ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ತಂಡ ಅತ್ಯುತ್ತಮ ಆರಂಭವನ್ನು ಪಡೆದುಕೊಳ್ಳುವುದರ ಮೂಲಕ ಸೂಪರ್ 12 ಗ್ರೂಪ್ 2ರ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 2 ಪಂದ್ಯಗಳನ್ನಾಡಿರುವ ಪಾಕಿಸ್ತಾನ ಎರಡೂ ಪಂದ್ಯಗಳಲ್ಲಿಯೂ ಗೆಲ್ಲುವುದರ ಮೂಲಕ ತನ್ನ ಸೆಮಿಫೈನಲ್ ಹಾದಿಯನ್ನು ಸುಗಮವಾಗಿಸಿಕೊಂಡಿದೆ.
ಪಾಕ್ ವಿರುದ್ಧ ಭಾರತ ಸೋತ ಬಳಿಕ ವಿರೇಂದ್ರ ಸೆಹ್ವಾಗ್ ಪ್ರಕಾರ ಈ ಬಾರಿ ಟ್ರೋಫಿ ಗೆಲ್ಲಲಿರುವ ತಂಡವಿದು
ಇತ್ತ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನಡೆದ ಅಭ್ಯಾಸ ಪಂದ್ಯಗಳಲ್ಲಿ ಮಿಂಚಿದ ಟೀಮ್ ಇಂಡಿಯಾ ಸೂಪರ್ 12 ಹಂತದ ತನ್ನ ಮೊದಲನೇ ಪಂದ್ಯದಲ್ಲಿಯೇ ಬದ್ಧ ಎದುರಾಳಿಯಾದ ಪಾಕಿಸ್ತಾನದ ವಿರುದ್ಧ ಸೋಲುವುದರ ಮೂಲಕ ಕಳಪೆ ಆರಂಭವನ್ನು ಪಡೆದುಕೊಂಡಿದೆ. ಅತ್ತ ಅಕ್ಟೋಬರ್ 26ರ ಮಂಗಳವಾರದಂದು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಸೂಪರ್ 12 ಹಂತದ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನದ ಜೊತೆ ಸೆಣಸಾಡಿದ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ಕೂಡ ಸೋಲನುಭವಿಸುವುದರ ಮೂಲಕ ಟೂರ್ನಿಯಲ್ಲಿ ನೀರಸ ಆರಂಭವನ್ನು ಪಡೆದುಕೊಂಡಿದೆ.
'ವಿಷಯ ತಿಳಿಯದೇ ಮಾತನಾಡಬೇಡಿ'; ಮಂಡಿಯೂರಲು ನಿರಾಕರಿಸಿದ್ದರ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಡಿ ಕಾಕ್
ಹೀಗೆ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ತಮ್ಮ ಚೊಚ್ಚಲ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳೆರಡೂ ಪಾಕಿಸ್ತಾನ ವಿರುದ್ಧ ಸೋತಿದ್ದು ಅಕ್ಟೋಬರ್ 31ರ ಭಾನುವಾರದಂದು ತಮ್ಮ ನಡುವೆ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಹೌದು, ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯದಲ್ಲಿ ಸೋಲುವ ತಂಡ ಸೆಮಿಫೈನಲ್ ರೇಸ್ನಿಂದ ಬಹುತೇಕ ಹೊರಬಿದ್ದಂತಾಗಲಿದ್ದು ಟೀಮ್ ಇಂಡಿಯಾ ಗೆಲ್ಲಲೇಬೇಕಾಗಿದೆ. ಹೀಗಾಗಿ ಟೀಮ್ ಇಂಡಿಯಾದ ಹಲವಾರು ಮಾಜಿ ಕ್ರಿಕೆಟಿಗರು ಈ ಪಂದ್ಯದ ಕುರಿತು ಮಾತನಾಡುತ್ತಿದ್ದು ತಂಡದಲ್ಲಿ ಕೆಲ ಬದಲಾವಣೆಗಳು ಆಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದರಂತೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ತಮ್ಮ ಅಭಿಪ್ರಾಯ ತಿಳಿಸಿದ್ದು, ಈ ಕೆಳಕಂಡಂತೆ ಸಲಹೆ ನೀಡಿದ್ದಾರೆ.
{photo-feature}