ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸುರಕ್ಷಿತವಾಗಿರಿ, ನಿಮ್ಮ ಸುತ್ತಮುತ್ತಲಿನವರಿಗೆ ನೆರವಾಗಿ: ಜಡೇಜಾ

Stay safe and help those around you: Ravindra Jadeja

ನವದೆಹಲಿ: ಕೋವಿಡ್-19 ದ್ವಿತೀಯ ಅಲೆ ಭಾರತದಲ್ಲಿ ಗಂಭೀರ ಪರಿಣಾಮ ಬೀರಿದೆ. ಕೊರೊನಾವೈರಸ್‌ನಿಂದಾಗಿ ಭಾರತದಲ್ಲಿ ಜನಜೀವನ ಸಂಕಷ್ಟಕ್ಕೀಡಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಆಲ್ ರೌಂಡರ್ ರವೀಂದ್ರ ಜಡೇಜಾ ಪಿಡುಗಿನ ಸಂದರ್ಭದಲ್ಲಿ ಜನರಿಗೆ ಸಂದೇಶ ನೀಡಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಮೂವರು ವಿದೇಶಿ ಆಟಗಾರರುಈ ಬಾರಿಯ ಐಪಿಎಲ್‌ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಮೂವರು ವಿದೇಶಿ ಆಟಗಾರರು

ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್‌ನಲ್ಲಿ ಒಂದು ವಿಡಿಯೋ ಶೇರ್ ಮಾಡಿತ್ತು. ಇದರಲ್ಲಿ ಕಾಣಿಸಿಕೊಂಡಿದ್ದ ಜಡೇಜಾ, 'ಮನೆಯಲ್ಲಿರಿ, ಸುರಕ್ಷಿತವಾಗಿರಿ. ಜೊತೆಗೆ ನಿಮ್ಮ ಕುಟುಂಬಸ್ಥರು ಮತ್ತು ಸುತ್ತಮುತ್ತಲಿನವರನ್ನೂ ಸುರಕ್ಷಿತವಾಗಿಡಿ. ಯಾಕೆಂದರೆ ಈ ಸಂಕಷ್ಟದ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಡಬೇಕು,' ಎಂದಿದ್ದಾರೆ.

'ದಯವಿಟ್ಟು ನಿಮ್ಮ ಮಾಸ್ಕ್ ಧರಿಸಿ, ಆಗಾಗ ಕೈಗೆ ಸ್ಯಾನಿಟೈಸರ್ ಬಳಸುತ್ತಿರಿ. ಹಾಗೆ ನಿಮ್ಮ ಸುತ್ತಮುತ್ತಲಿನವರಿಗೆ ಸಹಾಯ ಬೇಕಿದ್ದರೆ ಸಹಾಯ ಮಾಡಿ. ಯಾಕೆಂದರೆ ಕೆಲವೊಮ್ಮೆ ಕೆಲವರು ಸಹಾಯ ಕೇಳಲು ಅಂಜಿಕೊಳ್ಳುತ್ತಾರೆ. ಹೀಗಾಗಿ ಮುಜುಗರವಿಲ್ಲದೆ ಮುಂದೆ ಬಂದು ಸಹಾಯ ಬೇಕಿದ್ದರೆ ಕೇಳಲು ಹೇಳಿ,' ಎಂದು ಜಡೇಜಾ ಜನರಲ್ಲಿ ಕೋರಿಕೊಂಡಿದ್ದಾರೆ.

ಐಪಿಎಲ್ ನಡೆಯದಿದ್ರೆ ಬಿಸಿಸಿಐಗೆ ಆಗೋ ನಷ್ಟವೆಷ್ಟು?: ಸತ್ಯ ಬಾಯ್ಬಿಟ್ಟ ಗಂಗೂಲಿ!ಐಪಿಎಲ್ ನಡೆಯದಿದ್ರೆ ಬಿಸಿಸಿಐಗೆ ಆಗೋ ನಷ್ಟವೆಷ್ಟು?: ಸತ್ಯ ಬಾಯ್ಬಿಟ್ಟ ಗಂಗೂಲಿ!

ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಿದ್ದಷ್ಟೇ ಅಲ್ಲ, ಇಂಡಿಯನ್ ಪ್ರೀಮಿಯರ್ ಲೀಗ್‌ ಬಯೋಬಬಲ್ ಒಳಗೂ ಸೋಂಕು ಪ್ರವೇಶಿಸಿ ಭೀತಿ ಹುಟ್ಟಿಸಿತ್ತು. ಹೀಗಾಗಿ ಉದ್ದೇಶಿತ ಟೂರ್ನಿಯನ್ನು ಅಮಾನತುಗೊಳಿಸಲಾಗಿದೆ.

Story first published: Friday, May 7, 2021, 17:42 [IST]
Other articles published on May 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X