ಟೂರ್ನಿಯಲ್ಲಿ ಈತನೇ ಭಾರತ ತಂಡದ ಪ್ರಮುಖ ಅಸ್ತ್ರ
"ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವರುಣ್ ಚಕ್ರವರ್ತಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಮಿಂಚಲಿದ್ದಾರೆ. ಅದರಲ್ಲಿಯೂ ಟೂರ್ನಿಯಲ್ಲಿ ಭಾರತ ತಂಡದ ಪರ ಉತ್ತಮ ಪ್ರದರ್ಶನ ನೀಡಬಲ್ಲ ಅಸ್ತ್ರವೆಂದರೆ ಅದು ಜಸ್ಪ್ರೀತ್ ಬೂಮ್ರಾ ಮಾತ್ರ" ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.
"ಈ ಬಾರಿಯ ಟೂರ್ನಿಯಲ್ಲಿ ಬೌಲಿಂಗ್ನಲ್ಲಿ ವರುಣ್ ಚಕ್ರವರ್ತಿ ಮಿಂಚುವುದರಲ್ಲಿ ಯಾವುದೇ ಅನುಮಾನವಿಲ್ಲ, ಆತ ಅಗ್ರ ಫಾರ್ಮ್ ಹೊಂದಿದ್ದು ಖಂಡಿತವಾಗಿಯೂ ಒಳ್ಳೆಯ ಪ್ರದರ್ಶನವನ್ನು ನೀಡಲಿದ್ದಾರೆ. ಆದರೆ ನನ್ನ ಪ್ರಕಾರ ಬೌಲಿಂಗ್ನಲ್ಲಿ ಭಾರತ ತಂಡದ ಪರ ಅಸ್ತ್ರವಾಗಿ ನಿಲ್ಲುವ ಏಕೈಕ ಬೌಲರ್ ಎಂದರೆ ಅದು ಜಸ್ಪ್ರೀತ್ ಬೂಮ್ರಾ ಮಾತ್ರ" ಎಂದು ಗೌತಮ್ ಗಂಭೀರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟ್ರೋಫಿ ಗೆಲ್ಲುವತ್ತ ವಿರಾಟ್ ಕೊಹ್ಲಿ ಕಣ್ಣಿಟ್ಟಿದ್ದಾರೆ
ವರುಣ್ ಚಕ್ರವರ್ತಿ ಮತ್ತು ಜಸ್ಪ್ರೀತ್ ಬುಮ್ರಾ ಕುರಿತು ವಿಶೇಷವಾಗಿ ಮಾತನಾಡಿದ ಗೌತಮ್ ಗಂಭೀರ್ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕುರಿತಾಗಿಯೂ ತಮ್ಮ ಪಾಲಿನ ಅಭಿಪ್ರಾಯವನ್ನು ತಿಳಿಸಿದ್ದಾರೆ. "ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಟ್ರೋಫಿ ಗೆಲ್ಲುವತ್ತ ಕಣ್ಣಿಟ್ಟಿದ್ದಾರೆ. ಕೊಹ್ಲಿ ಮಾತ್ರವಲ್ಲ 14 ವರ್ಷಗಳಿಂದ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿ ಗೆಲ್ಲದೇ ಇರುವ ಕಾರಣ ಇಡೀ ತಂಡ ಈ ಬಾರಿಯ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳುವ ಗುರಿಯನ್ನು ಹೊಂದಿದೆ" ಎಂದು ಗಂಭೀರ್ ಹೇಳಿಕೆ ನೀಡಿದ್ದಾರೆ.
ಎಂಎಸ್ ಧೋನಿ ಮೆಂಟರ್ ಆಗಿರುವುದು ಟೀಮ್ ಇಂಡಿಯಾಕ್ಕೆ ಪ್ಲಸ್ ಪಾಯಿಂಟ್
ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸಲುವಾಗಿ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ಮಾರ್ಗದರ್ಶಕರನ್ನಾಗಿ ನೇಮಿಸಲಾಗಿದೆ. ಈ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಗೌತಮ್ ಗಂಭೀರ್ ಇದೇ ಮೊದಲ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಯುವ ಆಟಗಾರರಿಗೆ ಎಂಎಸ್ ಧೋನಿ ಅವರ ಮಾರ್ಗದರ್ಶನ ನೆರವಿಗೆ ಬರಲಿದೆ, ಹಲವಾರು ವಿಶ್ವಕಪ್ ಟೂರ್ನಿಗಳಲ್ಲಿ ಆಡಿರುವ ಅನುಭವವನ್ನು ಹೊಂದಿರುವ ಎಂ ಎಸ್ ಧೋನಿ ತಮ್ಮ ಅನುಭವಗಳನ್ನು ಆ ಯುವ ಆಟಗಾರರ ಜೊತೆ ಹಂಚಿಕೊಳ್ಳುವುದು ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.