ಐಪಿಎಲ್ ಆಡಿದ್ದರಿಂದ ಯಾವುದೇ ತೊಂದರೆಯಿಲ್ಲ
"ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಿ ನಂತರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಡುತ್ತಿರುವುದರಿಂದ ಯಾವುದೇ ರೀತಿಯ ತೊಂದರೆಗಳಿಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ವಿಶ್ವದ ಹಲವಾರು ಕ್ರಿಕೆಟಿಗರು ಭಾಗವಹಿಸುವುದರಿಂದ ಆಟಗಾರರಿಗೆ ಉತ್ತಮ ಅಭ್ಯಾಸ ಸಿಕ್ಕಂತಾಗಲಿದೆ. ಹೀಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಅಭ್ಯಾಸವನ್ನು ಪಡೆದುಕೊಂಡು ತದನಂತರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುವುದರಿಂದ ತಂಡದ ಪ್ರದರ್ಶನದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ" ಎಂದು ವಿಕ್ರಂ ರಾಥೋರ್ ತಿಳಿಸಿದ್ದಾರೆ.
ಭಾರತದ ವಿಫಲತೆಗೆ ಕಾರಣ ಬಿಚ್ಚಿಟ್ಟ ವಿಕ್ರಂ ರಾಥೋರ್
ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಹೀನಾಯ ಸೋಲನ್ನು ಅನುಭವಿಸಿತು, ತದನಂತರ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿಯೂ ಕೂಡ ಸೋಲುಂಡಿತು. ಹೀಗೆ ಟೀಂ ಇಂಡಿಯಾದ ಸತತ 2 ಸೋಲಿನ ಕುರಿತು ಮಾತನಾಡಿರುವ ವಿಕ್ರಂ ರಾಥೋರ್ ಆ ಸೋಲುಗಳಿಗೆ ಕಾರಣವಾದ ಅಂಶವನ್ನು ಕೂಡ ಬಿಚ್ಚಿಟ್ಟಿದ್ದಾರೆ. "ಕೊನೆಯ 2 ಪಂದ್ಯಗಳಲ್ಲಿ ತಂಡದ ಕಳಪೆ ಪ್ರದರ್ಶನಕ್ಕೆ ಕಾರಣವಾದದ್ದು ನಾವು ನಮ್ಮ ಯೋಜನೆಗಳನ್ನು ಜಾರಿಗೆ ತರದೇ ಇದ್ದದ್ದೇ ಹೊರತು ನಮ್ಮ ತಂಡದ ತಯಾರಿಯಲ್ಲ" ಎಂದು ವಿಕ್ರಂ ರಾಥೋರ್ ಅಭಿಪ್ರಾಯಪಟ್ಟಿದ್ದಾರೆ.
ಇನ್ನೊಂದು ಪಂದ್ಯ ಸೋತರೂ ಭಾರತಕ್ಕಿಲ್ಲ ಸೆಮಿಫೈನಲ್ ಪ್ರವೇಶ!
ಟೂರ್ನಿಯಲ್ಲಿ ಈಗಾಗಲೇ 2 ಪಂದ್ಯಗಳನ್ನು ಸೋತಿರುವ ಟೀಮ್ ಇಂಡಿಯಾ ಇನ್ನೂ 3 ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ. ಈ 3 ಪಂದ್ಯಗಳ ಪೈಕಿ ಯಾವುದಾದರೊಂದು ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತರೂ ಸೆಮಿಫೈನಲ್ ಪ್ರವೇಶಿಸುವ ರೇಸ್ನಿಂದ ಅಧಿಕೃತವಾಗಿ ಹೊರಬೀಳಲಿದೆ.