For Quick Alerts
ALLOW NOTIFICATIONS  
For Daily Alerts
 

ಟೀಮ್ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವ ವಿಶ್ವಾಸ ವ್ಯಕ್ತಪಡಿಸಿದ ಕನ್ನಡಿಗ

 Still have a ‘World Cup’ left in me, admits Robin Uthappa

ಟೀಮ್ ಇಂಡಿಯಾದಲ್ಲಿ ಸ್ಥಾನವನ್ನು ಕಳೆದುಕೊಡಿರುವ ಕರ್ನಾಟಕ ಮೂಲದ ಅನುಭವಿ ಆಟಗಾರ ಉತ್ತಪ್ಪ ಮತ್ತೆ ಭಾರತ ಕ್ರಿಕೆಟ್ ತಂಡಕ್ಕೆ ಮರಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಟೀಮ್ ಇಂಡಿಯಾಗೆ ನಾನು ಮತ್ತೆ ಬಂದೇ ಬರುತ್ತೇನೆ ನನ್ನಲ್ಲಿನ್ನೂ ಒಂದು ವಿಶ್ವಕಪ್ ಆಡುವ ಸಾಮರ್ಥ್ಯ ಇದೆ ಎಂದು ಉತ್ತಪ್ಪ ಹೇಳಿಕೊಂಡಿದ್ದಾರೆ.

2007ರ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಬಲಗೈ ಬ್ಯಾಟ್ಸ್‌ಮನ್‌ ಉತ್ತಪ್ಪ, ಟೀಮ್ ಇಂಡಿಯಾದಲ್ಲಿ ಮಿಂಚಿದ್ದರು. ಆದರೆ ಆ ಬಳಿಕ ಉತ್ತಪ್ಪ ತಂಡದಲ್ಲಿ ಖಾಯಂ ಸ್ಥಾನವನ್ನು ಗಳಿಸಿಕೊಳ್ಳುವಲ್ಲಿ ವಿಫಲರಾದರು. 2015ರ ಬಳಿಕ ಉತ್ತಪ್ಪ ಟೀಮ್ ಇಂಡಿಯಾದಲ್ಲಿ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಈ ಮಧ್ಯೆ ಉತ್ತಪ್ಪ ಮತ್ತೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳುವ ಬಗ್ಗೆ ವಿಶ್ವಾಸದ ಮಾತುಗಳನ್ನಾಡಿದ್ದಾರೆ.

ನನ್ನಲ್ಲಿನ್ನೂ ಸಾಕಷ್ಟು ಕ್ರಿಕೆಟ್ ಉಳಿದುಕೊಂಡಿದೆ

ನನ್ನಲ್ಲಿನ್ನೂ ಸಾಕಷ್ಟು ಕ್ರಿಕೆಟ್ ಉಳಿದುಕೊಂಡಿದೆ

ಕ್ರಿಕ್‌ ಇನ್ಫೋ ಜೊತೆಗೆ ಮಾತನಾಡಿದ ಸಂದರ್ಭದಲ್ಲಿ ಕರ್ನಾಟಕದ ರಾಬಿನ್ ಉತ್ತಪ್ಪ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ. ಚುಟುಕು(ಟಿ20 ಕ್ರಿಕೆಟ್) ಮಾದರಿಯಲ್ಲಿ ಟೀಮ್ ಇಂಡಿಯಾಗೆ ಮತ್ತೆ ಮರಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಫಿನಿಷರ್ ಆಗಿ ಬರುವೆ

ಫಿನಿಷರ್ ಆಗಿ ಬರುವೆ

ಟೀಮ್ ಇಂಡಿಯಾದಲ್ಲಿ ಸ್ಥಾನವನ್ನು ಪಡೆದುಕೊಮಡಿದ್ದ ಸದರ್ಭದಲ್ಲಿ ಉತ್ತಪ್ಪ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದರು. ಆದರೆ ಈಗ ಉತ್ತಪ್ಪ ಆರಂಭಿಕ ಸ್ಥಾನದ ಮೇಲೆ ಕಣ್ಣಿಟ್ಟಿಲ್ಲ. ಟೀಮ್ ಇಂಡಿಯಾಗೆ ಉತ್ತಮ ಫಿನಿಷರ್ ಆಗಬಲ್ಲೆ ಎಂಬ ವಿಶ್ವಾಸವನ್ನು ಹೊಂದಿದ್ದಾರೆ. ಫಿನಿಷರ್ ಆಗಿಯೇ ಕಮ್‌ಬ್ಯಾಕ್ ಮಾಡುತ್ತೇನೆ ಎಂದಿದ್ದಾರೆ ರಾಬಿನ್ ಉತ್ತಪ್ಪ.

 2015ರಿಂದ ಟೀಮ್ ಇಂಡಿಯಾದಲ್ಲಿ ಅವಕಾಶವಿಲ್ಲ

2015ರಿಂದ ಟೀಮ್ ಇಂಡಿಯಾದಲ್ಲಿ ಅವಕಾಶವಿಲ್ಲ

ಕರ್ನಾಟಕದ ಅನುಭವಿ ಆಟಗಾರ 2011ರಿಂದ ಈವರೆಗೆ ಟೀಮ್ ಇಂಡಿಯಾ ಪರವಾಗಿ ಪರ 8 ಏಕದಿನ ಮತ್ತು ನಾಲ್ಕು ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ.2015ರ ಜೂಲೈನಲ್ಲಿ ಜಿಂಬಾಬ್ವೆ ಪ್ರವಾಸದ ವೇಳೆ ಕೊನೆಯದಾಗಿ ಭಾರತ ತಂಡದ ಪರವಾಗಿ ಆಡಿದ್ದರು.

ಕೆಕೆಆರ್‌ನಲ್ಲಿ ಉತ್ತಪ್ಪ ಮಿಂಚು

ಕೆಕೆಆರ್‌ನಲ್ಲಿ ಉತ್ತಪ್ಪ ಮಿಂಚು

ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಕೆಕೆಆರ್ ಸೇರಿದಂತೆ ಪ್ರಮುಖ ತಂಡಗಳ ಪರ ಆಡಿ ಮಿಂಚಿರುವ ಉತ್ತಪ್ಪ, ಐಪಿಎಲ್‌ 2020 ಟೂರ್ನಿ ಸಲುವಾಗಿ ಕಳೆದ ಡಿಸೆಂಬರ್‌ನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್‌ ಪಾಲಾಗಿದ್ದರು.

ಟಿ20 ಕ್ರಿಕೆಟ್‌ ಮೇಲೆ ಚಿತ್ತ

ಟಿ20 ಕ್ರಿಕೆಟ್‌ ಮೇಲೆ ಚಿತ್ತ

'' ನಾನು ಯಾವಾಗಲು ಸ್ಪರ್ಧಾತ್ಮಕವಾಗಿರಲು ಬಯಸುತ್ತೇನೆ. ನನ್ನಲ್ಲಿ ಇನ್ನೂ ಆಟವಿದೆ, ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಉತ್ತಮವಾಗಿ ಆಡಲು ಬಯಸುತ್ತೇನೆ. ನನ್ನಲ್ಲಿ ಮತ್ತೊಂದು ವಿಶ್ವಕಪ್ ಆಡುವ ಸಾಮರ್ಥ್ಯ ಉಳಿದಿದೆ ಎಂದು ಪ್ರಾಮಾಣಿಕವಾಗಿ ನಂಬಿದ್ದೇನೆ. ಇದನ್ನು ಸಾಧಿಸುವ ಪ್ರಯತ್ನದಲ್ಲಿದ್ದೇನೆ, ಪ್ರಮುಖವಾಗಿ ಟಿ20 ಕ್ರಿಕೆಟ್‌ನಲ್ಲಿ," ಎಂದು ಉತ್ತಪ್ಪ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಉತ್ತಪ್ಪಗೆ ಉಳಿದಿರುವ ಕಡೇಯ ಅವಕಾಶ

ಉತ್ತಪ್ಪಗೆ ಉಳಿದಿರುವ ಕಡೇಯ ಅವಕಾಶ

ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗನಾಗಿರುವ ರಾಬಿನ್ ಉತ್ತಪ್ಪ ತಾವು ಹೇಳಿಕೊಂಡಂತೆ ತಂಡದಲ್ಲಿ ಸ್ಥಾನವನ್ನು ಗಳಿಸಿಕೊಳ್ಳಬೇಕಾದರೆ ದಾರಿ ಸುಲಭವಿಲ್ಲ. ಸದ್ಯ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಐಪಿಎಲ್ ನಡೆಯುವುದೇ ಅನುಮಾನವೆನಿಸಿದೆ. ಐಪಿಎಲ್ ನಡೆಯದ ಹೊರತಾಗಿ ಬೇರೆ ದಾರಿ ಉತ್ತಪ್ಪ ಮುಂದಿಲ್ಲ. ಐಪಿಎಲ್‌ ನಡೆದರೂ ಅಮೋಘ ಪ್ರದರ್ಶನವನ್ನು ನೀಡಿ ಆಯ್ಕೆಗಾರರ ಗಮನವನ್ನು ತನ್ನತ್ತ ಸೆಳೆಯುವಂತೆ ಮಾಡಬೇಕು.

Story first published: Thursday, April 9, 2020, 8:53 [IST]
Other articles published on Apr 9, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+