ಸೆಹ್ವಾಗ್ ಪ್ರಕಾರ ಟ್ರೋಫಿ ಗೆಲ್ಲಲಿರುವ ತಂಡವಿದು
"ನನ್ನ ಪ್ರಕಾರ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಟ್ರೋಫಿಯನ್ನು ಗೆಲ್ಲಲಿದೆ. ಮುಂದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಉತ್ತಮ ಕ್ರಿಕೆಟ್ ಆಡಬೇಕಿದೆ. ಟೀಮ್ ಇಂಡಿಯಾ ಉತ್ತಮ ಪ್ರದರ್ಶನವನ್ನು ನೀಡಿ ಟ್ರೋಫಿ ಗೆಲ್ಲಲಿದೆ ಎನ್ನುವ ನಂಬಿಕೆ ನನಗಿದೆ" ಎಂದು ವಿರೇಂದ್ರ ಸೆಹ್ವಾಗ್ ಭರವಸೆ ವ್ಯಕ್ತಪಡಿಸಿದ್ದಾರೆ.
ಗೆದ್ದಾಗ ಮಾತ್ರವಲ್ಲ ಸೋತಾಗಲೂ ನಮ್ಮ ತಂಡಕ್ಕೆ ಬೆಂಬಲ ನೀಡಬೇಕು
"ನಮ್ಮ ಟೀಮ್ ಇಂಡಿಯಾ ಗೆದ್ದಾಗಲೆಲ್ಲಾ ನಾವು ಅವರಿಗೆ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ. ಅದೇ ರೀತಿ ಟೀಮ್ ಇಂಡಿಯಾ ಸೋತಾಗಲೂ ಸಹ ಅವರ ಬೆನ್ನಿಗೆ ನಿಲ್ಲಬೇಕು" ಎಂದು ಹೇಳಿಕೆಯನ್ನು ನೀಡುವುದರ ಮೂಲಕ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಸೋತ ನಂತರ ಭಾರತ ತಂಡ ಮತ್ತು ಅದರ ಆಟಗಾರರನ್ನು ನಿಂದಿಸುತ್ತಿರುವವರಿಗೆ ವಿರೇಂದ್ರ ಸೆಹ್ವಾಗ್ ತಿಳಿ ಹೇಳಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲೇಬೇಕು
ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋತಿದ್ದು ಮುಂಬರಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಈ ಎರಡೂ ತಂಡಗಳ ನಡುವೆ ನಡೆಯಲಿರುವ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆಯೋ ಆ ತಂಡಕ್ಕೆ ಸೆಮಿಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವ ಅವಕಾಶಗಳು ಹೆಚ್ಚಿರಲಿವೆ. ಹೀಗಾಗಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 31ರಂದು ನಡೆಯಲಿರುವ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.