For Quick Alerts
ALLOW NOTIFICATIONS  
For Daily Alerts
 

ಚಿಕ್ಕಬಳ್ಳಾಪುರದಲ್ಲಿ ಟಿ20 ಕ್ರಿಕೆಟ್ ಲೀಗ್; ಮತ್ತೆ ಮೈದಾನಕ್ಕೆ ಸಚಿನ್, ಯುವಿ, ಜಯಸೂರ್ಯ ಎಂಟ್ರಿ

ಚಿಕ್ಕಬಳ್ಳಾಪುರ, ಜನವರಿ 18: ಮಾನವ ಸೇವಾ ಸ್ಫೂರ್ತಿಯನ್ನು ಉತ್ತುಂಗಕ್ಕೇರಿಸುವ ಸದುದ್ದೇಶದೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಕ್ರೀಡಾಂಗಣದಲ್ಲಿ ಗುರುವಾರ, ಜನವರಿ 18ರಂದು ಟಿ20 ಕ್ರಿಕೆಟ್ ಪಂದ್ಯ ಆಯೋಜಿಸಲಾಗಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮಾಜಿ ದಿಗ್ಗಜರ ಸಮಾಗಮ ನಡೆಯಲಿದೆ.

ಸತ್ಯಸಾಯಿ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಅಂತಾರಾಷ್ಟ್ರೀಯ ಮಟ್ಟದ ಸಾಯಿಕೃಷ್ಣನ್ ಕ್ರಿಕೆಟ್ ಸ್ಟೇಡಿಯಂನಲ್ಲಿ (Saikrishnan Cricket Stadium) ಗುರುವಾರ (ಜನವರಿ 18) ಟಿ20 ಕ್ರಿಕೆಟ್ (T20 Cricket) ಟೂರ್ನಿಯನ್ನು ಆಯೋಜನೆ ಮಾಡಲಾಗಿದೆ.

T20 Cricket League In Chikkaballapur; Sachin Tendulkar, Yuvraj Singh Will Play Tournament


ಮಧುಸೂದನ ಸಾಯಿ ಜಾಗತಿಕ ಮಾನವೀಯ ಸೇವಾ ಅಭಿಯಾನದಿಂದ ಆಯೋಜಿಸಿರುವ ಒಂದು ಜಗತ್ತು - ಒಂದು ಕುಟುಂಬ (ಒನ್ ವರ್ಲ್ಡ್ - ಒನ್ ಫ್ಯಾಮಿಲಿ) ಕಪ್‌ಗಾಗಿ ನಡೆಯುವ ಪಂದ್ಯದಲ್ಲಿ ವಿಶ್ವದ ಹಲವು ರಾಷ್ಟ್ರಗಳ ಕ್ರಿಕೆಟ್ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ನೂತನವಾಗಿ ನಿರ್ಮಾಣವಾಗಿರುವ ಕ್ರಿಕೆಟ್ ಸ್ಟೇಡಿಯಂ ಕೂಡ ಉದ್ಘಾಟನೆಯಾಗಲಿದೆ.

ಈ ಸೌಹಾರ್ದಯುತ ಪಂದ್ಯಾವಳಿಯಲ್ಲಿ 8 ದೇಶಗಳ 24 ದಿಗ್ಗಜ ಆಟಗಾರರು ಎರಡು ತಂಡಗಳಾಗಿ ಕ್ರಿಕೆಟ್ ಪಂದ್ಯವಾಡಲಿದ್ದಾರೆ. ಭಾರತದ ಮೂಲ ಧ್ಯೇಯ ವ್ಯಾಕ್ಯ "ವಸುಧೈವ ಕುಟುಂಬಕಂ' ಎಂಬ ಮಾತಿಗೆ ಪ್ರತಿರೂಪವೆಂಬಂತೆ "ಒಂದು ಪ್ರಪಂಚ ಒಂದು ಕುಟುಂಬ ಕಪ್' ಎಂಬ ಹೆಸರಿನಡಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ.
T20 Cricket League In Chikkaballapur; Sachin Tendulkar, Yuvraj Singh Will Play Tournament


ನೂತನ ಸಾಯಿಕೃಷ್ಣನ್ ಸ್ಟೇಡಿಯಂ ಉದ್ಘಾಟನಾ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದೆ. ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ನೇತೃತ್ವದಲ್ಲಿ ಪಂದ್ಯಾವಳಿಗೆ ಬೇಕಾದ ಎಲ್ಲಾ ತಯಾರಿಗಳು ನಡೆದಿವೆ.

ಅಲ್ಲದೆ, ಈ ಪಂದ್ಯಾವಳಿಯಲ್ಲಿ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ್, ಸನತ್ ಜಯಸೂರ್ಯ, ಮುತ್ತಯ್ಯ ಮುರಳೀಧರನ್, ಚಮಿಂಡಾ ವಾಸ್ ಸೇರಿದಂತೆ 24 ಮಂದಿ ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟ್ ಆಟಗಾರರು ಭಾಗವಹಿಸಲಿದ್ದಾರೆ.

T20 Cricket League In Chikkaballapur; Sachin Tendulkar, Yuvraj Singh Will Play Tournament

ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರದ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಲಿದ್ದಾರೆ. ವಸುದೈವ ಕುಟುಂಬಕಂ ಸಂದೇಶ ಸಾರುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಹಾಗೂ ಯುವರಾಜ್ ಸಿಂಗ್ ನಾಯಕತ್ವದ ಎರಡು ತಂಡಗಳ ನಡುವೆ ಹೋರಾಟ ನಡೆಯಲಿದೆ.

ಸ್ಪಿನ್ನರ್‌ಗಳಾದ ಹರ್ಭಜನ್ ಸಿಂಗ್, ಮುತ್ತಯ್ಯ ಮುರಳೀಧರನ್, ವೇಗಿಗಳಾದ ಇರ್ಫಾನ್ ಪಠಾಣ್, ಚಮಿಂಡಾ ವಾಸ್, ಆರ್.ಪಿ ಸಿಂಗ್ ಅಲ್ಲದೆ ಎಡಗೈ ಸ್ಪಿನ್ನರ್ ಮಾಂಟಿ ಪನೇಸರ್, ಡ್ಯಾನಿ ಮಾರಿಸನ್, ವೆಂಕಟೇಶ್ ಪ್ರಸಾದ್ ಸೇರಿ 7 ದೇಶಗಳ ಆಟಗಾರರು ಪಾಲ್ಗೊಳ್ಳಲಿದ್ದಾರೆ.

ಒಂದು ಜಗತ್ತು - ಒಂದು ಕುಟುಂಬ ಸಂದೇಶ ಬೆಂಬಲಿಸಿ 1983ರಲ್ಲಿ ವಿಶ್ವಕಪ್ ಗೆದ್ದ ಭಾರತ ತಂಡದ ಕೆಲವು ಆಟಗಾರರು ಆಗಮಿಸುತ್ತಿರುವುದು ವಿಶೇಷವಾಗಿದೆ.

Story first published: Thursday, January 18, 2024, 11:43 [IST]
Other articles published on Jan 18, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+