ಇತ್ತೀಚೆಗೆ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಅತ್ಯುತ್ತಮ ಫಾರ್ಮ್ನಲ್ಲಿದ್ದು, 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ಗೆ ತಲುಪಿದೆ. ಮಾರ್ಚ್ 9 ರಂದು ನಡೆಯಲಿರುವ ಫೈನಲ್ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ತಲುಪಿದ್ದರೂ, ಟೀಮ್ ಇಂಡಿಯಾ ಬಗ್ಗೆ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯ ಸೇರಿದಂತೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಇದುವರೆಗೆ ಆಡಿದ ಎಲ್ಲಾ 4 ಪಂದ್ಯಗಳನ್ನು ಗೆದ್ದಿದೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಸುನಿಲ್ ಗವಾಸ್ಕರ್, ಚಾಂಪಿಯನ್ಸ್ ಟ್ರೋಫಿಯ ಫೈನಲ್ ತಲುಪಿದ್ದರೂ, ಭಾರತ ತಂಡ ಇನ್ನೂ 100 ಪ್ರತಿಶತ ಸಾಮರ್ಥ್ಯದಲ್ಲಿ ಪ್ರದರ್ಶನ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಟೀಮ್ ಇಂಡಿಯಾ ಆರಂಭಿಕ ಬ್ಯಾಟರ್ಗಳಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಕಳೆದ ಕೆಲವು ಪಂದ್ಯಗಳಲ್ಲಿ ರನ್ ಗಳಿಸಲು ಹೆಣಗಾಡುತ್ತಿದ್ದಾರೆ. ಭಾರತದ ಬೌಲರ್ಳು ಹೊಸ ಚೆಂಡಿನ ಮೊದಲ 10 ಓವರ್ಗಳಲ್ಲಿ ಹೆಚ್ಚಿನ ವಿಕೆಟ್ಗಳನ್ನು ಪಡೆಯುವ ಅಗತ್ಯವಿದೆ. ರನ್ಗಳ ಹರಿವನ್ನು ನಿಯಂತ್ರಿಸುತ್ತಿದ್ದರೂ, ಮಧ್ಯಮ ಓವರ್ಗಳಲ್ಲಿ ಭಾರತ ಹೆಚ್ಚು ವಿಕೆಟ್ಗಳನ್ನು ಪಡೆಯುತ್ತಿಲ್ಲ. ಈ ವಿಭಾಗಳಲ್ಲಿ ಭಾರತ ಸುಧಾರಿಸಿದರೆ ಫೈನಲ್ ಗೆಲ್ಲಬಹುದು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಟೀಮ್ ಇಂಡಿಯಾ ತನ್ನ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಬಾರದು. ಫೈನಲ್ನಲ್ಲಿ 4 ಸ್ಪಿನ್ನರ್ಗಳನ್ನು ಕಣಕ್ಕಿಳಿಸಬೇಕು. ನನ್ನ ಪ್ರಕಾರ 4 ಸ್ಪಿನ್ನರ್ಗಳು ಇರುತ್ತಾರೆ. ಇದು ಆಗಲೇಬೇಕು. ಈಗ ಈ ಬದಲಾವಣೆ ಏಕೆ? ಚಕ್ರವರ್ತಿ ಮತ್ತು ಕುಲದೀಪ್ ಅವರ ಸೇರ್ಪಡೆ ಎಷ್ಟು ಪರಿಣಾಮಕಾರಿ ಎಂದು ತೋರಿಸುತ್ತದೆ. ಅಲ್ಲದೆ, ವಿಕೆಟ್ ಟೇಕಿಂಗ್ ಚೆಂಡುಗಳು ಸೀಮಿತ ಓವರ್ ಕ್ರಿಕೆಟ್ ಅಥವಾ ಆಟದ ಯಾವುದೇ ಸ್ವರೂಪದಲ್ಲಿ ಅತ್ಯುತ್ತಮ ಡಾಟ್ ಬಾಲ್ಗಳಾಗಿವೆ. ಅದಕ್ಕಾಗಿಯೇ ಅವರು ಅದನ್ನು ಮಾಡುತ್ತಿದ್ದಾರೆ, ಆದ್ದರಿಂದ ಯಾವುದೇ ಬದಲಾವಣೆ ಇರಬಾರದು ಎಂದು ಗವಾಸ್ಕರ್ ಹೇಳಿದ್ದಾರೆ.
ಮಾರ್ಚ್ 9 ರಂದು ದುಬೈನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ನಡೆಯಲಿದೆ. ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಭಾರತ ಫೈನಲ್ ಪ್ರವೇಶಿಸಿದರೆ, ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಫೈನಲ್ಗೆ ಎಂಟ್ರಿ ಕೊಟ್ಟಿದೆ. ಭಾರತೀಯ ಕಾಲಮಾನ ಪ್ರಕಾರ 2.30 ಗಂಟೆಗೆ ಪಂದ್ಯ ಆರಂಭವಾಗಲಿದೆ.
ಸಂಭಾವ್ಯ ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.