ಕ್ರಿಕೆಟ್ ಆಡಲು ದೇಶವನ್ನೇ ತೊರೆಯಲು ಸಿದ್ಧ ಎಂದ ಶ್ರೀಶಾಂತ್

ನವದೆಹಲಿ, ಅಕ್ಟೋಬರ್ 20: ಮತ್ತೆ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಲು ಹಾತೊರೆಯುತ್ತಿರುವ ಭಾರತದ ಮಾಜಿ ವೇಗಿ ಎಸ್. ಶ್ರೀಶಾಂತ್ ದೇಶವನ್ನೇ ತೊರೆಯಲು ಮುಂದಾಗಿದ್ದಾರೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಆಜೀವ ನಿಷೇಧಕ್ಕೆ ಒಳಗಾಗಿರುವ ಕೇರಳ ವೇಗಿ ಎಸ್. ಶ್ರೀಶಾಂತ್ ಬೇರೆ ದೇಶದ ಕ್ರಿಕೆಟ್ ತಂಡದ ಪರವಾಗಿ ಆಡುವ ಸುಳಿವು ನೀಡಿದ್ದಾರೆ.
ಬಿಸಿಸಿಐ ಆಜೀವ ನಿಷೇಧವನ್ನು ಕೇರಳ ಹೈಕೋರ್ಟ್ ಎತ್ತಿ ಹಿಡಿದಿರುವುದರಿಂದ ಆಕ್ರೋಶಗೊಂಡಿರುವ ಶ್ರೀಶಾಂತ್, 'ಬಿಸಿಸಿಐ ಮಾತ್ರ ನನಗೆ ನಿಷೇಧ ಹೇರಿದೆ. ಐಸಿಸಿ ಯಾವುದೇ ನಿಷೇಧ ಹೇರಿಲ್ಲ. ಹೀಗಾಗಿ ನಾನು ಬೇರೆ ಯಾವುದೇ ದೇಶದ ಪರ ಆಡುವ ಸ್ವಾತಂತ್ರ್ಯ ಹೊಂದಿರುವುದಾಗಿ' ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿದ್ದಾರೆ.
ಬಿಸಿಸಿಐ ನನ್ನ ಮೇಲೆ ನಿಷೇಧ ಹೇರಿದೆ. ಐಸಿಸಿ ಅಲ್ಲ. ಹಾಗಾಗಿ ಯಾವುದೇ ದೇಶದ ಪರ ನಾನು ಆಡಬಲ್ಲೆ. 34ರ ಹರೆಯದ ನಾನು ಗರಿಷ್ಠ ಆರು ವರ್ಷ ಆಡುವ ಸಾಮರ್ಥ್ಯ ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.
2013ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications