ನವದೆಹಲಿ, ಜುಲೈ 07: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರಿಗೆ ಬೇಷರತ್ ಕ್ಷಮಾಪಣೆ ಯಾಚಿಸುವಂತೆ ಸುಪ್ರೀಂಕೋರ್ಟ್ ನ್ಯಾಯಪೀಠವು ಶುಕ್ರವಾರ(ಜುಲೈ 07)ದಂದು ಸೂಚಿಸಿದೆ.
ಕ್ಷಮಾಪಣೆ ಕೇಳದೇ ಇದ್ದರೆ ನಿಂದನೆ ಪ್ರಕರಣದ ಕುರಿತ ವಿಚಾರಣೆಯನ್ನು ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಎ.ಎಂ. ಖಾನ್ ವಿಲ್ಕರ್ ಮತ್ತು ಡಿ.ವೈ. ಚಂದ್ರಾಚೂಡ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ.
