ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡಮಟ್ಟದ ಸದ್ದು ಮಾಡುತ್ತಿರುವ ವಿಷಯವೆಂದರೆ ಅದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆಯಲಿರುವ ಮಹತ್ವದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯ. ಹೌದು, ಸುಮಾರು ವರ್ಷಗಳ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ವಿಶ್ವಕಪ್ ಹಣಾಹಣಿ ಏರ್ಪಟ್ಟಿದ್ದು ದೊಡ್ಡ ಮಟ್ಟದ ಕುತೂಹಲವನ್ನು ಹುಟ್ಟುಹಾಕಿದೆ.
ಟಿ20 ವಿಶ್ವಕಪ್: ನೀಡಿದ್ದು ಕೇವಲ 2 ರನ್, ಪಡೆದದ್ದು 4 ವಿಕೆಟ್!; ಚಾಂಪಿಯನ್ಸ್ ಬೆವರಿಳಿಸಿದ ಇಂಗ್ಲೆಂಡ್ ಬೌಲರ್
ಇನ್ನು ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ನಿನ್ನೆಯಿಂದ ( ಅಕ್ಟೋಬರ್ 23 ) ಆರಂಭವಾಗಿದ್ದು, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಮಹತ್ವದ ಪಂದ್ಯ ಇಂದು ( ಅಕ್ಟೋಬರ್ 24 ) ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯವೆಂದರೆ ಎಲ್ಲಿಲ್ಲದ ನಿರೀಕ್ಷೆ ಮತ್ತು ಕುತೂಹಲಗಳು ಹುಟ್ಟಿಕೊಳ್ಳುತ್ತವೆ. ಈ ಎರಡೂ ತಂಡಗಳ ನಡುವಿನ ಸಾಮಾನ್ಯ ಸರಣಿಯ ಪಂದ್ಯವೆಂದರೆ ಸಾಕು ಸಾಕಷ್ಟು ಚರ್ಚೆಗಳು ಆ ಕುರಿತಾಗಿ ನಡೆಯುತ್ತವೆ. ಹೀಗಿರುವಾಗ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿ ಎಂದರೆ ಆ ಚರ್ಚೆ ಎಷ್ಟರಮಟ್ಟಿಗೆ ತಲುಪಲಿದೆ ಎಂದರೆ ಕ್ರಿಕೆಟ್ ದಿಗ್ಗಜರೆಲ್ಲರೂ ಆ ಪಂದ್ಯದ ಕುರಿತಾಗಿ ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ವ್ಯಕ್ತಪಡಿಸಲು ಆರಂಭಿಸುತ್ತಾರೆ.
ಟಿ20 ವಿಶ್ವಕಪ್: ಟ್ರೋಫಿ ಗೆಲ್ಲುವ ತಂಡಕ್ಕೆ, ಫೈನಲ್ ಮತ್ತು ಸೆಮಿಫೈನಲ್ ಸೋತವರಿಗೂ ಸಿಗಲಿದೆ ಭಾರೀ ಹಣ!
ಹೀಗೆ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆಯಲಿರುವ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯದ ಕುರಿತು ಈಗಾಗಲೇ ಹಲವಾರು ಮಾಜಿ ಕ್ರಿಕೆಟಿಗರು ಮಾತನಾಡಿದ್ದು ತಮ್ಮ ಪಾಲಿನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಈ ಸಾಲಿಗೆ ಭಾರತದ ಮಾಜಿ ನಾಯಕ ಕಪಿಲ್ ದೇವ್ ಕೂಡ ಸೇರಿಕೊಂಡಿದ್ದು ಯಾವ ತಂಡ ಪಂದ್ಯವನ್ನು ಗೆಲ್ಲಲಿದೆ ಎಂಬುದರ ಕುರಿತು ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.
{photo-feature}