ಭುವನೇಶ್ವರ್ ಕುಮಾರ್ ಆಟದಲ್ಲಿ ಈ ಹಿಂದೆ ಇದ್ದ ಪರಿಣಾಮವಿಲ್ಲ
ಭಾರತದ ಮಧ್ಯಮ ಕ್ರಮಾಂಕ ಮತ್ತು ಬೌಲಿಂಗ್ ವಿಭಾಗ ಸಮಸ್ಯೆಗಳಿಂದ ಕೂಡಿದೆ ಎಂದು ಹೇಳಿರುವ ಆಕಾಶ್ ಚೋಪ್ರಾ ಭುವನೇಶ್ವರ್ ಕುಮಾರ್ ಬೌಲಿಂಗ್ ಈ ಹಿಂದೆ ಇದ್ದಷ್ಟು ಪರಿಣಾಮಕಾರಿಯಾಗಿಲ್ಲ ಎಂದಿದ್ದಾರೆ. ಈ ಹಿಂದೆ ಗಾಯದ ಸಮಸ್ಯೆಗೊಳಗಾಗಿ ಪುನಃ ತಂಡದಲ್ಲಿ ಸ್ಥಾನ ಪಡೆದುಕೊಂಡ ಭುವನೇಶ್ವರ್ ಕುಮಾರ್ ಈ ವರ್ಷ ಆಡಿರುವ ಶ್ರೀಲಂಕಾ ವಿರುದ್ಧದ ಸರಣಿ, ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮತ್ತು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯಗಳಲ್ಲಿ ಈ ಹಿಂದೆ ನೀಡುತ್ತಿದ್ದಂತೆ ಪ್ರದರ್ಶನವನ್ನು ನೀಡಿಲ್ಲ ಎಂದು ಭುವನೇಶ್ವರ್ ಕುಮಾರ್ ಸರಿಯಾದ ಆಯ್ಕೆಯಲ್ಲ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಮೊಹಮ್ಮದ್ ಶಮಿ ಕೂಡ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ಟಿ ಟ್ವೆಂಟಿ ಪಂದ್ಯಗಳಲ್ಲಿ ನೀಡಬಲ್ಲ ಆಟಗಾರನಲ್ಲ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.
ಜಡೇಜಾ ಆಯ್ಕೆಯನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ
"ರವೀಂದ್ರ ಜಡೇಜಾ ಟಿ ಟ್ವೆಂಟಿ ಪಂದ್ಯವೊಂದರಲ್ಲಿ 4 ಓವರ್ ಬೌಲಿಂಗ್ ಮಾಡಬಲ್ಲ ಬೌಲರ್ ಆದರೆ, ವಿಕೆಟ್ ಪಡೆಯಬಲ್ಲ ಬೌಲರ್ ಅಲ್ಲ. ಹಾಗೂ ರವೀಂದ್ರ ಜಡೇಜಾ ರಾಹುಲ್ ಚಹರ್, ಯುಜುವೇಂದ್ರ ಚಾಹಲ್ ಅಥವಾ ರಶೀದ್ ಖಾನ್ ರೀತಿಯ ಬೌಲರ್ ಅಲ್ಲ" ಎಂದು ಆಕಾಶ್ ಚೋಪ್ರಾ ರವೀಂದ್ರ ಜಡೇಜಾ ಆಯ್ಕೆಯನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ವಿಭಾಗದಲ್ಲಿ ಈ ಬದಲಾವಣೆಗಳನ್ನು ತರಬೇಕಿದೆ ಎಂದು ಆಕಾಶ್ ಚೋಪ್ರಾಅಭಿಪ್ರಾಯಪಟ್ಟಿದ್ದು 5 ಬೌಲರ್ಗಳ ಕಾಂಬಿನೇಶನ್ ಹೆಚ್ಚು ಪರಿಣಾಮ ಬೀರದೆ ಇರುವ ಕಾರಣ ಮತ್ತೋರ್ವ ಬೌಲರ್ ಅಗತ್ಯತೆ ತಂಡಕ್ಕಿದೆ ಎಂದಿದ್ದಾರೆ.
ಭಾರತ vs ನ್ಯೂಜಿಲೆಂಡ್ ಪಂದ್ಯ ಯಾವಾಗ ಮತ್ತು ಎಲ್ಲಿ?
ಪ್ರಸಕ್ತ ಸಾಲಿನ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 28ನೇ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಾಟ ನಡೆಸಲಿದ್ದು ಈ ಪಂದ್ಯ ಅಕ್ಟೋಬರ್ 31ರ ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.