
ಹಾರ್ದಿಕ್ ಆಡದಿದ್ದರೆ ಶಾರ್ದೂಲ್ ಠಾಕೂರ್
"ಸದ್ಯ ಎಲ್ಲರನ್ನು ಕಾಡುತ್ತಿರುವ ಪ್ರಶ್ನೆ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡಲಿದ್ದಾರಾ ಎಂಬುದು. ಫಿನಿಶಿಂಗ್ ಮಾಡುವ ಸಾಮರ್ಥ್ಯವನ್ನು ಹಾರ್ದಿಕ್ ಪಾಂಡ್ಯ ಈಗಲೂ ಹೊಂದಿದ್ದಾರಾ ಎಂಬ ಗೊಂದಲ ಕಾಡುತ್ತಿದೆ. ಇದಕ್ಕೆಲ್ಲಾ ಹಾರ್ದಿಕ್ ಪಾಂಡ್ಯ ತಯಾರಿದ್ದರೆ ಯಾವುದೇ ಸಮಸ್ಯೆಯಿಲ್ಲ. ಒಂದುವೇಳೆ ಹಾರ್ದಿಕ್ ಪಾಂಡ್ಯ ಸಜ್ಜಾಗಿಲ್ಲ ಎಂದರೆ ಅವರ ಬದಲು ಶಾರ್ದೂಲ್ ಠಾಕೂರ್ ಕಣಕ್ಕಿಳಿಯಲು ಸರಿಯಾದ ಆಯ್ಕೆಯಾಗಿದ್ದಾರೆ" ಎಂದು ಇರ್ಫಾನ್ ಪಠಾಣ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾರ್ದೂಲ್ ಠಾಕೂರ್ ಜೊತೆ ಮತ್ತೋರ್ವ ಬೌಲರ್ ಬೇಕು
ಇನ್ನೂ ಮುಂದುವರಿದು ಮಾತನಾಡಿರುವ ಇರ್ಫಾನ್ ಪಠಾಣ್ ಶಾರ್ದೂಲ್ ಠಾಕೂರ್ ಆಯ್ಕೆಯಾದರೆ ಮತ್ತೋರ್ವ ಬೌಲರ್ ಅಗತ್ಯತೆ ತಂಡಕ್ಕೆ ಬೀಳಲಿದೆ ಎಂದಿದ್ದಾರೆ. ಹೀಗಾಗಿ ಶಾರ್ದೂಲ್ ಠಾಕೂರ್ ಜತೆಗೆ ರವಿಚಂದ್ರನ್ ಅಶ್ವಿನ್ ಅವರಿಗೂ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವ ಅವಕಾಶವನ್ನು ನೀಡಬೇಕೆಂದು ಇರ್ಫಾನ್ ಪಠಾಣ್ ಸಲಹೆ ನೀಡಿದ್ದಾರೆ.

18 ವರ್ಷದ ಈ ಸೋಲಿನ ಸರಪಳಿಗೆ ಬ್ರೇಕ್ ಬೀಳುತ್ತಾ?
ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಹಾಗೂ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿ ಸುಗಮವಾಗಲಿದೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತ ಸುಲಭವಾಗಿ ಗೆಲ್ಲಲಿದೆ ಎಂಬುದನ್ನು ಹೇಳುವುದು ಕಷ್ಟ. ಏಕೆಂದರೆ ಭಾರತ ನ್ಯೂಜಿಲೆಂಡ್ ವಿರುದ್ಧ ಐಸಿಸಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೆದ್ದು 18 ವರ್ಷಗಳೇ ಕಳೆದಿವೆ. ಹೌದು 2003ರಲ್ಲಿ ನಡೆದಿದ್ದ ಐಸಿಸಿ ಪಂದ್ಯಾವಳಿಯ ಪಂದ್ಯವೊಂದರಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ ಸೋಲಿಸಿತ್ತು. ಇದಾದ ನಂತರ ನಡೆದ ಯಾವುದೇ ಐಸಿಸಿ ಪಂದ್ಯಾವಳಿಯ ಪಂದ್ಯದಲ್ಲಿಯೂ ನ್ಯೂಜಿಲೆಂಡ್ ತಂಡವನ್ನು ಭಾರತ ಸೋಲಿಸಿಲ್ಲ.


Click it and Unblock the Notifications












