ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೇಸ ಸರಣಿಯಲ್ಲಿ ಭಾರತ ತಂಡದ ಬೌಲರ್ ಗಳು ಹೆಚ್ಚು ಅಪಾಯಕಾರಿಯಾಗಿ ಕಾಣಿಸಿಕೊಳ್ಳುತ್ತಿಲ್ಲ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೊರತುಪಡಿಸಿದರೆ, ಮತ್ಯಾವ ಬೌಲರ್ ತಂಡಕ್ಕೆ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ಇದರ ಬೆನ್ನಲ್ಲೇ ಭಾರತದ ಮಾಜಿ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಸ್ಟಾರ್ ಆಟಗಾರನ ವಿರುದ್ಧ ಕಿಡಿ ಕಾರಿದ್ದಾರೆ.
ಸುನಿಲ್ ಗವಾಸ್ಕರ್, ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಬೌಲಿಂಗ್ನಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ಮೊಹಮ್ಮದ್ ಸಿರಾಜ್ ಅವರನ್ನು ತಂಡದಿಂದ ಕೈಬಿಡುವಂತೆ ಹೇಳಿದ್ದಾರೆ.

ಮೊಹಮ್ಮದ್ ಸಿರಾಜ್ 2021ರ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಪ್ರಸ್ತುತ ನಡೆಯುತ್ತಿರುವ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಅವರಿಂದ ಸಾಧ್ಯವಾಗುತ್ತಿಲ್ಲ. ಈವರೆಗೆ ಅವರು ಆಡಿರುವ 7 ಇನ್ನಿಂಗ್ಸ್ನಲ್ಲಿ ಕೇವಲ 13 ವಿಕೆಟ್ಗಳನ್ನು ಪಡೆದಿದ್ದಾರೆ. ಆದರೆ ಅವರು ಪಡೆದಿರುವ ವಿಕೆಟ್ಗಳ ಪೈಕಿ ಹೆಚ್ಚಿನವು ಬೌಲರ್ಗಳದ್ದೇ ಆಗಿವೆ. ಇದಷ್ಟೇ ಅಲ್ಲದೇ, ಹೊಸ ಚೆಂಡಿನೊಂದಿಗೂ ಹೇಳಿಕೊಳ್ಳುವ ಪ್ರದರ್ಶನ ನೀಡಲು ಸಿರಾಜ್ ಅವರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಜಸ್ಪ್ರೀತ್ ಬುಮ್ರಾ ಮೇಲೆ ಒತ್ತಡ ಹೆಚ್ಚುತ್ತಿದೆ. ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ.