|
ಭಾರತ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಗೈರುಹಾಜರಿ
ಸದ್ಯ ಭಾರತ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಅವರ ಗೈರುಹಾಜರಿ ಕಾಡುತ್ತಿದ್ದು, ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತವು ಒಬ್ಬ ಆರಂಭಿಕ ಆಟಗಾರನ ಕೊರತೆಯನ್ನು ಹೊಂದಿತ್ತು. ಆದರೆ ಶುಭಮನ್ ಗಿಲ್ ಮತ್ತು ರೋಹಿತ್ ಶರ್ಮಾ ಅವರು ಆರಂಭಿಕರಾಗಿ ಇನ್ನಿಂಗ್ಸ್ ಮೈದಾನಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೆ ಭಾರತೀಯ ನಾಯಕ ರೋಹಿತ್ ಶರ್ಮಾ ಕೋವಿಡ್ -19 ಸೋಂಕಿನಿಂದ ಬಳಲುತ್ತಿದ್ದು, ಇದು ಭಾರತ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇಂಗ್ಲೆಂಡ್ ಕೊನೆಯ ಟೆಸ್ಟ್ ಪಂದ್ಯಕ್ಕೆ ಬ್ಯಾಕ್ಅಪ್ ಬ್ಯಾಟರ್ ಆಗಿ ಮಯಾಂಕ್ ಅಗರ್ವಾಲ್ರನ್ನು ತಂಡಕ್ಕೆ ಸೇರಿಸಕೊಳ್ಳಲಾಗಿದೆ.
ಭಾರತದ ಸರಣಿಗಳಿಗೆ ಉಪ ನಾಯಕ ಕೆಎಲ್ ರಾಹುಲ್ ನಿರ್ಣಾಯಕ
ಮುಂಬರುವ ತಿಂಗಳುಗಳಲ್ಲಿ ಭಾರತದ ಸರಣಿಗಳಿಗೆ ಉಪ ನಾಯಕ ಕೆಎಲ್ ರಾಹುಲ್ ನಿರ್ಣಾಯಕರಾಗಿದ್ದಾರೆ. ಆಟದ ಎಲ್ಲಾ ಸ್ವರೂಪಗಳಲ್ಲಿ ಬ್ಯಾಟರ್ ಭಾರತೀಯ ತಂಡದ ಬೆನ್ನೆಲುಬಾಗಿದ್ದಾರೆ. ರಾಹುಲ್ ಅವರು ಅಗ್ರ ಕ್ರಮಾಂಕದಲ್ಲಿ ರೋಹಿತ್ ಶರ್ಮಾ ಜೊತೆಗೂಡಿ ಭಾರತೀಯ ಬ್ಯಾಟಿಂಗ್ ಲೈನ್-ಅಪ್ನಲ್ಲಿ ಸ್ಥಿರತೆಯನ್ನು ಮರಳಿ ತರಬೇಕಾಗಿದೆ. ಹೊಸ ಚೆಂಡಿನಲ್ಲಿ ಎದುರಾಳಿ ತಂಡಕ್ಕೆ ಪ್ರತಿದಾಳಿ ಮಾಡುವ ಶಕ್ತಿ ರಾಹುಲ್ ಮತ್ತು ರೋಹಿತ್ ಜೋಡಿಗಿದೆ.
ಮುಂದಿನ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್
ಮುಂದಿನ ಎರಡು ವಿಶ್ವಕಪ್ಗಳು ಸಾಲಾಗಿ ಇರುವುದರಿಂದ ಕೆಎಲ್ ರಾಹುಲ್ ಸಂಪೂರ್ಣ ಫಿಟ್ನೆಸ್ಗೆ ಮರಳುತ್ತಾರೆ ಮತ್ತು ಪಂದ್ಯಾವಳಿಗಳಿಗೆ ಸ್ವಲ್ಪ ಸಮಯ ನೀಡುತ್ತಾರೆ ಎಂದು ಭಾರತ ತಂಡದ ಮ್ಯಾನೇಜ್ಮೆಂಟ್ ಭಾವಿಸಿದೆ.
ಭಾರತವು ತನ್ನ ಏಕದಿನ ವಿಶ್ವಕಪ್ಗಾಗಿ ತಯಾರಿಯನ್ನು ಪ್ರಾರಂಭಿಸುವ ಮೊದಲು ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ಏಷ್ಯಾ ಕಪ್ ಮತ್ತು ಟಿ20 ವಿಶ್ವಕಪ್ ಅನ್ನು ಆಡಲು ನಿರ್ಧರಿಸಿದೆ. ಭಾರತ ತಂಡ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ 2011ರಲ್ಲಿ ಕೊನೆಯದಾಗಿ ವಿಶ್ವಕಪ್ ಗೆದ್ದಿತ್ತು. ಅದಕ್ಕೂ ಮುನ್ನ 2007ರಲ್ಲಿ ಟಿ20 ವಿಶ್ವಕಪ್ ಗೆದ್ದಿತ್ತು.
ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಸಂಭಾವ್ಯ ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹದ್ ಸಿರಾಜ್ , ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ, ಮಯಾಂಕ್ ಅಗರ್ವಾಲ್