ. ಮುಂಬರುವ ವರ್ಷಗಳಲ್ಲಿ ನಾವು ಖಂಡಿತವಾಗಿಯೂ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ. ಒಂದು ದೇಶವಾಗಿ ಮತ್ತು ಭಾರತ ತಂಡವಾಗಿ, ನಾವು ಒತ್ತಡದಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗಿದೆ. ಕೆಲವು ವಿಷಯಗಳಲ್ಲಿ ಕೊರತೆಯಿದೆ ಎಂದು ನಾನು ಭಾವಿಸುತ್ತೇನೆ, ದೊಡ್ಡ ಪಂದ್ಯವಿದ್ದಾಗ ನಾವು ಫಾರ್ಮ್ನಲ್ಲಿದ್ದರೆ ಉತ್ತಮ ಎಂದಿದ್ದಾರೆ.

ಯುವ ಆಟಗಾರರಿಗೆ ಸ್ಫೂರ್ತಿ ನೀಡುವುದು, ಒತ್ತಡವನ್ನು ನಿಭಾಯಿಸುವುದು ಮತ್ತು ಅವರ ಆಟವನ್ನು ಹೇಗೆ ಆಡಬೇಕು ಎಂಬುದನ್ನು ಕಲಿಸುವುದು ನನ್ನ ಉದ್ದೇಶವಾಗಿದೆ ಎಂದು ಯುವರಾಜ್ ಹೇಳಿದ್ದಾರೆ. ಇದು ಸವಾಲಾಗಿ ಪರಿಣಮಿಸಿದೆ. ನಾವು ಮ್ಯಾಚ್ ಫಿನಿಶರ್ಗಳನ್ನು ಹೊಂದಿದ್ದೇವೆ ಮತ್ತು ಒತ್ತಡದಲ್ಲಿ ಬ್ಯಾಟ್ ಮಾಡುವ ಆಟಗಾರರಿದ್ದಾರೆ. ಈ ಕೆಲಸವನ್ನು ಒಬ್ಬ ಅಥವಾ ಇಬ್ಬರು ಆಟಗಾರರಲ್ಲ ಆದರೆ ಇಡೀ ತಂಡ ಅದನ್ನು ಮಾಡಬೇಕು ಎಂದು ಹೇಳಿದ್ದಾರೆ.
ನಾನು ಮಾರ್ಗದರ್ಶನ ಮಾಡಲು ಇಷ್ಟಪಡುತ್ತೇನೆ. ಮುಂಬರುವ ವರ್ಷಗಳಲ್ಲಿ, ನಾನು ಕ್ರಿಕೆಟ್ಗೆ ಮರಳಲು ಮತ್ತು ಯುವಕರ ಆಟವನ್ನು ಸುಧಾರಿಸಲು ಸಹಾಯ ಮಾಡಲು ಬಯಸುತ್ತೇನೆ. ದೊಡ್ಡ ಪಂದ್ಯಾವಳಿಗಳಲ್ಲಿ ನಾವು ಸಾಕಷ್ಟು ಮಾನಸಿಕ ಸವಾಲುಗಳನ್ನು ಎದುರಿಸುತ್ತೇವೆ ಎಂದು ನಾನು ಭಾವಿಸುತ್ತೇನೆ. ಮಾನಸಿಕವಾಗಿ ನಾನು ಭವಿಷ್ಯದಲ್ಲಿ ಈ ಆಟಗಾರರೊಂದಿಗೆ ಕೆಲಸ ಮಾಡಬಹುದು ಎಂದು ನಾನು ನಂಬುತ್ತೇನೆ. ವಿಶೇಷವಾಗಿ ಮಧ್ಯಮ ಕ್ರಮಾಂಕದಲ್ಲಿ ನಾನು ಕೊಡುಗೆ ನೀಡಬಹುದೆಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.
ಭಾರತ ತಂಡ ಕೊನೆಯದಾಗಿ 2013ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಅಂದಿನಿಂದ ಟೀಂ ಇಂಡಿಯಾ ಐಸಿಸಿ ಪ್ರಶಸ್ತಿ ಗೆದ್ದಿಲ್ಲ. 2023ರ ಏಕದಿನ ವಿಶ್ವಕಪ್ನ ಫೈನಲ್ನಲ್ಲಿ ಭಾರತ ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತ್ತು. ಇದರಿಂದಾಗಿ ಐಸಿಸಿ ಪ್ರಶಸ್ತಿ ಗೆಲ್ಲುವ ಟೀಂ ಇಂಡಿಯಾ ಕಾಯುವಿಕೆ ಮತ್ತಷ್ಟು ಹೆಚ್ಚಿದೆ.